Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...