Homeಮುಖಪುಟವಾಕ್ ಸ್ವಾತಂತ್ರ್ಯದ ಮೇಲೆ ಯೋಗಿ ಮೇಷ್ಟ್ರ ಪಾಠ

ವಾಕ್ ಸ್ವಾತಂತ್ರ್ಯದ ಮೇಲೆ ಯೋಗಿ ಮೇಷ್ಟ್ರ ಪಾಠ

- Advertisement -
- Advertisement -

| ಲೋಕೇಶ್ ಮಾಲ್ತಿ ಪ್ರಕಾಶ್ |
ಅನುವಾದ: ನಿಖಿಲ್ ಕೋಲ್ಪೆ

ಸತ್ತವರ ಕುರಿತು ನಾಲ್ಕು ಒಳ್ಳೆಯ ಮಾತುಗಳನ್ನೇ ಆಡುವುದು ನಮ್ಮ ದೇಶದ ಸಂಪ್ರದಾಯ. ನಾವು ದೈವಭಯ ಇರುವ ಜನರು ಮತ್ತು ನಮಗಿಂತ ಸತ್ತವರು ದೇವರಿಗೆ ಹೆಚ್ಚು ಹತ್ತಿರವಾದವರು ಎಂದು ನಂಬುವವರಾದುದರಿಂದ ನಾವು ಸತ್ತವರ ಬಗ್ಗೆ ಒಳ್ಳೆಯದನ್ನೇ ಮಾತನಾಡುತ್ತೇವೆ. ಸತ್ತವರು ನಮಗೆ ಭಾರತದ ನ್ಯಾಯಾಲಯದಲ್ಲಿಯ ಬೆಳಗ್ಗಿನ ದೇಖಾವೆಗೆ ಪಕ್ಕಾ ಟಿಕೆಟ್ ದೊರಕಿಸಿಕೊಡಬಲ್ಲ ಖಾನ್ ಮಾರ್ಕೆಟ್ ಗ್ಯಾಂಗ್ ಇದ್ದಂತೆ. ಕೆಲವೊಮ್ಮೆ ನಾವು ಹಿಟ್ಲರ್ ನಮ್ಮಲ್ಲಿ ಹುಟ್ಟಲಿಲ್ಲವಲ್ಲ ಎಂದು ಸ್ವಲ್ಪ ಸಮಾಧಾನಪಡುವುದುಂಟು! ಖಂಡಿತವಾಗಿಯೂ ಆತನಿಗೆ ಸ್ಪರ್ಧೆ ನೀಡಬಲ್ಲ ದೇಸಿ ತಳಿಗಳು ನಮ್ಮಲ್ಲಿವೆಯದರೂ….

ಆದುದರಿಂದ, ಮೊನ್ನೆ ಸುಪ್ರೀಂಕೋರ್ಟ್ ಸ್ವಾತಂತ್ರ್ಯವು ಪವಿತ್ರವಾದುದು, ಅದರಲ್ಲಿ ಚೌಕಾಸಿ ಮಾಡುವಂತಿಲ್ಲ ಎಂದಿತ್ಯಾದಿಯಾಗಿ ಮೂಲಭೂತ ಹಕ್ಕುಗಳ ಕುರಿತು ನಾಲ್ಕು ಒಳ್ಳೆಯ ಮಾತುಗಳನ್ನು ಆಡಿದಾಗ ನನಗೆ ಸ್ವಲ್ಪ ಗಲಿಬಿಲಿಯಾಯಿತು. ಹೌದೇ? ಇದು ನಿಜವೇ? “ಏ ಇಲ್ಲ! ಇದು ಹಸಿಸುಳ್ಳು” ಎಂದು ಗಟ್ಟಿಯಾಗಿ ಕಿರುಚಿಕೊಳ್ಳುವುದರಿಂದ ನಾನು ಸ್ವಲ್ಪ ಪ್ರಯತ್ನದ ಬಳಿಕವಷ್ಟೇ ತಡೆದುಕೊಂಡೆ! ಸ್ವಾತಂತ್ರ್ಯದ ಹಕ್ಕು ಸತ್ತಿದೆಯೇ? ಸಾವು ಮತ್ತು ವಂಚನೆಯ ಈ ಭವದಲ್ಲಿ ಬಿಟ್ಟು ಅದು ಸ್ವರ್ಗವಾಸಿಯಾಗಿದೆಯೆ? (ಅದಕ್ಕಾಗಿಯೇ ಹೊಗಳುತ್ತಿದ್ದಾರೆಯೆ?)

