Homeಅಂತರಾಷ್ಟ್ರೀಯಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಸರ್ಕಾರದೊಂದಿಗೆ ನಡೆದ ಕೊನೆಯ ಸಭೆಯಲ್ಲೂ, ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ ಎಂದು ಟ್ವಿಟರ್ ಹೇಳಿದೆ

- Advertisement -
- Advertisement -

ಟ್ವಿಟ್ಟರ್‌‌‌ನಲ್ಲಿ ರೈತರ ಬಗ್ಗೆ ‘ತಪ್ಪು ಮಾಹಿತಿ’ ಹರಡುತ್ತಿರುವ ಅನೇಕ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರವು ಟ್ವಿಟ್ಟರ್ ಅಧಿಕಾರಿಗಳ ಸಭೆ ನಡೆಸಿದ ಬೆನ್ನಿಗೆ, ಅಮೆರಿಕ ಟ್ವಿಟರ್‌‌ ಬೆಂಬಲಕ್ಕೆ ನಿಂತಿದೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಂಬಲಿಸಲು ಬದ್ಧವಾಗಿದ್ದೇವೆ ಎಂದು ಅಮೆರಿಕ ಬುಧವಾರ ಹೇಳಿದೆ.

“ನಾನು ಸಾಮಾನ್ಯವಾಗಿ ಹೇಳುವುದೇನೆಂದರೆ, ಪ್ರಪಂಚದಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ. ಟ್ವಿಟರ್‌‌ನ ನೀತಿಗಳಿಗೆ ಬಂದಾಗ ನಾವು ನಿಮಗೆ ಟ್ವಿಟರ್ ಅನ್ನೇ‌‌‌ ಉಲ್ಲೇಖಿಸಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಮೆರಿಕ ರಾಜ್ಯ ಇಲಾಖೆಯ ವಕ್ತಾರ ನೆಡ್ ಪ್ರೈಸ್‌‌ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

250 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಿರುವ ಬಗ್ಗೆ ಸರ್ಕಾರ ಮತ್ತು ಟ್ವಿಟರ್ ನಡುವಿನ ಜಗಳದ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಬಂದಿದ್ದು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ ಕೇಂದ್ರ ಸರ್ಕಾರವು ಎರಡು ಆದೇಶಗಳಲ್ಲಿ 1,300 ಖಾತೆಗಳನ್ನು ಮತ್ತು ಪೋಸ್ಟ್‌ಗಳ ಪಟ್ಟಿಯನ್ನು ಹಸ್ತಾಂತರಿಸಿ ಅದನ್ನು ತೆಹಿಡಿಯುವಂತೆ ಕೇಳಿಕೊಂಡಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ಬುಧವಾರ, ಟ್ವಿಟರ್ ತನ್ನ ಹೇಳಿಕೆಯನ್ನು ಪ್ರಕಟಿಸಿ, ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸದಿರುವ ತನ್ನ ಕ್ರಮವನ್ನು ವಿವರಿಸಿದೆ. ಅದು ತನ್ನ ಹೇಳಿಕೆಯಲ್ಲಿ, “… ನಮಗೆ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ” ಎಂದು ಹೇಳಿದೆ.

“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ತತ್ವಗಳನ್ನು ಅನುಸರಿಸಿ ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಟ್ವಿಟರ್‌ ಹೇಳಿತ್ತು.

ಇದನ್ನೂ ಓದಿ: ರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

ಟ್ವಿಟರ್ ಈ ಹೇಳಿಕೆಯನ್ನು ನೀಡಿದ ಕೂಡಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸ್ವದೇಶಿ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌‌ನಲ್ಲಿ, ಟ್ವಿಟ್ಟರ್‌ ಹೇಳಿಕೆಯನ್ನು “ಅಸಾಮಾನ್ಯ” ಎಂದು ಕರೆದಿದೆ. ’ಕೂ’ ಆಪ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೆಲವೆ ಗಂಟೆಗಳ ನಂತರ, ಸಚಿವಾಲಯದ ಪ್ರತಿನಿಧಿಗಳು ಮತ್ತು ಟ್ವಿಟರ್‌ನ ಜಾಗತಿಕ ನೀತಿ ಮತ್ತು ಸುರಕ್ಷತಾ ತಂಡಗಳು ಸಭೆ ನಡೆಸಿದೆ.

ಸಭೆಯಲ್ಲಿ ಟ್ವಿಟರ್‌ನ ಪ್ರತಿಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ. “ಭಾರತದಲ್ಲಿ, ಅದರ ಸಂವಿಧಾನ ಮತ್ತು ಕಾನೂನುಗಳು ಸರ್ವೋಚ್ಚವಾಗಿವೆ. ಇದನ್ನು ಜವಾಬ್ದಾರಿಯುತ ಘಟಕಗಳು ದೃಡೀಕರಿಸುವುದು ಮಾತ್ರವಲ್ಲದೆ ನೆಲದ ಕಾನೂನಿಗೆ ಅನುಸಾರವಾಗಿ ಬದ್ಧವಾಗಿರುತ್ತವೆ ಎಂದು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್ ತಾನು ಕಾನೂನು ಆಯ್ಕೆಯನ್ನು ನೋಡುತ್ತಿದ್ದೇನೆ ಎಂದು ಹೇಳಿದೆ. “ನಾವು ಸೇವೆ ಸಲ್ಲಿಸುವ ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ. ನಾವು ಭಾರತೀಯ ಕಾನೂನಿನಡಿಯಲ್ಲಿ ನಮಗೆ ಇರುವ ಆಯ್ಕೆಗಳನ್ನು ಹುಡುಕುತ್ತಿದ್ದೇವೆ” ಅದು ಹೇಳಿದೆ.

ಇದನ್ನೂ ಓದಿ: ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು & ರಾಜಕಾರಣಿಗಳ ವಿರುದ್ಧ ಕ್ರಮ ಸಾಧ್ಯವಿಲ್ಲ: ಟ್ವಿಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...