Homeಅಂತರಾಷ್ಟ್ರೀಯಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಸರ್ಕಾರದೊಂದಿಗೆ ನಡೆದ ಕೊನೆಯ ಸಭೆಯಲ್ಲೂ, ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ ಎಂದು ಟ್ವಿಟರ್ ಹೇಳಿದೆ

- Advertisement -
- Advertisement -

ಟ್ವಿಟ್ಟರ್‌‌‌ನಲ್ಲಿ ರೈತರ ಬಗ್ಗೆ ‘ತಪ್ಪು ಮಾಹಿತಿ’ ಹರಡುತ್ತಿರುವ ಅನೇಕ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರವು ಟ್ವಿಟ್ಟರ್ ಅಧಿಕಾರಿಗಳ ಸಭೆ ನಡೆಸಿದ ಬೆನ್ನಿಗೆ, ಅಮೆರಿಕ ಟ್ವಿಟರ್‌‌ ಬೆಂಬಲಕ್ಕೆ ನಿಂತಿದೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಂಬಲಿಸಲು ಬದ್ಧವಾಗಿದ್ದೇವೆ ಎಂದು ಅಮೆರಿಕ ಬುಧವಾರ ಹೇಳಿದೆ.

“ನಾನು ಸಾಮಾನ್ಯವಾಗಿ ಹೇಳುವುದೇನೆಂದರೆ, ಪ್ರಪಂಚದಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ. ಟ್ವಿಟರ್‌‌ನ ನೀತಿಗಳಿಗೆ ಬಂದಾಗ ನಾವು ನಿಮಗೆ ಟ್ವಿಟರ್ ಅನ್ನೇ‌‌‌ ಉಲ್ಲೇಖಿಸಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಮೆರಿಕ ರಾಜ್ಯ ಇಲಾಖೆಯ ವಕ್ತಾರ ನೆಡ್ ಪ್ರೈಸ್‌‌ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

250 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಿರುವ ಬಗ್ಗೆ ಸರ್ಕಾರ ಮತ್ತು ಟ್ವಿಟರ್ ನಡುವಿನ ಜಗಳದ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಬಂದಿದ್ದು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ ಕೇಂದ್ರ ಸರ್ಕಾರವು ಎರಡು ಆದೇಶಗಳಲ್ಲಿ 1,300 ಖಾತೆಗಳನ್ನು ಮತ್ತು ಪೋಸ್ಟ್‌ಗಳ ಪಟ್ಟಿಯನ್ನು ಹಸ್ತಾಂತರಿಸಿ ಅದನ್ನು ತೆಹಿಡಿಯುವಂತೆ ಕೇಳಿಕೊಂಡಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ಬುಧವಾರ, ಟ್ವಿಟರ್ ತನ್ನ ಹೇಳಿಕೆಯನ್ನು ಪ್ರಕಟಿಸಿ, ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸದಿರುವ ತನ್ನ ಕ್ರಮವನ್ನು ವಿವರಿಸಿದೆ. ಅದು ತನ್ನ ಹೇಳಿಕೆಯಲ್ಲಿ, “… ನಮಗೆ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ” ಎಂದು ಹೇಳಿದೆ.

“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ತತ್ವಗಳನ್ನು ಅನುಸರಿಸಿ ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಟ್ವಿಟರ್‌ ಹೇಳಿತ್ತು.

ಇದನ್ನೂ ಓದಿ: ರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

ಟ್ವಿಟರ್ ಈ ಹೇಳಿಕೆಯನ್ನು ನೀಡಿದ ಕೂಡಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸ್ವದೇಶಿ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌‌ನಲ್ಲಿ, ಟ್ವಿಟ್ಟರ್‌ ಹೇಳಿಕೆಯನ್ನು “ಅಸಾಮಾನ್ಯ” ಎಂದು ಕರೆದಿದೆ. ’ಕೂ’ ಆಪ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೆಲವೆ ಗಂಟೆಗಳ ನಂತರ, ಸಚಿವಾಲಯದ ಪ್ರತಿನಿಧಿಗಳು ಮತ್ತು ಟ್ವಿಟರ್‌ನ ಜಾಗತಿಕ ನೀತಿ ಮತ್ತು ಸುರಕ್ಷತಾ ತಂಡಗಳು ಸಭೆ ನಡೆಸಿದೆ.

ಸಭೆಯಲ್ಲಿ ಟ್ವಿಟರ್‌ನ ಪ್ರತಿಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ. “ಭಾರತದಲ್ಲಿ, ಅದರ ಸಂವಿಧಾನ ಮತ್ತು ಕಾನೂನುಗಳು ಸರ್ವೋಚ್ಚವಾಗಿವೆ. ಇದನ್ನು ಜವಾಬ್ದಾರಿಯುತ ಘಟಕಗಳು ದೃಡೀಕರಿಸುವುದು ಮಾತ್ರವಲ್ಲದೆ ನೆಲದ ಕಾನೂನಿಗೆ ಅನುಸಾರವಾಗಿ ಬದ್ಧವಾಗಿರುತ್ತವೆ ಎಂದು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್ ತಾನು ಕಾನೂನು ಆಯ್ಕೆಯನ್ನು ನೋಡುತ್ತಿದ್ದೇನೆ ಎಂದು ಹೇಳಿದೆ. “ನಾವು ಸೇವೆ ಸಲ್ಲಿಸುವ ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ. ನಾವು ಭಾರತೀಯ ಕಾನೂನಿನಡಿಯಲ್ಲಿ ನಮಗೆ ಇರುವ ಆಯ್ಕೆಗಳನ್ನು ಹುಡುಕುತ್ತಿದ್ದೇವೆ” ಅದು ಹೇಳಿದೆ.

ಇದನ್ನೂ ಓದಿ: ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು & ರಾಜಕಾರಣಿಗಳ ವಿರುದ್ಧ ಕ್ರಮ ಸಾಧ್ಯವಿಲ್ಲ: ಟ್ವಿಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...