Homeಮುಖಪುಟವಾಕ್ ಸ್ವಾತಂತ್ರ್ಯದ ಮೇಲೆ ಯೋಗಿ ಮೇಷ್ಟ್ರ ಪಾಠ

ವಾಕ್ ಸ್ವಾತಂತ್ರ್ಯದ ಮೇಲೆ ಯೋಗಿ ಮೇಷ್ಟ್ರ ಪಾಠ

- Advertisement -
- Advertisement -

| ಲೋಕೇಶ್ ಮಾಲ್ತಿ ಪ್ರಕಾಶ್ |
ಅನುವಾದ: ನಿಖಿಲ್ ಕೋಲ್ಪೆ

ಸತ್ತವರ ಕುರಿತು ನಾಲ್ಕು ಒಳ್ಳೆಯ ಮಾತುಗಳನ್ನೇ ಆಡುವುದು ನಮ್ಮ ದೇಶದ ಸಂಪ್ರದಾಯ. ನಾವು ದೈವಭಯ ಇರುವ ಜನರು ಮತ್ತು ನಮಗಿಂತ ಸತ್ತವರು ದೇವರಿಗೆ ಹೆಚ್ಚು ಹತ್ತಿರವಾದವರು ಎಂದು ನಂಬುವವರಾದುದರಿಂದ ನಾವು ಸತ್ತವರ ಬಗ್ಗೆ ಒಳ್ಳೆಯದನ್ನೇ ಮಾತನಾಡುತ್ತೇವೆ. ಸತ್ತವರು ನಮಗೆ ಭಾರತದ ನ್ಯಾಯಾಲಯದಲ್ಲಿಯ ಬೆಳಗ್ಗಿನ ದೇಖಾವೆಗೆ ಪಕ್ಕಾ ಟಿಕೆಟ್ ದೊರಕಿಸಿಕೊಡಬಲ್ಲ ಖಾನ್ ಮಾರ್ಕೆಟ್ ಗ್ಯಾಂಗ್ ಇದ್ದಂತೆ. ಕೆಲವೊಮ್ಮೆ ನಾವು ಹಿಟ್ಲರ್ ನಮ್ಮಲ್ಲಿ ಹುಟ್ಟಲಿಲ್ಲವಲ್ಲ ಎಂದು ಸ್ವಲ್ಪ ಸಮಾಧಾನಪಡುವುದುಂಟು! ಖಂಡಿತವಾಗಿಯೂ ಆತನಿಗೆ ಸ್ಪರ್ಧೆ ನೀಡಬಲ್ಲ ದೇಸಿ ತಳಿಗಳು ನಮ್ಮಲ್ಲಿವೆಯದರೂ….

ಆದುದರಿಂದ, ಮೊನ್ನೆ ಸುಪ್ರೀಂಕೋರ್ಟ್ ಸ್ವಾತಂತ್ರ್ಯವು ಪವಿತ್ರವಾದುದು, ಅದರಲ್ಲಿ ಚೌಕಾಸಿ ಮಾಡುವಂತಿಲ್ಲ ಎಂದಿತ್ಯಾದಿಯಾಗಿ ಮೂಲಭೂತ ಹಕ್ಕುಗಳ ಕುರಿತು ನಾಲ್ಕು ಒಳ್ಳೆಯ ಮಾತುಗಳನ್ನು ಆಡಿದಾಗ ನನಗೆ ಸ್ವಲ್ಪ ಗಲಿಬಿಲಿಯಾಯಿತು. ಹೌದೇ? ಇದು ನಿಜವೇ? “ಏ ಇಲ್ಲ! ಇದು ಹಸಿಸುಳ್ಳು” ಎಂದು ಗಟ್ಟಿಯಾಗಿ ಕಿರುಚಿಕೊಳ್ಳುವುದರಿಂದ ನಾನು ಸ್ವಲ್ಪ ಪ್ರಯತ್ನದ ಬಳಿಕವಷ್ಟೇ ತಡೆದುಕೊಂಡೆ! ಸ್ವಾತಂತ್ರ್ಯದ ಹಕ್ಕು ಸತ್ತಿದೆಯೇ? ಸಾವು ಮತ್ತು ವಂಚನೆಯ ಈ ಭವದಲ್ಲಿ ಬಿಟ್ಟು ಅದು ಸ್ವರ್ಗವಾಸಿಯಾಗಿದೆಯೆ? (ಅದಕ್ಕಾಗಿಯೇ ಹೊಗಳುತ್ತಿದ್ದಾರೆಯೆ?)

