Homeಕರ್ನಾಟಕಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

ಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

- Advertisement -
- Advertisement -

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತಾನೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದರ ನಂತರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಕೊರೊನಾ ಕಾರಣಕ್ಕೆ ಅವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದ ಅವರ ಅಭಿಮಾನಿಗಳಿಗಾಗಿ ಆನ್‌ಲೈನ್‌ ಮೂಲಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.

ಹಿರಿಯ ಚೇತನದ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೌರವ ನಮನ| ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ಮುಖ್ಯಮಂತ್ರಿ ಯಡಿಯೂರಪ್ಪ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು, “ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ” ಎಂದು ತಿಳಿಸಿದೆ.

ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶ್ರೀ ಎಚ್. ಎಸ್. ದೊರೈಸ್ವಾಮಿ ಅವರು ನಿಧನರಾದ ಸುದ್ದಿ ತುಂಬಾ ದುಃಖದ ವಿಷಯ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಗೆದ್ದ ಹಿರಿಯಜೀವ ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...