Homeಮುಖಪುಟ‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ': ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ’: ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರು ದಿಶಾ ರವಿ ಅವರಿಗೆ ಬೆಂಬಲ ನೀಡಿದ್ದಾರೆ.

- Advertisement -
- Advertisement -

ಆಗಸ್ಟ್ 2018 ರಲ್ಲಿ ಗ್ರೆಟಾ ಥನ್ಬರ್ಗ್ 15 ವರ್ಷದವರಾಗಿದ್ದಾಗ ಸ್ಥಾಪಿಸಿದ ಫ್ರೈಡೇಸ್ ಫಾರ್ ಫ್ಯೂಚರ್ (ಎಫ್‌ಎಫ್‌ಎಫ್), “ಎಲ್ಲರಿಗೂ ನ್ಯಾಯವನ್ನು ಖಾತ್ರಿಪಡಿಸಿಕೊಳ್ಳಲು ಹೋರಾಡಿದವರ ಪರ ನಮ್ಮ ಧ್ವನಿಯನ್ನು ಶಾಂತಿಯುತವಾಗಿ ಮತ್ತು ಗೌರವದಿಂದ ಎತ್ತುತ್ತೇವೆ” ಎಂದು ಟ್ವೀಟ್ ಮಾಡಿದೆ.

“ವಾಕ್ ಸ್ವಾತಂತ್ರ‍್ಯ ಮತ್ತು ಶಾಂತಿಯುತ ಪ್ರತಿಭಟನೆ ಮತ್ತು ಸಭೆ ಸೇರುವ ಹಕ್ಕು ಚರ್ಚೆಯ ವಿಷಯವೇ ಅಲ್ಲದ ಮಾನವ ಹಕ್ಕುಗಳು. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಧ್ಯೇಯವಾಗಿರಬೇಕು. # ಸ್ಟ್ಯಾಂಡ್‌ವಿತ್‌ದಿಶಾರವಿ” ಎಂದು ಟ್ವೀಟ್ ಮಾಡಿರುವ ಗ್ರೇಟಾ, ಎಫ್‌ಎಫ್‌ಎಫ್ ಪೋಸ್ಟ್ ಮಾಡಿದ ಎಳೆಯನ್ನು ಇಷ್ಟಪಟ್ಟಿದ್ದಾರೆ.

ರೈತರ ಪ್ರತಿಭಟನೆ ಹೇಗೆ ನಡೆಯಬೇಕು ಎಂದು ಯೋಜಿಸಲು ನಿಕಿತಾ ಜಾಕೋಬ್, ಶಾಂತನು ಮುಲುಕ್ ಅವರೊಂದಿಗೆ ದಿಶಾ “ಟೂಲ್ಕಿಟ್” ಅನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ದಿಶಾರನ್ನು ಬಂಧಿಸಿದ್ದರು. ಇಂತಹ ಕೃತ್ಯವು ದೇಶದ್ರೋಹಕ್ಕೆ ಸಮನಾಗಿರುತ್ತದೆ ಎಂದು ಪೊಲೀಸರು ಹೇಳಿದ್ದರು. ಯಾವುದೇ ಸಾಮಾಜಿಕ ಹೋರಾಟಕ್ಕೂ ಪ್ರಚಾರಕ್ಕೂ ಇಂತಹ ಯೋಜನೆ ಸಾಮಾನ್ಯವಾಗಿದೆ ಎಂಬ ವ್ಯಾಪಕ ಟೀಕೆಗಳು ಪೊಲೀಸರ ವಿರುದ್ಧ ಕೇಳಿಬಂದಿವೆ.

“ದಿಶಾ ಎಫ್‌ಎಫ್‌ಎಫ್ ಚಳವಳಿಯ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಭಾರತದಲ್ಲಿ ಪರಿಸರ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಮಾತ್ರವಲ್ಲದೆ ಜಾಗತಿಕ ಹವಾಮಾನ ಚಳವಳಿಯ ನಿರೂಪಣೆಯಲ್ಲಿ ದೇಶದ ಹೆಚ್ಚು ಪೀಡಿತ ಮತ್ತು ಅಂಚಿನಲ್ಲಿರುವ ಗುಂಪುಗಳ ಸಮಾನತೆ ಮತ್ತು ಪ್ರಾತಿನಿಧ್ಯಕ್ಕಾಗಿ ಶ್ರಮಿಸಿದ್ದಾರೆ” ಎಂದು ಎಫ್‌ಎಫ್‌ಎಫ್ ಟ್ವೀಟ್ ಮಾಡಿದೆ.

ದಿಶಾ ಅವರ ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಲಾಗುವುದು. “ಸಾಕ್ಷ್ಯವನ್ನು ಹಾಳುಮಾಡುವ” ಸಾಧ್ಯತೆಯನ್ನು ಒತ್ತಿಹೇಳಿದ ಪೊಲೀಸರು ಶುಕ್ರವಾರ ದಿಶಾರಿಗೆ ಇನ್ನೂ ಮೂರು ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸುವಲ್ಲಿ ಸಫಲರಾಗಿದ್ದಾರೆ.

ದಿಶಾ ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಅವರ ಖಾಸಗಿ ಚಾಟ್‌ಗಳ ವಿಷಯ ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಪೊಲೀಸರು ಸೋರಿಕೆ ಮಾಡದಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ನಂತರ, ದೆಹಲಿ ಹೈಕೋರ್ಟ್ ಸೆನ್ಸೆಷಲಿಸಂ ವಿರುದ್ಧ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಯಾವುದೇ ಖಾಸಗಿ ಚಾಟ್‌ಗಳನ್ನು ವರದಿಗಾರರಿಗೆ ಸೋರಿಕೆ ಮಾಡಿರುವುದನ್ನು ತನಿಖಾಧಿಕಾರಿಗಳು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...