ಈ ದೇಶದಲ್ಲಿ ಮೂಲಭೂತ ಹಕ್ಕುಗಳು ಸತ್ತು ಬಹಳ ಕಾಲವಾಗಿಹೋಗಿದೆ ಎಂದು ಟೀಕಾಕಾರರು ಖಂಡಿತಾ ಹೇಳಬಹುದು. ಇವರಲ್ಲಿ ಕಟು ಟೀಕಾಕಾರರು, ಇಲ್ಲಪ್ಪಾ, ಅದು ಇನ್ನೂ ಹುಟ್ಟಿಯೇ ಇಲ್ಲವಾದುದರಿಂದ ಸಾಯುವ ಪ್ರಶ್ನೆ ಶುದ್ಧ ಸುಳ್ಳೆಂದು ತಗಾದೆ ಎತ್ತಬಹುದು.

ಈ ವಿಷಯಕ್ಕೆ ಬಂದಾಗ, ನಾನೊಬ್ಬ ದೇಶಭಕ್ತ ಮತ್ತು ಈ ತಳಿಯ ಇತರ ಪ್ರಭೇದಗಳಂತೆ. ಮತ್ತು ಅವರಷ್ಟೇ ನಾನು ಕೂಡಾ ವಾಕ್ ಸ್ವಾತಂತ್ರ್ಯದ ಸಂಪೂರ್ಣ ಬೆಂಬಲಿಗ ಎಂದು ಮೊದಲಿಗೇ ಹೇಳಿಬಿಡುತ್ತೇನೆ. ನಮ್ಮ ಸರಕಾರಗಳು ಸಂವಿಧಾನವನ್ನು ಅಕ್ಷರಶಃ ಅನುಸರಿಸುತ್ತವೆ. ಮತ್ತು ಸರಕಾರವೂ ದೇಶಭಕ್ತವಾಗಿದ್ದಲ್ಲಿ ಸಂವಿಧಾನದ ಕುರಿತು ಅದರ ನಿಷ್ಟೆಯನ್ನು ಯಾರೂ ಸಂಶಯಿಸಬಾರದು. ಮೊನ್ನೆಯಷ್ಟೇ ಮೋದೀಜಿ ಸಂವಿಧಾನಕ್ಕೆ ಹೇಗೆ ಕೈಮುಗಿದು ತಲೆಬಾಗಿದರೆಂದು ನೀವು ನೋಡಿಲ್ಲವೆ? ಸಂವಿಧಾನ ಮತ್ತು ಕಾನೂನು ಯಾವತ್ತೂ ಇದಕ್ಕಿಂತ ಸುರಕ್ಷಿತ ಕೈಗಳಲ್ಲಿ ಇರಲಿಲ್ಲ; ಇರುವುದು ಸಾಧ್ಯವೂ ಇಲ್ಲ.

