Homeಅಂಕಣಗಳುಶುರುವಾಗಿದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕುವ ಕೆಲಸ

ಶುರುವಾಗಿದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕುವ ಕೆಲಸ

- Advertisement -
- Advertisement -

ಸಂಪಾದಕೀಯ |

ಚಳಿಗಾಲ ಮುಗಿದು ತಾಪಮಾನ ಏರುತ್ತಿರುವ ಜತೆಗೇ ಲೋಕಸಭಾ ಚುನಾವಣೆಯ ಬಿಸಿಯೂ ಸೇರಿ ವಾತಾವರಣದ ಶಾಖ ಏರುತ್ತಲಿದೆ. ರಾಜಕಾರಣಿಗಳ ಪ್ರತಿ ನಡೆಯೂ ಆಗಲೇ ಈ ಚುನಾವಣೆಗಳ ಮೇಲೆ ಕಣ್ಣಿಟ್ಟುಕೊಂಡೇ ಜರುಗುತ್ತಲಿದೆ. ಆದರೆ ಈ ಚುನಾವಣೆ ಹಿಂದಿನಂಥದ್ದಲ್ಲ. ಇದು ಈ ದೇಶದ ಪ್ರಜಾತಂತ್ರ ಮತ್ತು ಅದಕ್ಕೆ ಅಡಿಪಾಯವಾಗಿರುವ ಸಂವಿಧಾನವನ್ನು ಜನಸಾಮಾನ್ಯರು ಉಳಿಸಿಕೊಳ್ಳುತ್ತಾರೆಯೋ ಅಥವಾ ಮತ್ತೊಮ್ಮೆ ಹಿಂದುತ್ವ ಫ್ಯಾಸಿಸಂಗೆ ಮೇಲುಗೈ ಆಗುತ್ತದೋ ಎಂಬ ನಿರ್ಣಾಯಕ ಚುನಾವಣೆ ಇದಾಗಲಿದೆ. ಅದಕ್ಕಿಂತಲೂ ಹೆಚ್ಚಾಗಿ ಜನಸಾಮಾನ್ಯರ ಬವಣೆಗೆ ಈಗಲಾದರೂ ಕಿಂಚಿತ್ ಸಮಾಧಾನ ಸಿಗಬಹುದೋ ಎಂಬ ಕಾತರವೂ ಇದೆ. ಇದೇ ಆಶಯದಿಂದ ಈ ದೇಶದ ಜನ ಹಣ-ಹೆಂಡ, ಜಾತಿ ಇತ್ಯಾದಿ ಆಮಿಷಗಳ ನಡುವೆಯೂ ಅಧಿಕಾರರೂಢ ಪಕ್ಷಗಳ ವಿರುದ್ಧ ಮತ ಚಲಾಯಿಸುತ್ತಲೇ ಬಂದಿದ್ದಾರೆ. ಇದಕ್ಕೆ ಮೊನ್ನೆ ನಡೆದ ಉಪಚುನಾವಣೆಯಲ್ಲಿ ಆಳುವ ಪಕ್ಷ ಅನುಭವಿಸಿದ ಸೋಲೇ ಸಾಕ್ಷಿ. ಉಪಚುನಾವಣೆಯ ಫಲಿತಾಂಶ ಮಹಾ ಚುನಾವಣೆಯ ಭವಿಷ್ಯವನ್ನು ನಿರ್ಧರಿಸದಿದ್ದರೂ, ಅದು ಜನರ ಆಲೋಚನೆಯ ದಿಕ್ಕನ್ನು ಸೂಚಿಸುವಂತಿರುತ್ತದೆ. ಉದಾಹರಣೆಗೆ, ಉಪಚುನಾವಣೆಗಳ ಫಲಿತಾಂಶ ಭಾಜಪದ ದರ್ಪವನ್ನೂ, ಆತ್ಮವಿಶ್ವಾಸವನ್ನೂ ಕೊಂಚ ಕುಗ್ಗಿಸಿರುವುದು ನಿಜ. ಆದರೆ ಇದರಿಂದ ವಿರೋಧ ಪಕ್ಷಗಳು ಸಂಭ್ರಮಿಸುವ ಹಾಗೇನೂ ಇಲ್ಲ. ಆಳುವ ಪಕ್ಷಗಳ ಮೇಲಿನ ಅಸಮಾಧಾನವನ್ನು ಜನ ಹೊರಹಾಕಿದ್ದಾರೆ ಅಷ್ಟೆ. ಹಾಗೆ ನೋಡಿದರೆ ಭಾರತದ ಮತದಾರರು ತುರ್ತು ಪರಿಸ್ಥಿತಿ ನಂತರ, ಕೆಲವು ಅಪವಾದಗಳನ್ನು ಹೊರತುಪಡಿಸಿ, ನಿರಂತರವಾಗಿ ಅಧಿಕಾರ ವಿರೋಧಿ ನಿಲುವನ್ನು ಪ್ರಕಟಿಸುತ್ತಲೇ ಬಂದಿದ್ದಾರೆ. ನಮ್ಮ ಚುನಾವಣೆಯ ಸ್ವರೂಪದಲ್ಲೇ ಆಯ್ಕೆಗಳು ತೀರಾ ಮಿತವಾಗಿರುವುದರಿಂದ ಪ್ರತಿ ಬಾರಿಯೂ ಅಧಿಕಾರದಲ್ಲಿ ಇಲ್ಲದ ಪಕ್ಷಗಳು ಮತ್ತೇ ಆಯ್ಕೆ ಆಗುತ್ತಲಿವೆ.
ಈ ಅಧಿಕಾರ ವಿರೋಧಿ ನಿಲುವು ಏನನ್ನೂ ಸೂಚಿಸುತ್ತದೆ? ಅಧಿಕಾರಕ್ಕೆ ಬಂದ ಪ್ರತಿ ಪಕ್ಷವೂ ಜನರನ್ನು ಮೋಸಗೊಳಿಸಿದೆ. ಹೀಗೆ ಮೋಸ ಹೋಗುತ್ತಿದ್ದರೂ, ಜನ ಸಿನಿಕರಾಗದೆ ತಮ್ಮ ಸೀಮಿತ ಆಯ್ಕೆಯನ್ನು ನಿರಂತರವಾಗಿ ತೋರಿಸುತ್ತಲೇ ಇದ್ದಾರೆ. ಅಂದರೆ, ಜನ ಬದಲಾವಣೆ ಬಯಸುತ್ತಿದ್ದಾರೆ, ಆದರೆ ಜನರಿಗೆ ಬೇಕಾದ ಬದಲಾವಣೆಯ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಈ ಪಕ್ಷಗಳಿಗೆ ಒಂದು ಸಾಧ್ಯವಾಗುತ್ತಿಲ್ಲ; ಅಥವಾ ಅದು ತಿಳಿದಿದ್ದರೂ ಅವರಿಗೆ ಈ ಬದಲಾವಣೆಗಳನ್ನು ತರಲು ಮನಸ್ಸಿಲ್ಲ. ಇನ್ನೂ ಮುಖ್ಯವಾಗಿ ನವಉದಾರೀಕರಣದಿಂದ ಹೊರಬರುವ ತನಕ ಜನಪರ ಬದಲಾವಣೆ ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ಕೆಲವು ಜನಪ್ರಿಯ ಕಲ್ಯಾಣಯೋಜನೆಗಳನ್ನು ಮಾತ್ರ ಮುಂದಿಟ್ಟು ಅದೇ ಬದಲಾವಣೆ ಎಂಬಂತೆ ಜನರನ್ನು ಮರಳು