Homeಮುಖಪುಟವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ಯ್ರ ಪರಿಪೂರ್ಣವಾದ ಹಕ್ಕಲ್ಲ: ಬಾಂಬೆ ಹೈಕೋರ್ಟ್

ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ಯ್ರ ಪರಿಪೂರ್ಣವಾದ ಹಕ್ಕಲ್ಲ: ಬಾಂಬೆ ಹೈಕೋರ್ಟ್

- Advertisement -
- Advertisement -

ಭಾರತೀಯ ಸಂವಿಧಾನದ 19 ನೇ ವಿಧಿಯ ಅನ್ವಯ ಒದಗಿಸಲಾಗಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ಯ್ರ ಪರಿಪೂರ್ಣವಾದ ಹಕ್ಕಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬರ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯಪಟ್ಟಿದೆ.

19 ನೇ ವಿಧಿಯ ಅಡಿಯಲ್ಲಿ ಒದಗಿಸಲಾದ ಮುಕ್ತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕು ಸಂಪೂರ್ಣವಲ್ಲ ಎಂದು ನ್ಯಾಯಪೀಠ ನೆನಪಿಸಿದ್ದು, “ಬಹುಶಃ ನಾಗರಿಕರು ಯಾವುದೇ ನಿರ್ಬಂಧಗಳಿಲ್ಲದೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಸಂಪೂರ್ಣ ಹಕ್ಕು ಎಂದು ಭಾವಿಸಿರುವಂತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ಸುನೈನಾ ಹೋಲೆ ಎಂಬುವವರು ಉದ್ದವ್‌ ಮತ್ತು ಆದಿತ್ಯ ಠಾಕ್ರೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿವಸೇನೆಯ ಯುವಸೇನಾ ವಿಭಾಗದ ರೋಹ್ ಚೌಹಾಣ್ ಮತ್ತು ಇತರರು ನೀಡಿರುವ ದೂರಿನ ಅಧಾರದ ಮೇಲೆ ಮೂರು ಎಫ್‌ಐಆರ್‌ ದಾಖಲಾಗಿದ್ದವು.

ಸುನೈನಾ ಹೋಲೆ ತನ್ನನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಬಂಧನಕ್ಕೆ ತಡೆ ನೀಡಲು ನಿರಾಕರಿಸಿದೆ. ಆದರೆ ಮುಂದಿನ ಎರಡು ವಾರಗಳವರೆಗೆ ಅವರನ್ನು ಬಂಧಿಸುವುದಿಲ್ಲ ಎಂಬ ಮಹಾರಾಷ್ಟ್ರ ಸರ್ಕಾರದ ಮೌಖಿಕ ಭರವಸೆಯನ್ನು ನ್ಯಾಯಪೀಠ ಅಂಗೀಕರಿಸಿದೆ.

ಇದನ್ನೂ ಓದಿ: ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ಅಭಿವ್ಯಕ್ತಿ ಸ್ವಾತಂತ್ರವಿದೆ ಎಂದ ಮಾತ್ರಕ್ಕೆ ತಮಗಿಷ್ಟ ಬಂದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

ಅಪರೂಪದ ಪ್ರಕರಣದಲ್ಲಿ ಮಾತ್ರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಬಹುದು ಎಂದಿರುವ ನ್ಯಾಯಪೀಠ, 41(ಎ) ಸೆಕ್ಷನ್ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಪೊಲೀಸರ ತನಿಖೆಗೆ ಸಹಕರಿಸುತ್ತಿರುವವರೆಗೂ ಬಂಧಿಸಬೇಕಾಗಿಲ್ಲ. ಯಾರನ್ನೇ ಬಂಧಿಸಬೇಕಾದರೆ, ಅಂತಹ ಬಂಧನಕ್ಕೆ ಪೊಲೀಸರು ಪೂರ್ವ ಸೂಚನೆ ನೀಡಬೇಕು ಎಂದು ಹೇಳಿದೆ.

ಅಲ್ಲದೆ, ಪೊಲೀಸರು ಆಕೆಯ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದರೆ, ಯಾವುದೇ ಹಕ್ಕುಗಳನ್ನು ಉಲ್ಲಂಘಿಸಿದರೆ ಅಂತಹ ಸಂದರ್ಭದಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುನೈನಾ ಹೋಲೆ ಅವರಿಗೆ ತಿಳಿಸಿದೆ.

ಟ್ವೀಟ್‌ಗೆ ಸಂಬಂಧಿಸಿದಂತೆ ಎಲ್ಲಾ ಆರೋಪಗಳನ್ನು ಕೈಬಿಡಬೇಕು. ಪ್ರಕರಣಗಳ ಅಂತಿಮ ವಿಚಾರಣೆವರೆಗೂ ತನ್ನನ್ನು ಬಂಧಿಸದಂತೆ ರಕ್ಷಣೆ ನೀಡಬೇಕು. ತನ್ನ ವಿರುದ್ಧ ಇರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು ಎಂದು ಸುನೈನಾ ಹೋಲೆ ಅವರು ಹೈಕೋರ್ಟ್‌ನಲ್ಲಿ ಕೋರಿದ್ದರು. ಮುಂದಿನ ವಿಚಾರಣೆ ಸೆಪ್ಟೆಂಬರ್ 29ಕ್ಕೆ ನಡೆಯಲಿದೆ.


ಇದನ್ನೂ ಓದಿ: ಭಾರತದ ಸ್ವಾತಂತ್ರ್ಯ ಸಂಗ್ರಾಮ: ಹಿಂದೂ ಮುಸ್ಲಿಂ ಐಕ್ಯತೆಯ ಅಪೂರ್ವ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...