Homeಅಂತರಾಷ್ಟ್ರೀಯಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ...

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

- Advertisement -
- Advertisement -

ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ.

ಈ ಬಂಧಿತರ ಮೇಲೆ ಇಸ್ರೇಲಿ ಪೊಲೀಸರು ಮತ್ತು ಜೈಲು ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿದ್ದಾರೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಆರೋಪಿಸಿದೆ. ಆಪಾದಿತ ದೌರ್ಜನ್ಯ ಅಂತಾರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಎಂದಿರುವ ಒಕ್ಕೂಟ, ಈ ಕುರಿತು ಸ್ವತಂತ್ರ ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದೆ.

ಗಾಝಾ ಬಳಿಯ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಫ್ಲೋಟಿಲ್ಲಾ ಹಡುಗಗಳನ್ನು ಇಸ್ರೇಲ್ ತಡೆದು ನಿಲ್ಲಿಸಿದ ಬಳಿಕ, ಅದರಲ್ಲಿದ್ದ ಪತ್ರಕರ್ತರು ಮತ್ತು ಹೋರಾಟಗಾರರನ್ನು ಬಂಧಿಸಲಾಗಿದೆ. ಬಂಧಿತರ ಮೇಲೆ ಭೀಕರ ದೌರ್ಜನ್ಯ ನಡೆಸಲಾಗಿದೆ ಎಂದು ಒಕ್ಕೂಟ ಪ್ರಕಟನೆಯಲ್ಲಿ ತಿಳಿಸಿದೆ.

ಫ್ಲೋಟಿಲ್ಲಾ ತಂಡದ ಭಾಗವಾಗಿದ್ದ ‘ಕಾನ್ಸೈನ್ಸ್‌’ ಎಂಬ ಹಡಗಿನಲ್ಲಿದ್ದ ಜರ್ಮನ್ ಪತ್ರಕರ್ತೆ ಅನ್ನಾ ಲೀಡ್ಟ್ಕೆ ಡಿಸೆಂಬರ್ 21ರಂದು ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಇಸ್ರೇಲಿ ಕಸ್ಟಡಿಯಲ್ಲಿದ್ದಾಗ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿಕೊಂಡಿದ್ದು, ಆ ಬಳಿಕ ದೌರ್ಜನ್ಯದ ವಿಷಯ ಬೆಳಕಿಗೆ ಬಂದಿದೆ.

“ತನ್ನನ್ನು ಬಂಧಿಸಿದ ಬಳಿಕ ಇಸ್ರೇಲಿ ಸೈನಿಕರು ಬಲವಂತವಾಗಿ ವಿವಸ್ತ್ರಗೊಳಿಸಿ ಶೋಧ ನಡೆಸಲು ಮುಂದಾದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಅತ್ಯಾಚಾರವೆಸಗಿದ್ದಾರೆ” ಎಂದು ಲೀಡ್ಟ್ಕೆ ಹೇಳಿದ್ದಾರೆ. ಈ ವಿಷಯ ಬಹಿರಂಗಪಡಿಸಿದಾಗಿನಿಂದ ಆಕೆಗೆ ನಾವು ಬೆಂಬಲವಾಗಿ ನಿಂತಿದ್ದೇವೆ ಎಂದು ಫ್ಲೋಟಿಲ್ಲಾ ಒಕ್ಕೂಟ ತಿಳಿಸಿದೆ.

ಇಟಾಲಿಯನ್ ಪತ್ರಕರ್ತ ವಿನ್ಸೆಂಜೊ ಫುಲೋನ್ ಮತ್ತು ಆಸ್ಟ್ರೇಲಿಯಾದ ಹೋರಾಟಗಾರ ಸೂರ್ಯ ಮೆಕ್‌ವೆನ್ ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆಂದು ವರದಿ ಮಾಡಿದ್ದಾರೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ. ಈ ರೀತಿಯ ಹೆಚ್ಚುವರಿ ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ ಎಂದಿದೆ.

ದೌರ್ಜನ್ಯಕ್ಕೊಳಗಾದವರು, ಆ ವಿಷಯವನ್ನು ಹಂಚಿಕೊಳ್ಳುವಂತೆ ನಾವು ಒತ್ತಡೆ ಹೇರುವುದಿಲ್ಲ. ಅದು ಅವರ ಸ್ವಇಚ್ಚೆಗೆ ಬಿಟ್ಟಿದ್ದು. ಮಾಹಿತಿಯನ್ನು ಹಂಚಿಕೊಳ್ಳಬೇಕೆ, ಬೇಡವೇ ಎಂಬುವುದು ಅವರೇ ನಿರ್ಧರಿಸುತ್ತಾ ಎಂದು ಒಕ್ಕೂಟ ಹೇಳಿದೆ.