ಮಾಡುವುದು ಎಲ್ಲ ಪಕ್ಷಗಳ ಚಾಳಿಯಾಗಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಗೆ ಹೋಲಿಸಿದರೆ ಇದರಲ್ಲಿ ಬಿಜೆಪಿ ಕೊಂಚ ಭಿನ್ನ ಮತ್ತು ಹೆಚ್ಚು ಅಪಾಯಕಾರಿ. ಅದು ತನ್ನ ಹಿಂದುತ್ವ ಫ್ಯಾಸಿಸಂ ಮೂಲಕ ಹೊಸ “ಹಿಂದೂ ನಾಗರಿಕತೆ”ಯನ್ನು ಕಟ್ಟುವ ಆಮಿಷವನ್ನು ಮುಂದಿಡುತ್ತದೆ. ರಾಮಮಂದಿರ ಕಟ್ಟುವುದು ಅದರ ಪ್ರಕಾರ ಈ ನಾಗರಿಕತೆಯ ಭಾಗ. ಆದರೆ ಮೊನ್ನೆಯ ಚುನಾವಣೆಗಳು ಭಾಜಪದ ಈ ಯೋಜನೆಗೆ ಸೊಪ್ಪು ಹಾಕಿಲ್ಲ. ಅವರಿಗೆ ಏರುತ್ತಿರುವ ನಿರುದ್ಯೋಗ, ಹಣದುಬ್ಬರ, ಜಿ.ಎಸ್.ಟಿ ಮತ್ತು ನೋಟು ಅಮಾನ್ಯೀಕರಣದಿಂದಾದ ತೊಂದರೆ, ಕೃಷಿ ಬಿಕ್ಕಟ್ಟು ಇತ್ಯಾದಿ ಹಾರ್ಡ್‍ಕೋರ್ ಆರ್ಥಿಕ ಕಾರಣಗಳೇ ಮುಖ್ಯವಾಗಿವೆ. ಹೀಗಾಗಿ ರಾಮಮಂದಿರದ ವಿಚಾರ ಕೊಂಚ ಮಟ್ಟಿಗೆ ತನ್ನ ಅಪೀಲನ್ನು ಕಳೆದುಕೊಂಡಿದೆ. ಮೋದಿಯ ವಾಗ್ಝರಿ ಕೂಡ ತನ್ನ ಮೋಡಿಯನ್ನು ಕಳೆದುಕೊಳ್ಳುತ್ತಿದೆ. ಇದರಿಂದ ಕಂಗಾಲಾಗಿರುವ ಮೋದಿ ಈ ಚುನಾವಣೆಯನ್ನು ಸುಭದ್ರ (ಮಜ್ಬೂರ್) ಮತ್ತು ಅಸಹಾಯಕ (ಮಜ್ದೂರ್) ಸರ್ಕಾರದ ನಡುವಿನ ಆಯ್ಕೆ ಎಂದಿದ್ದಾರೆ. ಆದರ ಹಿಂದೆಯೇ ತಮ್ಮ ಪಕ್ಷ ತನ್ನ ಎಲ್ಲ ಹಳೆಯ ಗೆಳೆಯರನ್ನು ಸ್ವಾಗತಿಸುತ್ತದೆ ಎಂದು ಕೂಡ ಹೇಳಿದ್ದಾರೆ. ಇದು ಈ ಬಾರಿ ತಮಗೆ ಭಾರಿ ಬಹುಮತ ಸಿಗಲಾರದು ಎನ್ನುವುದನ್ನು ಬಿಜೆಪ ಈಗಾಗಲೇ ಒಪ್ಪಿಕೊಂಡ ಹಾಗಿದೆ. ಹೀಗಾಗಿ ಈ ಬಾರಿ ಸಮ್ಮಿಶ್ರ ಸರ್ಕಾರ ಹೆಚ್ಚು ಸಂಭವನೀಯ. ಇದು ಕೂಡ ಜನರ ಭ್ರಮನಿರಸನದ ಆಯ್ಕೆಯ ಪ್ರತೀಕವೇ ಹೌದು.
ಇದರಿಂದ ಹೊರಹೊಮ್ಮುವ ಪಾಠಗಳೇನು?
