Homeಮುಖಪುಟಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಅರ್ನಾಬ್ ಗೋಸ್ವಾಮಿ ವರದಿ ಮಾಡುವಾಗ ಜವಾಬ್ದಾರಿಯಿಂದ ವರ್ತಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ ಸೂಚಿಸಿದರು.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧದ ತನಿಖೆಗೆ ಜೂನ್ 30 ರಂದು ಬಾಂಬೆ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಮಹರಾಷ್ಟ್ರ ಸರ್ಕಾರ ನೀಡಿದ್ದ ಮೇಲ್ಮನವಿಯನ್ನು ಆಲಿಸುತ್ತಿದ್ದ ಸುಪ್ರೀಂಕೋರ್ಟ್, ”ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆಗಳನ್ನು ಕೇಳಬಾರದು ಎಂದು ಅರ್ಥವಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಪಾಲ್ಘರ್ ಗುಂಪುಹತ್ಯೆ ಮತ್ತು ಬಾಂದ್ರಾ ಬಸ್ ನಿಲ್ದಾಣದಲ್ಲಿ ವಲಸೆ ಕಾರ್ಮಿಕರು ಗುಂಪು ಸೇರಿದ್ದ ಘಟನೆಯನ್ನು ಕೋಮು ದ್ವೇಷ ಹರಡಲು ಪ್ರಚೋದಿಸಿದ ಆರೋಪದಲ್ಲಿ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎರಡು ಎಫ್ಐಆರ್ ಅನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ರಿಪಬ್ಲಿಕ್ ಟಿವಿ ಕಾರ್ಯಕ್ರಮಗಳನ್ನು ಪ್ರಶ್ನಿಸಿ ನ್ಯಾಯಾಲಯ ಹತ್ತಿದ ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ, ಅರ್ನಾಬ್ ವಿರುದ್ಧದ ಸಂಪೂರ್ಣ ತನಿಖೆಯನ್ನು ತಡೆಹಿಡಿಯುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆಂದು ಲೈವ್ ಲಾ ವರದಿ ಮಾಡಿದೆ.

“ತನಿಖೆ ಮತ್ತೇ ಪ್ರಾರಂಭವಾದರೆ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ ಅವರು, ”ಕೆಲವು ಜನರು ಕಾನೂನಿಗಿಂತ ಮೇಲಿದ್ದಾರೆ ಎಂದು ಸಂದೇಶವು ಹೋಗಬಾರದು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ, “ಯಾರೂ ಕಾನೂನಿನ ಮೇಲಿರದಿದ್ದರೂ, ಕೆಲವು ಜನರು ಗುರಿಯಾಗುತ್ತಾರೆ. ಈ ಸಮಯದಲ್ಲಿ ಅವರಿಗೆ ಹೆಚ್ಚಿನ ಮಟ್ಟದ ರಕ್ಷಣೆ ನೀಡುವ ಸಂಪ್ರದಾಯ ಇದೆ” ಎಂದು ಹೇಳಿದರು.

PC: Sujit Jaiswal/AFP

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಅರ್ನಾಬ್ ಗೋಸ್ವಾಮಿ ಅವರ ಸಲಹೆಗಾರ ಹರೀಶ್ ಸಾಲ್ವೆಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ಪತ್ರಿಕಾ ಸ್ವಾತಂತ್ರ್ಯವು ನಿರ್ಣಾಯಕ ಎಂದು ನ್ಯಾಯಾಲಯ ಒಪ್ಪಿಕೊಂಡರೂ, ಮಾಧ್ಯಮದ ಒಬ್ಬ ವ್ಯಕ್ತಿಯಾಗಿ ನಿಮ್ಮ ಕಕ್ಷಿದಾರರನ್ನು ಯಾವುದೇ ಪ್ರಶ್ನೆ ಕೇಳಬಾರದು ಎಂಬ ಮನವಿಯನ್ನು ಪ್ರಶಂಸಿಸುವುದಿಲ್ಲ” ಎಂದು ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯು ವರದಿ ಮಾಡುವಾಗ ಜವಾಬ್ದಾರಿಯಿಂದ ವರ್ತಿಸುವಂತೆ ನ್ಯಾಯಮೂರ್ತಿ ಸೂಚಿಸಿದರು. ನ್ಯಾಯಾಲಯದ ವಿಷಯವನ್ನು ಒಪ್ಪಿದ ಅರ್ನಾನ್ ಪರ ಹಾಜರಾದ ವಕೀಲ ಸಾಲ್ವೆ, ಅರ್ನಾಬ್‌ ವಿರುದ್ದದ ಎಫ್‌ಐಆರ್‌ಗಳು ನಿಜವಲ್ಲ, ಅದನ್ನು ಗಣನೆಗೆ ತೆಗೆದು ಕೊಳ್ಳಬಾರದು ಎಂದು ಹೇಳಿದರು.

ಗೋಸ್ವಾಮಿ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದ್ದು, ವಿಚಾರಣೆಯನ್ನು ಎರಡು ವಾರಗಳ ನಂತರ ಮಾಡುವುದಾಗಿ ಪ್ರಕಟಿಸಿತು.

ಇದನ್ನೂ ಒದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...