ಈ ದೇಶದಲ್ಲಿ ಮೂಲಭೂತ ಹಕ್ಕುಗಳು ಸತ್ತು ಬಹಳ ಕಾಲವಾಗಿಹೋಗಿದೆ ಎಂದು ಟೀಕಾಕಾರರು ಖಂಡಿತಾ ಹೇಳಬಹುದು. ಇವರಲ್ಲಿ ಕಟು ಟೀಕಾಕಾರರು, ಇಲ್ಲಪ್ಪಾ, ಅದು ಇನ್ನೂ ಹುಟ್ಟಿಯೇ ಇಲ್ಲವಾದುದರಿಂದ ಸಾಯುವ ಪ್ರಶ್ನೆ ಶುದ್ಧ ಸುಳ್ಳೆಂದು ತಗಾದೆ ಎತ್ತಬಹುದು.

ಈ ವಿಷಯಕ್ಕೆ ಬಂದಾಗ, ನಾನೊಬ್ಬ ದೇಶಭಕ್ತ ಮತ್ತು ಈ ತಳಿಯ ಇತರ ಪ್ರಭೇದಗಳಂತೆ. ಮತ್ತು ಅವರಷ್ಟೇ ನಾನು ಕೂಡಾ ವಾಕ್ ಸ್ವಾತಂತ್ರ್ಯದ ಸಂಪೂರ್ಣ ಬೆಂಬಲಿಗ ಎಂದು ಮೊದಲಿಗೇ ಹೇಳಿಬಿಡುತ್ತೇನೆ. ನಮ್ಮ ಸರಕಾರಗಳು ಸಂವಿಧಾನವನ್ನು ಅಕ್ಷರಶಃ ಅನುಸರಿಸುತ್ತವೆ. ಮತ್ತು ಸರಕಾರವೂ ದೇಶಭಕ್ತವಾಗಿದ್ದಲ್ಲಿ ಸಂವಿಧಾನದ ಕುರಿತು ಅದರ ನಿಷ್ಟೆಯನ್ನು ಯಾರೂ ಸಂಶಯಿಸಬಾರದು. ಮೊನ್ನೆಯಷ್ಟೇ ಮೋದೀಜಿ ಸಂವಿಧಾನಕ್ಕೆ ಹೇಗೆ ಕೈಮುಗಿದು ತಲೆಬಾಗಿದರೆಂದು ನೀವು ನೋಡಿಲ್ಲವೆ? ಸಂವಿಧಾನ ಮತ್ತು ಕಾನೂನು ಯಾವತ್ತೂ ಇದಕ್ಕಿಂತ ಸುರಕ್ಷಿತ ಕೈಗಳಲ್ಲಿ ಇರಲಿಲ್ಲ; ಇರುವುದು ಸಾಧ್ಯವೂ ಇಲ್ಲ.