ಮೊದಲಿಗೆ, ಹಿಂದುತ್ವ, ಕೋಮುವಾದ, ರಾಮಮಂದಿರ…. ಇತ್ಯಾದಿ ಭಾವನಾತ್ಮಕ ಅಂಶಗಳು ಜನರಿಗೆ ಬೇಕಾದ ನೆಮ್ಮದಿಯ ಬದುಕು, ಭದ್ರತೆಗಳನ್ನು ನೀಡಲಾಗದು ಎಂಬ ಅರಿವು. ಇದು ಸ್ಪಷ್ಟವಾಗಿ ಗೋಚರವಾಗದಿದ್ದರೂ, ಆಳದಲ್ಲಿ ಕೆಲಸ ಮಾಡಿರುವುದು ನಿಜ. ಹಾಗೆಯೇ, ಈ ದೇಶ ಎದುರಿಸುತ್ತಿರುವ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಅಭದ್ರತೆ, ಶಿಕ್ಷಣ ಮತ್ತು ಆರೋಗ್ಯ ಮುಂತಾದ ಸಾರ್ವಜನಿಕ ಸೇವೆಗಳು ದುರ್ಲಭವಾಗಿರುವುದು ಇನ್ನೊಂದು. ಮೇಲಾಗಿ, ಅಸಂಘಟಿತ ಕಾರ್ಮಿಕರ, ಮಹಿಳೆ, ದಲಿತ ಮತ್ತು ಇತರೆ ಅಲ್ಪಸಂಖ್ಯಾತರ ಆತಂಕ ಇತ್ಯಾದಿ ವಿಷಯಗಳಿಗೆ ಬೇಕಾದ ಸೂಕ್ತ ಪರಿಹಾರ ಮಾರ್ಗಗಳು ಯಾವ ರಾಜಕೀಯ ಪಕ್ಷದಲ್ಲೂ ಇಲ್ಲ ಎಂಬ ಸತ್ಯ.
ಮುಂದಿನ ಚುನಾವಣೆ ಈ ವಿಷಯಗಳನ್ನು ಮುಂದಿಟ್ಟುಕೊಂಡು ನಡೆಯಬೇಕಾಗಿದೆ. ಆದರೆ ಈಗಿನ ರಾಜಕೀಯ ಪಕ್ಷಗಳಲ್ಲಿ ಈ ವಿಚಾರಗಳಿಗೆ ಸಂಬಂಧಪಟ್ಟ ಯಾವುದೇ ಸ್ಪಷ್ಟ ಕಾರ್ಯಯೋಜನೆ ಇಲ್ಲ. ಜಾಗತೀಕರಣ ಮತ್ತು ಖಾಸಗಿಕರಣಕ್ಕೇ ಒತ್ತು ನೀಡುವ ಯಾವ ಪಕ್ಷದಿಂದಲೂ ಈ ಸಂದಿಗ್ಧತೆಯಿಂದ ಹೊರಬರುವ ಮಾರ್ಗವೇ ಇಲ್ಲ. ಹೀಗಾಗಿ ಇಂದು ಪಕ್ಷರಾಜಕಾರಣದಿಂದ ಹೊರತಾಗಿ ಯೋಚಿಸುವ, ನಮ್ಮ ದೇಶದ ಜನ ಕಾಯುತ್ತಿರುವ ಬದಲಾವಣೆಗಳನ್ನು ಜಾರಿಗೆ ತರುವ ಮಾರ್ಗೊಪಾಯಗಳನ್ನು ಜನರ ಮುಂದಿಡುವ ಕಾರ್ಯ ಅತ್ಯಂತ ಜರೂರಾಗಿ ಆಗಬೇಕಿದೆ. ಅಂಥ ಕಾರ್ಯೊದ್ದೇಶವನ್ನು ಇಟ್ಟುಕೊಂಡು ಹೋರಾಡುವ ಹೊಸ ಯುವ ಶಕ್ತಿಯೊಂದು ಈಗ ಹಿಂದೆಂದಿಗಿಂತಲೂ ಅಗತ್ಯವಾಗಿದೆ.