ಇಸ್ರೇಲ್‌ನ ಕೃತ್ಯಗಳು ಮಾನವ ಘನತೆ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಯಾಗಿವೆ. ಈ ಕುರಿತು ಸ್ವತಂತ್ರ ಮತ್ತು ಅಂತಾರಾಷ್ಟ್ರೀಯ ತನಿಖೆ ನಡೆಯಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಫ್ಲೋಟಿಲ್ಲಾ ತಂಡದ ಸದಸ್ಯರ ಮೇಲೆ ನಡೆಸಿದ ದೌರ್ಜನ್ಯ, ಇಸ್ರೇಲ್ ಪ್ಯಾಲೆಸ್ತೀನ್ ಬಂಧಿತರ ಮೇಲೆ ನಡೆಸುತ್ತಿರುವ ದೌರ್ಜನ್ಯಕ್ಕೆ ಉದಾಹರಣೆಯಾಗಿದೆ. ಇಸ್ರೇಲಿ ಬಂಧನ ಕೇಂದ್ರಗಳಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅವರ ಘನೆತೆಯನ್ನು ಕುಗ್ಗಿಸುವ, ಮಾನವೀಯತೆಗೆ ವಿರುದ್ದವಾದ ಹಿಂಸೆಗಳು ನಡೆಯುತ್ತಿರುವ ಬಗ್ಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ವರದಿ ಮಾಡಿವೆ ಎಂದು ಒಕ್ಕೂಟ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದಾಗಿನಿಂದ ಪ್ಯಾಲೆಸ್ತೀನ್ ಬಂಧಿತರ ವಿರುದ್ಧ ವ್ಯವಸ್ಥಿತವಾಗಿ ಲೈಂಗಿಕ ಹಿಂಸೆಯನ್ನು ಬಳಸಲಾಗುತ್ತಿದೆ ಎಂದು ಪ್ಯಾಲೆಸ್ತೀನಿಯನ್ ಮಾನವ ಹಕ್ಕುಗಳ ಕೇಂದ್ರದ ಇತ್ತೀಚಿನ ವರದಿಗಳು ಆರೋಪಿಸಿವೆ. ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸೇರಿದಂತೆ ವಿಶ್ವಸಂಸ್ಥೆಯ ಸಂಸ್ಥೆಗಳು ಮತ್ತು ಹಕ್ಕುಗಳ ಗುಂಪುಗಳು ಇಸ್ರೇಲಿ ಬಂಧನ ಕೇಂದ್ರಗಳಲ್ಲಿ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸಾಚಾರದ ಬಗ್ಗೆ ಈ ಹಿಂದೆ ವರದಿ ಮಾಡಿವೆ. ಕೆಲವು ದುರುಪಯೋಗಗಳನ್ನು ಸಂಭಾವ್ಯ ಯುದ್ಧ ಅಪರಾಧಗಳೆಂದು ವಿವರಿಸಿವೆ.

ವ್ಯವಸ್ಥಿತ ದುರುಪಯೋಗದ ಆರೋಪಗಳನ್ನು ಇಸ್ರೇಲ್ ಪದೇ ಪದೇ ತಿರಸ್ಕರಿಸಿದೆ ಮತ್ತು ಅದರ ಭದ್ರತಾ ಪಡೆಗಳು ಕಾನೂನಿನ ಆಳ್ವಿಕೆಯಡಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳುತ್ತದೆ. ದುರುಪಯೋಗದ ಆರೋಪಗಳನ್ನು ತನಿಖೆ ಮಾಡಲಾಗುತ್ತದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿದ್ದಾರೆ, ಆದರೂ ಮಾನವ ಹಕ್ಕುಗಳ ಗುಂಪುಗಳು ಆ ತನಿಖೆಗಳನ್ನು ನಿಷ್ಪರಿಣಾಮಕಾರಿ ಎಂದು ಟೀಕಿಸಿವೆ.

ಇಸ್ರೇಲ್‌ನ ಸಂಸ್ಥೆಗಳು, ಅಲ್ಲಿನ ಅಧಿಕಾರಿಗಳು ಮತ್ತು ಸಾಮಾನ್ಯ ಜನರು ಪ್ಯಾಲೆಸ್ತೀನಿಯರು ಮತ್ತು ಅವರನ್ನು ಬೆಂಬಲಿಸುವವರ ಮೇಲೆ ನಡೆಸುವ ದೌರ್ಜನ್ಯಗಳಿಗೆ ಯಾವುದೇ ಶಿಕ್ಷೆಯನ್ನು ವಿಧಿಸುತ್ತಿಲ್ಲ. ಅವರ ವಿರುದ್ದ ಕ್ರಮವೇ ಕೈಗೊಳ್ಳುತ್ತಿಲ್ಲ. ಹಾಗಾಗಿ, ಇಸ್ರೇಲ್‌ನ ನ್ಯಾಯಾಲಯಗಳು ಸೇರಿದಂತೆ ಯಾವುದೇ ಸಂಸ್ಥೆಗಳ ಮೇಲೆ ನಮಗೆ ನಂಬಿಕೆಯಿಲ್ಲ. ಹಾಗಾಗಿ, ಈ ದೌರ್ಜನ್ಯ ಪ್ರಕರಣಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಅಥವಾ ವಿಶ್ವಸಂಸ್ಥೆಯ ಅಧೀನಲ್ಲಿ ತನಿಖೆಯಾಗಬೇಕು ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಒತ್ತಾಯಿಸಿದೆ.

ಇಸ್ರೇಲ್‌ನ ಬಂಧನ ಕೇಂದ್ರಗಳಿಗೆ ಪ್ರವೇಶಿ ವಸ್ತುಸ್ಥಿತಿ ಅರಿಯಲು ಅವಕಾಶ ನೀಡುವಂತೆ ವಿಶ್ವಸಂಸ್ಥೆ ಮತ್ತು ಅದರ ಸದಸ್ಯ ರಾಷ್ಟ್ರಗಳು ಒತ್ತಾಯಿಸಬೇಕು. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಪ್ರತಿನಿಧಿಗಳು ಇಸ್ರೇಲ್ ಬಂಧನ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಲೈಂಗಿಕ ಮತ್ತು ಚಿತ್ರಹಿಂಸೆಯ ಆರೋಪಗಳ ಕುರಿತು ತನಿಖೆಯಾಗಬೇಕು. ವಿಶೇಷವಾಗಿ ಪ್ಯಾಲೆಸ್ತೀನಿಯರ ಮೇಲಿನ ದೌರ್ಜನ್ಯದ ಕುರಿತು ತನಿಖೆ ನಡೆಸಬೇಕು ಎಂದು ಒಕ್ಕೂಟ ಮನವಿ ಮಾಡಿದೆ.

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...