Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...