ಈ ಕಾರಣಕ್ಕೆ ‘ಬದಲಾವಣೆ ಸಾಧ್ಯ ಮತ್ತು ನನ್ನಿಂದಲೇ ಈ ಬದಲಾವಣೆ ಪ್ರಾರಂಭ’ ಎಂಬ ಅರ್ಥ ಧ್ವನಿಸುವ ‘ಐ ಕ್ಯಾನ್’ (I ಅಂಓ) ಆಂದೋಲನಕ್ಕೆ ಅಖಿಲ ಭಾರತ ಮಟ್ಟದಲ್ಲಿ ಚಾಲನೆ ನೀಡಲಾಗಿದೆ. ಇದೇ ಆಶಯಗಳನ್ನ ಹೊಂದಿರುವ ಆದರೆ ಕರ್ನಾಟಕದ ಸಂದರ್ಭಕ್ಕೆ ಹತ್ತಿರವಾದ ವಿಚಾರಗಳನ್ನು ಇಟ್ಟುಕೊಂಡು ‘ದೇಶಕ್ಕಾಗಿ ನಾವು – ನಂಗೂ ಸಾಧ್ಯ!’ ಎಂಬ ಘೋಷಣೆಯ ಅಡಿಯಲ್ಲಿ ಯುವ ಜನತೆಯನ್ನು ಒಟ್ಟಿಗೆ ತರುವ ಪ್ರಯತ್ನ ನಮ್ಮ ರಾಜ್ಯದಲ್ಲೂ ಪ್ರಾರಂಭವಾಗಿದೆ. ಇದರಲ್ಲಿ ಜತೆಯಾಗುವ ಕಾರ್ಮಿಕರ, ಮಹಿಳೆಯರ, ನಿರುದ್ಯೋಗಿಗಳ, ದಲಿತರ, ಅಲ್ಪಸಂಖ್ಯಾತರ ಶಿಕ್ಷಣ, ಆರೋಗ್ಯ, ಪರಿಸರ ಇತ್ಯಾದಿ ವಿಚಾರಗಳಿಗಾಗಿ ಹೋರಾಡುತ್ತಿರುವ ಸಂಘಟನೆಗಳು ಹಾಗೂ ವ್ಯಕ್ತಿಗಳು ತಮ್ಮ ತಮ್ಮ ಅಜೆಂಡಾಗಳನ್ನೂ, ಅನನ್ಯತೆಗಳನ್ನು ಇಟ್ಟುಕೊಂಡೇ ‘ದೇಶಕ್ಕಾಗಿ ನಾವು’ ಎನ್ನುವ ಸಮಾನ ಆಶಯದೊಂದಿಗೆ ಕೈಜೋಡಿಸಲಿದ್ದಾರೆ. ಇದೊಂದು ರೀತಿಯಲ್ಲಿ ‘ಪ್ರಜಾ ಮಹಾಘಟ ಬಂಧನ’. ಇದು ಬದಲಾವಣೆಗೆ ಹಾತೊರೆಯುವ ಮನಸ್ಸುಗಳೆಲ್ಲಾ ಒಗ್ಗೂಡಿ ನಿಜವಾದ ಜನ ಪರ್ಯಾಯವನ್ನು ಕಟ್ಟುವ ಪ್ರಯತ್ನ. ಇದು ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕುವ ಕೆಲಸ. ಈ ಆಂದೋಲನಕ್ಕೆ ಧ್ವನಿಗೂಡಿಸಿರುವ ಹಿರಿಯ ಮುತ್ಸದ್ಧಿ ಎ.ಕೆ ಸುಬ್ಬಯ್ಯನವರು ಹೇಳಿರುವ ಹಾಗೆ ಇದು ಯಾವುದೋ ಪಕ್ಷವನ್ನು ಗೆಲ್ಲಿಸಲು ಅಥವಾ ಸೋಲಿಸಲು ನಡೆಯುತ್ತಿರುವ ಆಂದೋಲನವಲ್ಲ. ಪ್ರಜೆಗಳೇ ಪ್ರಜಾಪ್ರÀಭುತ್ವದ ನಿಜವಾದ ಪ್ರಭುಗಳು ಎನ್ನುವುದನ್ನು ರಾಜಕೀಯ ಪಕ್ಷಗಳಿಗೆ ನೆನಪಿಸುವ, ಜನರ ಅಧಿಕಾರಕ್ಕಾಗಿ ಒತ್ತಾಯಿಸುವ ಹೋರಾಟ.
ಇದರಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅವರ ಆದಿಯಾಗಿ ಜನಪರವಾಗಿ ಇರುವ ಎಲ್ಲ ಹಿರಿಯ ಕಿರಿಯರೂ ಭಾಗಿಯಾಗಿದ್ದಾರೆ. ನೀವೂ ಕೂಡ ಹೇಳಿ ‘ನಂಗೂ ಸಾಧ್ಯ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...