ಹೀಗಿದ್ದರೂ, ಈ ಖಾನ್ ಮಾರ್ಕೆಟ್ ಗ್ಯಾಂಗ್ ಒಂದು ದೇಶಭಕ್ತ ಸರಕಾರ ಮತ್ತದರ ವೀರ ಪೊಲೀಸರನ್ನು ಮೇಲೆ ಕೆಸರೆರಚುವ ಕಿಂಚಿತ್ ಅವಕಾಶವನ್ನೂ ತಪ್ಪಿಸಿಕೊಳ್ಳುವುದಿಲ್ಲ. ಉತ್ತರಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿಯ ವೈಯಕ್ತಿಕ ಬದುಕಿನ ಬಗೆಗಿನ ಕೆಲವು ಜುಜುಬಿ ವಿಷಯಗಳ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿಯೋ, ಅದಾವುದೋ ನ್ಯೂಸ್ ಚಾನೆಲಿನಲ್ಲಿ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿಯೋ ಕೆಲವು ಪತ್ರಕರ್ತರನ್ನು ಬಂಧಿಸಿದ ಚಿಕ್ಕ ವಿಷಯದ ಬಗ್ಗೆ ಸುಮ್ಮಸುಮ್ಮನೆ ಗದ್ದಲ ಎಬ್ಬಿಸಲಾಗುತ್ತಿದೆ. ಅವರು ಮಾಧ್ಯಮ ವೃತ್ತಿಯ ಮರ್ಯಾದೆಯನ್ನು ಮೀರಿದ್ದಾರೆ. ಅವರಿಗೆ ಟ್ವೀಟ್ ಮಾಡಲು ಬೇರೆಷ್ಟೋ ವಿಷಯಗಳಿದ್ದವು. ಅವರು ಬೇಕಾದರೆ ಯೋಗಿ ಸರಕಾರ ಮತ್ತೆ ಜೀವನೀಡುತ್ತಿರುವ ಏಂಟಿರೋಮಿಯೋ ಸ್ಕ್ವಾಡ್ ಬಗ್ಗೆ ಟ್ವೀಟ್ ಮಾಡಬಹುದಿತ್ತು. ಅದು ಬೇಡವೆಂದರೆ ಬೆಂಕಿಹಚ್ಚುವ ಭಾಷಣಗಳ ಬಗ್ಗೆ ಟ್ವೀಟ್ ಮಾಡಬಹುದಿತ್ತು. ಅದೂ ಬೇಡ ಎಂದಾದರೆ, ಹದಗೆಡುತ್ತಿರುವ ಸಾರ್ವಜನಿಕ ಆರೋಗ್ಯ ಸೇವೆಗಳು, ಸರಕಾರಿ ಶಾಲಾ ಸೌಲಭ್ಯಗಳ ಬಗ್ಗೆ, ನಿರುದ್ಯೋಗದ ಬಗ್ಗೆ, ಗೋರಕ್ಷಕ ಗ್ಯಾಂಗುಗಳ ಬಗ್ಗೆ ಇತ್ಯಾದಿ ಇತ್ಯಾದಿಗಳ ಬಗ್ಗೆ ಮಾತಾಡಬಹುದಿತ್ತು. ಮಾತಾಡಲು ಮತ್ತು ಟ್ವೀಟ್ ಮಾಡಲು ಎಷ್ಟೊಂದು ವಿಷಯಗಳಿವೆ! ಇಷ್ಟಿದ್ದರೂ ಅವರು ಸುಮ್ಮಸುಮ್ಮನೇ ಗಾಸಿಪ್‌ಗಳ ಹಿಂದೆಬಿದ್ದರು! ಯೋಗಿ ಸಾರ್ವಜನಿಕ ನೈತಿಕತೆಯ ಟೇಕೇದಾರನಾಗಿರುವುದರಿಂದ ಕ್ರಮ ಕೈಗೊಳ್ಳಲೇಬೇಕಾಗಿತ್ತು, ಅವರಿಗೆಲ್ಲಾ ಒಂದು ಪಾಠ ಕಲಿಸಲೇಬೇಕಾಗಿತ್ತು.. ಅವರ ಪೊಲೀಸರು ಆ ಕೆಲಸ ಮಾಡಿದರು ಅಷ್ಟೇ.

ನೈತಿಕ ಶಿಕ್ಷಣಕ್ಕೆ ಹೊರತಾಗಿ ಯುಪಿ ಪೊಲೀಸರು ಕಾನೂನು ಮತ್ತು ಶಿಸ್ತು ಅಥವಾ ನಿಖರವಾಗಿ ಹೇಳಬೇಕೆಂದರೆ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡುವ ಕೆಲಸವನ್ನು ಕೈಗೆತ್ತಿಕೊಂಡರು. ಪೊಲೀಸರು ಏನು ಮಾಡಬೇಕೋ ಯುಪಿ ಪೊಲೀಸರು ಅದನ್ನೇ ಮಾಡಿದರು. ಕೆಲ ಸಮಯದ ಹಿಂದೆ ಬಂಗಾಳದಲ್ಲಿ, ಕರ್ನಾಟಕದಲ್ಲಿ, ಮತ್ತೇ ಅನೇಕ ಕಡೆಗಳಲ್ಲಿ ಮಾಡಿದ್ದನ್ನೇ ಅವರು ಮಾಡಿದ್ದು. ಪೋಲೀಸರು ಇಲ್ಲದಿದ್ದರೆ, ಈ ದೇಶದಲ್ಲಿ ಕಾನೂನು ಮತ್ತು ಶಿಸ್ತು ಎಂಬುದೊಂದು ಇದೆ ಎಂದು ಈ ಜನಸಾಮಾನ್ಯರು ಮರೆತೇಬಿಡುತ್ತಾರೆ. ಇದರಿಂದ ವಿನಾಯಿತಿ ಇರುವುದು ನೀರವ್ ಮೋದಿಯಂತಹ ಜನರಿಗೆ ಮಾತ್ರ. ಅದನ್ನು ಇತರರಿಗೆ ನೀಡುವಂತಿಲ್ಲ. ಅದೂ ಕೂಡಾ ರಾಮರಾಜ್ಯ ಇನ್ನೇನು ಹತ್ತಿರದಲ್ಲೇ ಇದೆ ಎನ್ನುವಾಗ ಅದನ್ನು ಕೊಡಲಾದೀತೆ? ಪೊಲೀಸರ ತ್ವರಿತ ಕ್ರಮಕ್ಕಾಗಿ ಅವರಿಗೆ ಶಹಬ್ಬಾಷ್‌ಗಿರಿ ನೀಡಬೇಕಾದಲ್ಲಿ ಈ ಖಾನ್ ಮಾರ್ಕೆಟ್ ಗ್ಯಾಂಗ್ ಪೊಲೀಸರ ಮಾನಹಾನಿ ಮಾಡಿ ಅವರ ನೈತಿಕ ಸ್ಥೈರ್ಯವನ್ನು ಕೆಡಿಸಲು ಎದ್ದುನಿಂತಿದೆ.

