Homeಮುಖಪುಟವಾಕ್ ಸ್ವಾತಂತ್ರ್ಯದ ಮೇಲೆ ಯೋಗಿ ಮೇಷ್ಟ್ರ ಪಾಠ

ವಾಕ್ ಸ್ವಾತಂತ್ರ್ಯದ ಮೇಲೆ ಯೋಗಿ ಮೇಷ್ಟ್ರ ಪಾಠ

- Advertisement -
- Advertisement -

| ಲೋಕೇಶ್ ಮಾಲ್ತಿ ಪ್ರಕಾಶ್ |
ಅನುವಾದ: ನಿಖಿಲ್ ಕೋಲ್ಪೆ

ಸತ್ತವರ ಕುರಿತು ನಾಲ್ಕು ಒಳ್ಳೆಯ ಮಾತುಗಳನ್ನೇ ಆಡುವುದು ನಮ್ಮ ದೇಶದ ಸಂಪ್ರದಾಯ. ನಾವು ದೈವಭಯ ಇರುವ ಜನರು ಮತ್ತು ನಮಗಿಂತ ಸತ್ತವರು ದೇವರಿಗೆ ಹೆಚ್ಚು ಹತ್ತಿರವಾದವರು ಎಂದು ನಂಬುವವರಾದುದರಿಂದ ನಾವು ಸತ್ತವರ ಬಗ್ಗೆ ಒಳ್ಳೆಯದನ್ನೇ ಮಾತನಾಡುತ್ತೇವೆ. ಸತ್ತವರು ನಮಗೆ ಭಾರತದ ನ್ಯಾಯಾಲಯದಲ್ಲಿಯ ಬೆಳಗ್ಗಿನ ದೇಖಾವೆಗೆ ಪಕ್ಕಾ ಟಿಕೆಟ್ ದೊರಕಿಸಿಕೊಡಬಲ್ಲ ಖಾನ್ ಮಾರ್ಕೆಟ್ ಗ್ಯಾಂಗ್ ಇದ್ದಂತೆ. ಕೆಲವೊಮ್ಮೆ ನಾವು ಹಿಟ್ಲರ್ ನಮ್ಮಲ್ಲಿ ಹುಟ್ಟಲಿಲ್ಲವಲ್ಲ ಎಂದು ಸ್ವಲ್ಪ ಸಮಾಧಾನಪಡುವುದುಂಟು! ಖಂಡಿತವಾಗಿಯೂ ಆತನಿಗೆ ಸ್ಪರ್ಧೆ ನೀಡಬಲ್ಲ ದೇಸಿ ತಳಿಗಳು ನಮ್ಮಲ್ಲಿವೆಯದರೂ….

ಆದುದರಿಂದ, ಮೊನ್ನೆ ಸುಪ್ರೀಂಕೋರ್ಟ್ ಸ್ವಾತಂತ್ರ್ಯವು ಪವಿತ್ರವಾದುದು, ಅದರಲ್ಲಿ ಚೌಕಾಸಿ ಮಾಡುವಂತಿಲ್ಲ ಎಂದಿತ್ಯಾದಿಯಾಗಿ ಮೂಲಭೂತ ಹಕ್ಕುಗಳ ಕುರಿತು ನಾಲ್ಕು ಒಳ್ಳೆಯ ಮಾತುಗಳನ್ನು ಆಡಿದಾಗ ನನಗೆ ಸ್ವಲ್ಪ ಗಲಿಬಿಲಿಯಾಯಿತು. ಹೌದೇ? ಇದು ನಿಜವೇ? “ಏ ಇಲ್ಲ! ಇದು ಹಸಿಸುಳ್ಳು” ಎಂದು ಗಟ್ಟಿಯಾಗಿ ಕಿರುಚಿಕೊಳ್ಳುವುದರಿಂದ ನಾನು ಸ್ವಲ್ಪ ಪ್ರಯತ್ನದ ಬಳಿಕವಷ್ಟೇ ತಡೆದುಕೊಂಡೆ! ಸ್ವಾತಂತ್ರ್ಯದ ಹಕ್ಕು ಸತ್ತಿದೆಯೇ? ಸಾವು ಮತ್ತು ವಂಚನೆಯ ಈ ಭವದಲ್ಲಿ ಬಿಟ್ಟು ಅದು ಸ್ವರ್ಗವಾಸಿಯಾಗಿದೆಯೆ? (ಅದಕ್ಕಾಗಿಯೇ ಹೊಗಳುತ್ತಿದ್ದಾರೆಯೆ?)

