Homeಅಂತರಾಷ್ಟ್ರೀಯಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಸರ್ಕಾರದೊಂದಿಗೆ ನಡೆದ ಕೊನೆಯ ಸಭೆಯಲ್ಲೂ, ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ ಎಂದು ಟ್ವಿಟರ್ ಹೇಳಿದೆ

- Advertisement -
- Advertisement -

ಟ್ವಿಟ್ಟರ್‌‌‌ನಲ್ಲಿ ರೈತರ ಬಗ್ಗೆ ‘ತಪ್ಪು ಮಾಹಿತಿ’ ಹರಡುತ್ತಿರುವ ಅನೇಕ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರವು ಟ್ವಿಟ್ಟರ್ ಅಧಿಕಾರಿಗಳ ಸಭೆ ನಡೆಸಿದ ಬೆನ್ನಿಗೆ, ಅಮೆರಿಕ ಟ್ವಿಟರ್‌‌ ಬೆಂಬಲಕ್ಕೆ ನಿಂತಿದೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಂಬಲಿಸಲು ಬದ್ಧವಾಗಿದ್ದೇವೆ ಎಂದು ಅಮೆರಿಕ ಬುಧವಾರ ಹೇಳಿದೆ.

“ನಾನು ಸಾಮಾನ್ಯವಾಗಿ ಹೇಳುವುದೇನೆಂದರೆ, ಪ್ರಪಂಚದಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ. ಟ್ವಿಟರ್‌‌ನ ನೀತಿಗಳಿಗೆ ಬಂದಾಗ ನಾವು ನಿಮಗೆ ಟ್ವಿಟರ್ ಅನ್ನೇ‌‌‌ ಉಲ್ಲೇಖಿಸಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಮೆರಿಕ ರಾಜ್ಯ ಇಲಾಖೆಯ ವಕ್ತಾರ ನೆಡ್ ಪ್ರೈಸ್‌‌ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

250 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಿರುವ ಬಗ್ಗೆ ಸರ್ಕಾರ ಮತ್ತು ಟ್ವಿಟರ್ ನಡುವಿನ ಜಗಳದ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಬಂದಿದ್ದು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ ಕೇಂದ್ರ ಸರ್ಕಾರವು ಎರಡು ಆದೇಶಗಳಲ್ಲಿ 1,300 ಖಾತೆಗಳನ್ನು ಮತ್ತು ಪೋಸ್ಟ್‌ಗಳ ಪಟ್ಟಿಯನ್ನು ಹಸ್ತಾಂತರಿಸಿ ಅದನ್ನು ತೆಹಿಡಿಯುವಂತೆ ಕೇಳಿಕೊಂಡಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ಬುಧವಾರ, ಟ್ವಿಟರ್ ತನ್ನ ಹೇಳಿಕೆಯನ್ನು ಪ್ರಕಟಿಸಿ, ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸದಿರುವ ತನ್ನ ಕ್ರಮವನ್ನು ವಿವರಿಸಿದೆ. ಅದು ತನ್ನ ಹೇಳಿಕೆಯಲ್ಲಿ, “… ನಮಗೆ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ” ಎಂದು ಹೇಳಿದೆ.

“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ತತ್ವಗಳನ್ನು ಅನುಸರಿಸಿ ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಟ್ವಿಟರ್‌ ಹೇಳಿತ್ತು.

ಇದನ್ನೂ ಓದಿ: ರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

ಟ್ವಿಟರ್ ಈ ಹೇಳಿಕೆಯನ್ನು ನೀಡಿದ ಕೂಡಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸ್ವದೇಶಿ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌‌ನಲ್ಲಿ, ಟ್ವಿಟ್ಟರ್‌ ಹೇಳಿಕೆಯನ್ನು “ಅಸಾಮಾನ್ಯ” ಎಂದು ಕರೆದಿದೆ. ’ಕೂ’ ಆಪ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೆಲವೆ ಗಂಟೆಗಳ ನಂತರ, ಸಚಿವಾಲಯದ ಪ್ರತಿನಿಧಿಗಳು ಮತ್ತು ಟ್ವಿಟರ್‌ನ ಜಾಗತಿಕ ನೀತಿ ಮತ್ತು ಸುರಕ್ಷತಾ ತಂಡಗಳು ಸಭೆ ನಡೆಸಿದೆ.

ಸಭೆಯಲ್ಲಿ ಟ್ವಿಟರ್‌ನ ಪ್ರತಿಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ. “ಭಾರತದಲ್ಲಿ, ಅದರ ಸಂವಿಧಾನ ಮತ್ತು ಕಾನೂನುಗಳು ಸರ್ವೋಚ್ಚವಾಗಿವೆ. ಇದನ್ನು ಜವಾಬ್ದಾರಿಯುತ ಘಟಕಗಳು ದೃಡೀಕರಿಸುವುದು ಮಾತ್ರವಲ್ಲದೆ ನೆಲದ ಕಾನೂನಿಗೆ ಅನುಸಾರವಾಗಿ ಬದ್ಧವಾಗಿರುತ್ತವೆ ಎಂದು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್ ತಾನು ಕಾನೂನು ಆಯ್ಕೆಯನ್ನು ನೋಡುತ್ತಿದ್ದೇನೆ ಎಂದು ಹೇಳಿದೆ. “ನಾವು ಸೇವೆ ಸಲ್ಲಿಸುವ ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ. ನಾವು ಭಾರತೀಯ ಕಾನೂನಿನಡಿಯಲ್ಲಿ ನಮಗೆ ಇರುವ ಆಯ್ಕೆಗಳನ್ನು ಹುಡುಕುತ್ತಿದ್ದೇವೆ” ಅದು ಹೇಳಿದೆ.

ಇದನ್ನೂ ಓದಿ: ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು & ರಾಜಕಾರಣಿಗಳ ವಿರುದ್ಧ ಕ್ರಮ ಸಾಧ್ಯವಿಲ್ಲ: ಟ್ವಿಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...