Homeಮುಖಪುಟ‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ': ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ’: ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರು ದಿಶಾ ರವಿ ಅವರಿಗೆ ಬೆಂಬಲ ನೀಡಿದ್ದಾರೆ.

- Advertisement -
- Advertisement -

ಆಗಸ್ಟ್ 2018 ರಲ್ಲಿ ಗ್ರೆಟಾ ಥನ್ಬರ್ಗ್ 15 ವರ್ಷದವರಾಗಿದ್ದಾಗ ಸ್ಥಾಪಿಸಿದ ಫ್ರೈಡೇಸ್ ಫಾರ್ ಫ್ಯೂಚರ್ (ಎಫ್‌ಎಫ್‌ಎಫ್), “ಎಲ್ಲರಿಗೂ ನ್ಯಾಯವನ್ನು ಖಾತ್ರಿಪಡಿಸಿಕೊಳ್ಳಲು ಹೋರಾಡಿದವರ ಪರ ನಮ್ಮ ಧ್ವನಿಯನ್ನು ಶಾಂತಿಯುತವಾಗಿ ಮತ್ತು ಗೌರವದಿಂದ ಎತ್ತುತ್ತೇವೆ” ಎಂದು ಟ್ವೀಟ್ ಮಾಡಿದೆ.

“ವಾಕ್ ಸ್ವಾತಂತ್ರ‍್ಯ ಮತ್ತು ಶಾಂತಿಯುತ ಪ್ರತಿಭಟನೆ ಮತ್ತು ಸಭೆ ಸೇರುವ ಹಕ್ಕು ಚರ್ಚೆಯ ವಿಷಯವೇ ಅಲ್ಲದ ಮಾನವ ಹಕ್ಕುಗಳು. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಧ್ಯೇಯವಾಗಿರಬೇಕು. # ಸ್ಟ್ಯಾಂಡ್‌ವಿತ್‌ದಿಶಾರವಿ” ಎಂದು ಟ್ವೀಟ್ ಮಾಡಿರುವ ಗ್ರೇಟಾ, ಎಫ್‌ಎಫ್‌ಎಫ್ ಪೋಸ್ಟ್ ಮಾಡಿದ ಎಳೆಯನ್ನು ಇಷ್ಟಪಟ್ಟಿದ್ದಾರೆ.

ರೈತರ ಪ್ರತಿಭಟನೆ ಹೇಗೆ ನಡೆಯಬೇಕು ಎಂದು ಯೋಜಿಸಲು ನಿಕಿತಾ ಜಾಕೋಬ್, ಶಾಂತನು ಮುಲುಕ್ ಅವರೊಂದಿಗೆ ದಿಶಾ “ಟೂಲ್ಕಿಟ್” ಅನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ದಿಶಾರನ್ನು ಬಂಧಿಸಿದ್ದರು. ಇಂತಹ ಕೃತ್ಯವು ದೇಶದ್ರೋಹಕ್ಕೆ ಸಮನಾಗಿರುತ್ತದೆ ಎಂದು ಪೊಲೀಸರು ಹೇಳಿದ್ದರು. ಯಾವುದೇ ಸಾಮಾಜಿಕ ಹೋರಾಟಕ್ಕೂ ಪ್ರಚಾರಕ್ಕೂ ಇಂತಹ ಯೋಜನೆ ಸಾಮಾನ್ಯವಾಗಿದೆ ಎಂಬ ವ್ಯಾಪಕ ಟೀಕೆಗಳು ಪೊಲೀಸರ ವಿರುದ್ಧ ಕೇಳಿಬಂದಿವೆ.

“ದಿಶಾ ಎಫ್‌ಎಫ್‌ಎಫ್ ಚಳವಳಿಯ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಭಾರತದಲ್ಲಿ ಪರಿಸರ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಮಾತ್ರವಲ್ಲದೆ ಜಾಗತಿಕ ಹವಾಮಾನ ಚಳವಳಿಯ ನಿರೂಪಣೆಯಲ್ಲಿ ದೇಶದ ಹೆಚ್ಚು ಪೀಡಿತ ಮತ್ತು ಅಂಚಿನಲ್ಲಿರುವ ಗುಂಪುಗಳ ಸಮಾನತೆ ಮತ್ತು ಪ್ರಾತಿನಿಧ್ಯಕ್ಕಾಗಿ ಶ್ರಮಿಸಿದ್ದಾರೆ” ಎಂದು ಎಫ್‌ಎಫ್‌ಎಫ್ ಟ್ವೀಟ್ ಮಾಡಿದೆ.

ದಿಶಾ ಅವರ ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಲಾಗುವುದು. “ಸಾಕ್ಷ್ಯವನ್ನು ಹಾಳುಮಾಡುವ” ಸಾಧ್ಯತೆಯನ್ನು ಒತ್ತಿಹೇಳಿದ ಪೊಲೀಸರು ಶುಕ್ರವಾರ ದಿಶಾರಿಗೆ ಇನ್ನೂ ಮೂರು ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸುವಲ್ಲಿ ಸಫಲರಾಗಿದ್ದಾರೆ.

ದಿಶಾ ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಅವರ ಖಾಸಗಿ ಚಾಟ್‌ಗಳ ವಿಷಯ ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಪೊಲೀಸರು ಸೋರಿಕೆ ಮಾಡದಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ನಂತರ, ದೆಹಲಿ ಹೈಕೋರ್ಟ್ ಸೆನ್ಸೆಷಲಿಸಂ ವಿರುದ್ಧ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಯಾವುದೇ ಖಾಸಗಿ ಚಾಟ್‌ಗಳನ್ನು ವರದಿಗಾರರಿಗೆ ಸೋರಿಕೆ ಮಾಡಿರುವುದನ್ನು ತನಿಖಾಧಿಕಾರಿಗಳು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...