ಈ ದೇಶದಲ್ಲಿ ಮೂಲಭೂತ ಹಕ್ಕುಗಳು ಸತ್ತು ಬಹಳ ಕಾಲವಾಗಿಹೋಗಿದೆ ಎಂದು ಟೀಕಾಕಾರರು ಖಂಡಿತಾ ಹೇಳಬಹುದು. ಇವರಲ್ಲಿ ಕಟು ಟೀಕಾಕಾರರು, ಇಲ್ಲಪ್ಪಾ, ಅದು ಇನ್ನೂ ಹುಟ್ಟಿಯೇ ಇಲ್ಲವಾದುದರಿಂದ ಸಾಯುವ ಪ್ರಶ್ನೆ ಶುದ್ಧ ಸುಳ್ಳೆಂದು ತಗಾದೆ ಎತ್ತಬಹುದು.

ಈ ವಿಷಯಕ್ಕೆ ಬಂದಾಗ, ನಾನೊಬ್ಬ ದೇಶಭಕ್ತ ಮತ್ತು ಈ ತಳಿಯ ಇತರ ಪ್ರಭೇದಗಳಂತೆ. ಮತ್ತು ಅವರಷ್ಟೇ ನಾನು ಕೂಡಾ ವಾಕ್ ಸ್ವಾತಂತ್ರ್ಯದ ಸಂಪೂರ್ಣ ಬೆಂಬಲಿಗ ಎಂದು ಮೊದಲಿಗೇ ಹೇಳಿಬಿಡುತ್ತೇನೆ. ನಮ್ಮ ಸರಕಾರಗಳು ಸಂವಿಧಾನವನ್ನು ಅಕ್ಷರಶಃ ಅನುಸರಿಸುತ್ತವೆ. ಮತ್ತು ಸರಕಾರವೂ ದೇಶಭಕ್ತವಾಗಿದ್ದಲ್ಲಿ ಸಂವಿಧಾನದ ಕುರಿತು ಅದರ ನಿಷ್ಟೆಯನ್ನು ಯಾರೂ ಸಂಶಯಿಸಬಾರದು. ಮೊನ್ನೆಯಷ್ಟೇ ಮೋದೀಜಿ ಸಂವಿಧಾನಕ್ಕೆ ಹೇಗೆ ಕೈಮುಗಿದು ತಲೆಬಾಗಿದರೆಂದು ನೀವು ನೋಡಿಲ್ಲವೆ? ಸಂವಿಧಾನ ಮತ್ತು ಕಾನೂನು ಯಾವತ್ತೂ ಇದಕ್ಕಿಂತ ಸುರಕ್ಷಿತ ಕೈಗಳಲ್ಲಿ ಇರಲಿಲ್ಲ; ಇರುವುದು ಸಾಧ್ಯವೂ ಇಲ್ಲ.