ಬಾಲಿವುಡ್ ಚಿತ್ರಗಳಲ್ಲಿ ಕೂಡ ಸಮಯಕ್ಕೆ ಸರಿಯಾಗಿ ತಲುಪಿ ಅಪರಾಧವನ್ನು ತಡೆಗಟ್ಟಲಾಗದ ಪೋಲಿಸರು ನಿಜ ಜೀವನದಲ್ಲಿ ಹಿಂದೆಂದೂ ಕಾಣದ ತ್ವರಿತತೆಯಿಂದ ಕ್ರಮ ಕೈಗೊಂಡಿದ್ದಾರೆ. ಇದು ಅತ್ಯಂತ ಜನಭರಿತ ರಾಜ್ಯವನ್ನು ಭಾರೀ ಕಾನೂನು ಮತ್ತು ಶಿಸ್ತಿನ ಮಹಾ ಬಿಕ್ಕಟ್ಟಿನಿಂದ ಬಚಾವು ಮಾಡಿದೆ. ಅದು ಸಾರ್ವಜನಿಕ ಶಾಂತಿಯನ್ನು ಯಾರಾದರೂ ಕದಡುವ ಮುನ್ನವೇ ಕಾಪಾಡಿದೆ. ಇದು ಮಹಾ ಗಟ್ಟಿಗ ನಾಯಕನ ನಾಯಕತ್ವದಲ್ಲಿ ಮಾತ್ರ ಸಾಧ್ಯ. ಅವರ ಕಾರ್ಯದಕ್ಷತೆಯನ್ನು ಕೊಂಡಾಡುವ ಬದಲು ಟೀಕಾಕಾರರು ಪೊಲೀಸರು ಮತ್ತು ಯೋಗಿಯ ಮೇಲೆ ಎಗರಿಬಿದ್ದಿದ್ದಾರೆ

ಒಬ್ಬ ಮಹಿಳೆ ಮುಖ್ಯಮಂತ್ರಿ ಯೋಗಿಯ ಮೇಲೆ (ಪರಸ್ಪರ) ಪ್ರೇಮ ತೋರುವ ವಿಡಿಯೊ ಯೋಗಿ ಭಕ್ತರನ್ನು ರೊಚ್ಚಿಗೆಬ್ಬಿಸುತ್ತದೆ ಎಂದು ಯುಪಿಯ ಪೊಲೀಸ್‌ವಾಲರಿಗೆ ಗೊತ್ತು. ಭಾವನೆ ಘಾಸಿಗೊಂಡ ಭಕ್ತರು ಸಾಮೂಹಿಕ ವಿನಾಶದ ಅಸ್ತ್ರಗಳಿಗಿಂತಲೂ ಅಪಾಯಕಾರಿ ಎಂಬುದೂ ಅವರಿಗೆ ಗೊತ್ತು.

ಆದುದರಿಂದ, ಸಾರ್ವಜನಿಕ ಶಾಂತಿಗೆ ಭಾರೀ ಬಿಕ್ಕಟ್ಟು ಕವಿದಿರುವುದನ್ನು ಪೊಲೀಸರು ಸರಿಯಾಗಿಯೇ ಗ್ರಹಿಸಿದ್ದಾರೆ. ತ್ವರಿತ ಕಾರ್ಯಾಚರಣೆಯ ಮೂಲಕ ಇಂತಹ ಒಂದು ಸ್ಫೋಟಕ ಮಾಹಿತಿಯನ್ನು ಪ್ರಸಾರ ಮಾಡಿದ ಜನರನ್ನು ಬಂಧಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ನಮ್ಮ ನೆಚ್ಚಿನ ಸ್ವಾತಂತ್ರ್ಯದ ಹಕ್ಕಿಗೆ ಏನಾದರೂ ಆದರೆ, ಯಾರು ತಾನೇ ಲೆಕ್ಕಿಸುತ್ತಾರೆ! ಬಹುಶಃ ಅದು ಬಹಳ ಹಿಂದೆಯೇ ಸತ್ತಿದೆ. ಬಹುಶಃ ನಾವೀಗ ಕೊನೆಯ ಸುತ್ತಿನ ಶ್ರದ್ಧಾಂಜಲಿಯನ್ನು ಓದುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....