Homeಕರ್ನಾಟಕಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

- Advertisement -
- Advertisement -

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ ಫ್ರೀಡಂ ಪಾರ್ಕ್‌ ಬಂದ್ ಮಾಡಲಾಗಿದೆ. 

22 ಎಕರೆ ಜಾಗದಲ್ಲಿ ವ್ಯಾಪಿಸಿರುವ ಫ್ರೀಡಂ ಪಾರ್ಕ್ ಅನ್ನು ಒಳಗಿನಿಂದ ಬಂದ್ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಹೀಗಾಗಿ ಇದೀಗ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್ ಹೊರಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಿಯೂ ಪ್ರತಿಭಟನೆಗೂ ಅವಕಾಶ ಕೊಡದಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.

ಬ್ರ್ಯಾಂಡ್ ಬೆಂಗಳೂರು ಹೆಸರಿನಡಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ ಫ್ರೀಡಂ ಪಾರ್ಕ್​​ನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫ್ರೀಡಂ ಪಾರ್ಕ್​​ನಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಹೋರಾಟಗಾರರು, ನಡಿಗೆದಾರರು, ಪ್ರತಿಭಟನೆ, ಚಿತ್ರೀಕರಣ, ಸಾರ್ವಜನಿಕರಿಗೆ ಇತರೆ ಉದ್ದೇಶಗಳಿಗೆ ಅವಕಾಶ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ 5 ಕೋಟಿ ರೂ ವೆಚ್ಚದಲ್ಲಿ ಶೌಚಾಲಯ, ಹೋರಾಟಗಾರರಿಗೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿ ತೀವ್ರಗತಿಯಿಂದ ಸಾಗಿದೆ. ಇದೀಗ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ನೀರಿನ ಸೌಲಭ್ಯವೂ ಸಹ ಇಲ್ಲವಾಗಿದೆ. ಇಲ್ಲಿ ಶಾಶ್ವತ ಕಾಮಗಾರಿ ಪೂರ್ಣಗೊಳ್ಳುವವರೆಗೆ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡುವುದನ್ನು ನಿಲ್ಲಿಸಲು ಮನವಿ ಮಾಡಲಾಗಿದೆ. 

ಇದೇ ವಾರದಲ್ಲಿ ಪ್ರತಿಭಟನೆಗೆ ಅವಕಾಶ ಕೊಡದಿರಲು ಚಿಂತನೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ನಡಿಗೆದಾರರು, ಫ್ರೀಡಂ ಪಾರ್ಕ್ ಕ್ಲೋಸ್ ಮಾಡಿದ್ದರಿಂದ ನಮಗೆ ವಾಕ್ ಮಾಡಲು ಆಗುತ್ತಿಲ್ಲ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದಿದ್ದಾರೆ.

ಒಟ್ಟಿನಲ್ಲಿ, ಈಗಾಗಲೇ ಅಭಿವೃದ್ಧಿ ಕಾಮಗಾರಿಗಾಗಿ ಫ್ರೀಡಂ ಪಾರ್ಕ್ ಕ್ಲೋಸ್ ಮಾಡಲಾಗಿದೆ. ಇದರಿಂದ ಹೋರಾಟಗಾರಿಗೆ ಸಮಸ್ಯೆ ಆಗುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಪಾರ್ಕ್ ಓಪನ್ ಮಾಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...

ಇಂಡಿಗೋ ಏರ್ ಲೈನ್ಸ್, ಮುಗಿಯದ ಸಂಕಷ್ಟ: ಬೆಂಗಳೂರಿನಲ್ಲಿ 73 ವಿಮಾನ, ಸೇರಿ ಹಲವು ವಿಮಾನ ನಿಲ್ದಾಣಗಳಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಕಾರ್ಯಾಚರಣೆಯಲ್ಲಿ ಬಹುದೊಡ್ಡ ಅಡಚಣೆಗಳನ್ನು ಎದುರಿಸಿದ್ದರಿಂದ ಡಿಸೆಂಬರ್ 3ರಿಂದ, ವಿವಿಧ ವಿಮಾನ ನಿಲ್ದಾಣಗಳಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ...

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವು, ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಜನ ನಕ್ಸಲರು ಸಾವನ್ನಪ್ಪಿದ್ದು, ದುರದೃಷ್ಟವಶಾತ್, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ,...