ಹೀಗಿದ್ದರೂ, ಈ ಖಾನ್ ಮಾರ್ಕೆಟ್ ಗ್ಯಾಂಗ್ ಒಂದು ದೇಶಭಕ್ತ ಸರಕಾರ ಮತ್ತದರ ವೀರ ಪೊಲೀಸರನ್ನು ಮೇಲೆ ಕೆಸರೆರಚುವ ಕಿಂಚಿತ್ ಅವಕಾಶವನ್ನೂ ತಪ್ಪಿಸಿಕೊಳ್ಳುವುದಿಲ್ಲ. ಉತ್ತರಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿಯ ವೈಯಕ್ತಿಕ ಬದುಕಿನ ಬಗೆಗಿನ ಕೆಲವು ಜುಜುಬಿ ವಿಷಯಗಳ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿಯೋ, ಅದಾವುದೋ ನ್ಯೂಸ್ ಚಾನೆಲಿನಲ್ಲಿ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿಯೋ ಕೆಲವು ಪತ್ರಕರ್ತರನ್ನು ಬಂಧಿಸಿದ ಚಿಕ್ಕ ವಿಷಯದ ಬಗ್ಗೆ ಸುಮ್ಮಸುಮ್ಮನೆ ಗದ್ದಲ ಎಬ್ಬಿಸಲಾಗುತ್ತಿದೆ. ಅವರು ಮಾಧ್ಯಮ ವೃತ್ತಿಯ ಮರ್ಯಾದೆಯನ್ನು ಮೀರಿದ್ದಾರೆ. ಅವರಿಗೆ ಟ್ವೀಟ್ ಮಾಡಲು ಬೇರೆಷ್ಟೋ ವಿಷಯಗಳಿದ್ದವು. ಅವರು ಬೇಕಾದರೆ ಯೋಗಿ ಸರಕಾರ ಮತ್ತೆ ಜೀವನೀಡುತ್ತಿರುವ ಏಂಟಿರೋಮಿಯೋ ಸ್ಕ್ವಾಡ್ ಬಗ್ಗೆ ಟ್ವೀಟ್ ಮಾಡಬಹುದಿತ್ತು. ಅದು ಬೇಡವೆಂದರೆ ಬೆಂಕಿಹಚ್ಚುವ ಭಾಷಣಗಳ ಬಗ್ಗೆ ಟ್ವೀಟ್ ಮಾಡಬಹುದಿತ್ತು. ಅದೂ ಬೇಡ ಎಂದಾದರೆ, ಹದಗೆಡುತ್ತಿರುವ ಸಾರ್ವಜನಿಕ ಆರೋಗ್ಯ ಸೇವೆಗಳು, ಸರಕಾರಿ ಶಾಲಾ ಸೌಲಭ್ಯಗಳ ಬಗ್ಗೆ, ನಿರುದ್ಯೋಗದ ಬಗ್ಗೆ, ಗೋರಕ್ಷಕ ಗ್ಯಾಂಗುಗಳ ಬಗ್ಗೆ ಇತ್ಯಾದಿ ಇತ್ಯಾದಿಗಳ ಬಗ್ಗೆ ಮಾತಾಡಬಹುದಿತ್ತು. ಮಾತಾಡಲು ಮತ್ತು ಟ್ವೀಟ್ ಮಾಡಲು ಎಷ್ಟೊಂದು ವಿಷಯಗಳಿವೆ! ಇಷ್ಟಿದ್ದರೂ ಅವರು ಸುಮ್ಮಸುಮ್ಮನೇ ಗಾಸಿಪ್‌ಗಳ ಹಿಂದೆಬಿದ್ದರು! ಯೋಗಿ ಸಾರ್ವಜನಿಕ ನೈತಿಕತೆಯ ಟೇಕೇದಾರನಾಗಿರುವುದರಿಂದ ಕ್ರಮ ಕೈಗೊಳ್ಳಲೇಬೇಕಾಗಿತ್ತು, ಅವರಿಗೆಲ್ಲಾ ಒಂದು ಪಾಠ ಕಲಿಸಲೇಬೇಕಾಗಿತ್ತು.. ಅವರ ಪೊಲೀಸರು ಆ ಕೆಲಸ ಮಾಡಿದರು ಅಷ್ಟೇ.

ನೈತಿಕ ಶಿಕ್ಷಣಕ್ಕೆ ಹೊರತಾಗಿ ಯುಪಿ ಪೊಲೀಸರು ಕಾನೂನು ಮತ್ತು ಶಿಸ್ತು ಅಥವಾ ನಿಖರವಾಗಿ ಹೇಳಬೇಕೆಂದರೆ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡುವ ಕೆಲಸವನ್ನು ಕೈಗೆತ್ತಿಕೊಂಡರು. ಪೊಲೀಸರು ಏನು ಮಾಡಬೇಕೋ ಯುಪಿ ಪೊಲೀಸರು ಅದನ್ನೇ ಮಾಡಿದರು. ಕೆಲ ಸಮಯದ ಹಿಂದೆ ಬಂಗಾಳದಲ್ಲಿ, ಕರ್ನಾಟಕದಲ್ಲಿ, ಮತ್ತೇ ಅನೇಕ ಕಡೆಗಳಲ್ಲಿ ಮಾಡಿದ್ದನ್ನೇ ಅವರು ಮಾಡಿದ್ದು. ಪೋಲೀಸರು ಇಲ್ಲದಿದ್ದರೆ, ಈ ದೇಶದಲ್ಲಿ ಕಾನೂನು ಮತ್ತು ಶಿಸ್ತು ಎಂಬುದೊಂದು ಇದೆ ಎಂದು ಈ ಜನಸಾಮಾನ್ಯರು ಮರೆತೇಬಿಡುತ್ತಾರೆ. ಇದರಿಂದ ವಿನಾಯಿತಿ ಇರುವುದು ನೀರವ್ ಮೋದಿಯಂತಹ ಜನರಿಗೆ ಮಾತ್ರ. ಅದನ್ನು ಇತರರಿಗೆ ನೀಡುವಂತಿಲ್ಲ. ಅದೂ ಕೂಡಾ ರಾಮರಾಜ್ಯ ಇನ್ನೇನು ಹತ್ತಿರದಲ್ಲೇ ಇದೆ ಎನ್ನುವಾಗ ಅದನ್ನು ಕೊಡಲಾದೀತೆ? ಪೊಲೀಸರ ತ್ವರಿತ ಕ್ರಮಕ್ಕಾಗಿ ಅವರಿಗೆ ಶಹಬ್ಬಾಷ್‌ಗಿರಿ ನೀಡಬೇಕಾದಲ್ಲಿ ಈ ಖಾನ್ ಮಾರ್ಕೆಟ್ ಗ್ಯಾಂಗ್ ಪೊಲೀಸರ ಮಾನಹಾನಿ ಮಾಡಿ ಅವರ ನೈತಿಕ ಸ್ಥೈರ್ಯವನ್ನು ಕೆಡಿಸಲು ಎದ್ದುನಿಂತಿದೆ.