ಹೀಗಿದ್ದರೂ, ಈ ಖಾನ್ ಮಾರ್ಕೆಟ್ ಗ್ಯಾಂಗ್ ಒಂದು ದೇಶಭಕ್ತ ಸರಕಾರ ಮತ್ತದರ ವೀರ ಪೊಲೀಸರನ್ನು ಮೇಲೆ ಕೆಸರೆರಚುವ ಕಿಂಚಿತ್ ಅವಕಾಶವನ್ನೂ ತಪ್ಪಿಸಿಕೊಳ್ಳುವುದಿಲ್ಲ. ಉತ್ತರಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿಯ ವೈಯಕ್ತಿಕ ಬದುಕಿನ ಬಗೆಗಿನ ಕೆಲವು ಜುಜುಬಿ ವಿಷಯಗಳ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿಯೋ, ಅದಾವುದೋ ನ್ಯೂಸ್ ಚಾನೆಲಿನಲ್ಲಿ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿಯೋ ಕೆಲವು ಪತ್ರಕರ್ತರನ್ನು ಬಂಧಿಸಿದ ಚಿಕ್ಕ ವಿಷಯದ ಬಗ್ಗೆ ಸುಮ್ಮಸುಮ್ಮನೆ ಗದ್ದಲ ಎಬ್ಬಿಸಲಾಗುತ್ತಿದೆ. ಅವರು ಮಾಧ್ಯಮ ವೃತ್ತಿಯ ಮರ್ಯಾದೆಯನ್ನು ಮೀರಿದ್ದಾರೆ. ಅವರಿಗೆ ಟ್ವೀಟ್ ಮಾಡಲು ಬೇರೆಷ್ಟೋ ವಿಷಯಗಳಿದ್ದವು. ಅವರು ಬೇಕಾದರೆ ಯೋಗಿ ಸರಕಾರ ಮತ್ತೆ ಜೀವನೀಡುತ್ತಿರುವ ಏಂಟಿರೋಮಿಯೋ ಸ್ಕ್ವಾಡ್ ಬಗ್ಗೆ ಟ್ವೀಟ್ ಮಾಡಬಹುದಿತ್ತು. ಅದು ಬೇಡವೆಂದರೆ ಬೆಂಕಿಹಚ್ಚುವ ಭಾಷಣಗಳ ಬಗ್ಗೆ ಟ್ವೀಟ್ ಮಾಡಬಹುದಿತ್ತು. ಅದೂ ಬೇಡ ಎಂದಾದರೆ, ಹದಗೆಡುತ್ತಿರುವ ಸಾರ್ವಜನಿಕ ಆರೋಗ್ಯ ಸೇವೆಗಳು, ಸರಕಾರಿ ಶಾಲಾ ಸೌಲಭ್ಯಗಳ ಬಗ್ಗೆ, ನಿರುದ್ಯೋಗದ ಬಗ್ಗೆ, ಗೋರಕ್ಷಕ ಗ್ಯಾಂಗುಗಳ ಬಗ್ಗೆ ಇತ್ಯಾದಿ ಇತ್ಯಾದಿಗಳ ಬಗ್ಗೆ ಮಾತಾಡಬಹುದಿತ್ತು. ಮಾತಾಡಲು ಮತ್ತು ಟ್ವೀಟ್ ಮಾಡಲು ಎಷ್ಟೊಂದು ವಿಷಯಗಳಿವೆ! ಇಷ್ಟಿದ್ದರೂ ಅವರು ಸುಮ್ಮಸುಮ್ಮನೇ ಗಾಸಿಪ್‌ಗಳ ಹಿಂದೆಬಿದ್ದರು! ಯೋಗಿ ಸಾರ್ವಜನಿಕ ನೈತಿಕತೆಯ ಟೇಕೇದಾರನಾಗಿರುವುದರಿಂದ ಕ್ರಮ ಕೈಗೊಳ್ಳಲೇಬೇಕಾಗಿತ್ತು, ಅವರಿಗೆಲ್ಲಾ ಒಂದು ಪಾಠ ಕಲಿಸಲೇಬೇಕಾಗಿತ್ತು.. ಅವರ ಪೊಲೀಸರು ಆ ಕೆಲಸ ಮಾಡಿದರು ಅಷ್ಟೇ.

ನೈತಿಕ ಶಿಕ್ಷಣಕ್ಕೆ ಹೊರತಾಗಿ ಯುಪಿ ಪೊಲೀಸರು ಕಾನೂನು ಮತ್ತು ಶಿಸ್ತು ಅಥವಾ ನಿಖರವಾಗಿ ಹೇಳಬೇಕೆಂದರೆ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡುವ ಕೆಲಸವನ್ನು ಕೈಗೆತ್ತಿಕೊಂಡರು. ಪೊಲೀಸರು ಏನು ಮಾಡಬೇಕೋ ಯುಪಿ ಪೊಲೀಸರು ಅದನ್ನೇ ಮಾಡಿದರು. ಕೆಲ ಸಮಯದ ಹಿಂದೆ ಬಂಗಾಳದಲ್ಲಿ, ಕರ್ನಾಟಕದಲ್ಲಿ, ಮತ್ತೇ ಅನೇಕ ಕಡೆಗಳಲ್ಲಿ ಮಾಡಿದ್ದನ್ನೇ ಅವರು ಮಾಡಿದ್ದು. ಪೋಲೀಸರು ಇಲ್ಲದಿದ್ದರೆ, ಈ ದೇಶದಲ್ಲಿ ಕಾನೂನು ಮತ್ತು ಶಿಸ್ತು ಎಂಬುದೊಂದು ಇದೆ ಎಂದು ಈ ಜನಸಾಮಾನ್ಯರು ಮರೆತೇಬಿಡುತ್ತಾರೆ. ಇದರಿಂದ ವಿನಾಯಿತಿ ಇರುವುದು ನೀರವ್ ಮೋದಿಯಂತಹ ಜನರಿಗೆ ಮಾತ್ರ. ಅದನ್ನು ಇತರರಿಗೆ ನೀಡುವಂತಿಲ್ಲ. ಅದೂ ಕೂಡಾ ರಾಮರಾಜ್ಯ ಇನ್ನೇನು ಹತ್ತಿರದಲ್ಲೇ ಇದೆ ಎನ್ನುವಾಗ ಅದನ್ನು ಕೊಡಲಾದೀತೆ? ಪೊಲೀಸರ ತ್ವರಿತ ಕ್ರಮಕ್ಕಾಗಿ ಅವರಿಗೆ ಶಹಬ್ಬಾಷ್‌ಗಿರಿ ನೀಡಬೇಕಾದಲ್ಲಿ ಈ ಖಾನ್ ಮಾರ್ಕೆಟ್ ಗ್ಯಾಂಗ್ ಪೊಲೀಸರ ಮಾನಹಾನಿ ಮಾಡಿ ಅವರ ನೈತಿಕ ಸ್ಥೈರ್ಯವನ್ನು ಕೆಡಿಸಲು ಎದ್ದುನಿಂತಿದೆ.