ಬಾಲಿವುಡ್ ಚಿತ್ರಗಳಲ್ಲಿ ಕೂಡ ಸಮಯಕ್ಕೆ ಸರಿಯಾಗಿ ತಲುಪಿ ಅಪರಾಧವನ್ನು ತಡೆಗಟ್ಟಲಾಗದ ಪೋಲಿಸರು ನಿಜ ಜೀವನದಲ್ಲಿ ಹಿಂದೆಂದೂ ಕಾಣದ ತ್ವರಿತತೆಯಿಂದ ಕ್ರಮ ಕೈಗೊಂಡಿದ್ದಾರೆ. ಇದು ಅತ್ಯಂತ ಜನಭರಿತ ರಾಜ್ಯವನ್ನು ಭಾರೀ ಕಾನೂನು ಮತ್ತು ಶಿಸ್ತಿನ ಮಹಾ ಬಿಕ್ಕಟ್ಟಿನಿಂದ ಬಚಾವು ಮಾಡಿದೆ. ಅದು ಸಾರ್ವಜನಿಕ ಶಾಂತಿಯನ್ನು ಯಾರಾದರೂ ಕದಡುವ ಮುನ್ನವೇ ಕಾಪಾಡಿದೆ. ಇದು ಮಹಾ ಗಟ್ಟಿಗ ನಾಯಕನ ನಾಯಕತ್ವದಲ್ಲಿ ಮಾತ್ರ ಸಾಧ್ಯ. ಅವರ ಕಾರ್ಯದಕ್ಷತೆಯನ್ನು ಕೊಂಡಾಡುವ ಬದಲು ಟೀಕಾಕಾರರು ಪೊಲೀಸರು ಮತ್ತು ಯೋಗಿಯ ಮೇಲೆ ಎಗರಿಬಿದ್ದಿದ್ದಾರೆ

ಒಬ್ಬ ಮಹಿಳೆ ಮುಖ್ಯಮಂತ್ರಿ ಯೋಗಿಯ ಮೇಲೆ (ಪರಸ್ಪರ) ಪ್ರೇಮ ತೋರುವ ವಿಡಿಯೊ ಯೋಗಿ ಭಕ್ತರನ್ನು ರೊಚ್ಚಿಗೆಬ್ಬಿಸುತ್ತದೆ ಎಂದು ಯುಪಿಯ ಪೊಲೀಸ್‌ವಾಲರಿಗೆ ಗೊತ್ತು. ಭಾವನೆ ಘಾಸಿಗೊಂಡ ಭಕ್ತರು ಸಾಮೂಹಿಕ ವಿನಾಶದ ಅಸ್ತ್ರಗಳಿಗಿಂತಲೂ ಅಪಾಯಕಾರಿ ಎಂಬುದೂ ಅವರಿಗೆ ಗೊತ್ತು.

ಆದುದರಿಂದ, ಸಾರ್ವಜನಿಕ ಶಾಂತಿಗೆ ಭಾರೀ ಬಿಕ್ಕಟ್ಟು ಕವಿದಿರುವುದನ್ನು ಪೊಲೀಸರು ಸರಿಯಾಗಿಯೇ ಗ್ರಹಿಸಿದ್ದಾರೆ. ತ್ವರಿತ ಕಾರ್ಯಾಚರಣೆಯ ಮೂಲಕ ಇಂತಹ ಒಂದು ಸ್ಫೋಟಕ ಮಾಹಿತಿಯನ್ನು ಪ್ರಸಾರ ಮಾಡಿದ ಜನರನ್ನು ಬಂಧಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ನಮ್ಮ ನೆಚ್ಚಿನ ಸ್ವಾತಂತ್ರ್ಯದ ಹಕ್ಕಿಗೆ ಏನಾದರೂ ಆದರೆ, ಯಾರು ತಾನೇ ಲೆಕ್ಕಿಸುತ್ತಾರೆ! ಬಹುಶಃ ಅದು ಬಹಳ ಹಿಂದೆಯೇ ಸತ್ತಿದೆ. ಬಹುಶಃ ನಾವೀಗ ಕೊನೆಯ ಸುತ್ತಿನ ಶ್ರದ್ಧಾಂಜಲಿಯನ್ನು ಓದುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...