ಬಾಲಿವುಡ್ ಚಿತ್ರಗಳಲ್ಲಿ ಕೂಡ ಸಮಯಕ್ಕೆ ಸರಿಯಾಗಿ ತಲುಪಿ ಅಪರಾಧವನ್ನು ತಡೆಗಟ್ಟಲಾಗದ ಪೋಲಿಸರು ನಿಜ ಜೀವನದಲ್ಲಿ ಹಿಂದೆಂದೂ ಕಾಣದ ತ್ವರಿತತೆಯಿಂದ ಕ್ರಮ ಕೈಗೊಂಡಿದ್ದಾರೆ. ಇದು ಅತ್ಯಂತ ಜನಭರಿತ ರಾಜ್ಯವನ್ನು ಭಾರೀ ಕಾನೂನು ಮತ್ತು ಶಿಸ್ತಿನ ಮಹಾ ಬಿಕ್ಕಟ್ಟಿನಿಂದ ಬಚಾವು ಮಾಡಿದೆ. ಅದು ಸಾರ್ವಜನಿಕ ಶಾಂತಿಯನ್ನು ಯಾರಾದರೂ ಕದಡುವ ಮುನ್ನವೇ ಕಾಪಾಡಿದೆ. ಇದು ಮಹಾ ಗಟ್ಟಿಗ ನಾಯಕನ ನಾಯಕತ್ವದಲ್ಲಿ ಮಾತ್ರ ಸಾಧ್ಯ. ಅವರ ಕಾರ್ಯದಕ್ಷತೆಯನ್ನು ಕೊಂಡಾಡುವ ಬದಲು ಟೀಕಾಕಾರರು ಪೊಲೀಸರು ಮತ್ತು ಯೋಗಿಯ ಮೇಲೆ ಎಗರಿಬಿದ್ದಿದ್ದಾರೆ

ಒಬ್ಬ ಮಹಿಳೆ ಮುಖ್ಯಮಂತ್ರಿ ಯೋಗಿಯ ಮೇಲೆ (ಪರಸ್ಪರ) ಪ್ರೇಮ ತೋರುವ ವಿಡಿಯೊ ಯೋಗಿ ಭಕ್ತರನ್ನು ರೊಚ್ಚಿಗೆಬ್ಬಿಸುತ್ತದೆ ಎಂದು ಯುಪಿಯ ಪೊಲೀಸ್‌ವಾಲರಿಗೆ ಗೊತ್ತು. ಭಾವನೆ ಘಾಸಿಗೊಂಡ ಭಕ್ತರು ಸಾಮೂಹಿಕ ವಿನಾಶದ ಅಸ್ತ್ರಗಳಿಗಿಂತಲೂ ಅಪಾಯಕಾರಿ ಎಂಬುದೂ ಅವರಿಗೆ ಗೊತ್ತು.

ಆದುದರಿಂದ, ಸಾರ್ವಜನಿಕ ಶಾಂತಿಗೆ ಭಾರೀ ಬಿಕ್ಕಟ್ಟು ಕವಿದಿರುವುದನ್ನು ಪೊಲೀಸರು ಸರಿಯಾಗಿಯೇ ಗ್ರಹಿಸಿದ್ದಾರೆ. ತ್ವರಿತ ಕಾರ್ಯಾಚರಣೆಯ ಮೂಲಕ ಇಂತಹ ಒಂದು ಸ್ಫೋಟಕ ಮಾಹಿತಿಯನ್ನು ಪ್ರಸಾರ ಮಾಡಿದ ಜನರನ್ನು ಬಂಧಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ನಮ್ಮ ನೆಚ್ಚಿನ ಸ್ವಾತಂತ್ರ್ಯದ ಹಕ್ಕಿಗೆ ಏನಾದರೂ ಆದರೆ, ಯಾರು ತಾನೇ ಲೆಕ್ಕಿಸುತ್ತಾರೆ! ಬಹುಶಃ ಅದು ಬಹಳ ಹಿಂದೆಯೇ ಸತ್ತಿದೆ. ಬಹುಶಃ ನಾವೀಗ ಕೊನೆಯ ಸುತ್ತಿನ ಶ್ರದ್ಧಾಂಜಲಿಯನ್ನು ಓದುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...