Homeಮುಖಪುಟಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

- Advertisement -
- Advertisement -

ಎರಡು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತೆಯಾಗಿ ಭಾರತದಲ್ಲಿದ್ದ ಫ್ರಾನ್ಸ್‌ನ ವನೆಸ್ಸಾ ಡೊನಾಕ್ ಅವರು ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರದ ಮೋದಿ ಸರ್ಕಾರದ ಧೋರಣೆಯಿಂದ ಬೇಸತ್ತು ತವರಿಗೆ ಮರಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

‘ದುರುದ್ದೇಶಪೂರಿತ’ ವರದಿ ಮಾಡಿದ್ದಾರೆ ಎಂದು ಆರೋಪಿಸಿ, ನಿಮ್ಮ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್ ಏಕೆ ರದ್ದು ಮಾಡಬಾರದು? ಎಂದು ವನೆಸ್ಸಾ ಅವರಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಕಳೆದ ತಿಂಗಳು ನೋಟಿಸ್ ನೀಡಿತ್ತು. ಇದರಿಂದ ಬೇಸರಗೊಂಡ ವನೆಸ್ಸಾ ಭಾರತ ತೊರೆದಿದ್ದಾರೆ ಎನ್ನಲಾಗಿದೆ.

“ನಾನು 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿ ಬಂದು 23 ವರ್ಷಗಳ ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿದ ದೇಶವನ್ನು ತೊರೆಯುತ್ತಿದ್ದೇನೆ. ನನ್ನ ವಿರುದ್ದ ಆರೋಪಗಳು ಕೇಳಿ ಬಂದಿರುವ ಕಾರಣ ಇಲ್ಲಿ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದು ಶುಕ್ರವಾರ ಭಾರತ ತೊರೆಯುವಾಗ ವನೆಸ್ಸಾ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನನ್ನು ಬಲವಂತವಾಗಿ ದೇಶದಿಂದ ಹೊರದಬ್ಬಿದೆ ಎಂಬರ್ಥದಲ್ಲೇ ಅವರು ಹೇಳಿಕೆ ಕೊಟ್ಟಿದ್ದಾರೆ.

“ಒಂದು ವರ್ಷದ ಹಿಂದೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪತ್ರಕರ್ತೆಯಾಗಿ ಕೆಲಸ ಮಾಡುವ ನನ್ನ ಹಕ್ಕನ್ನು ನಿರಾಕರಿಸಿತ್ತು. ಅದಕ್ಕೆ ಯಾವುದೇ ಕಾರಣ ಅಥವಾ ಸಮರ್ಥನೆಗಳನ್ನು ನೀಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ನಡೆಸಿಲ್ಲ” ಎಂದು ವನೆಸ್ಸಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನನ್ನ ಪತ್ರಿಕಾ ವೃತ್ತಿಯ ಹಕ್ಕನ್ನು ನಿರಾಕರಿಸಿದ್ದನ್ನು ಮರು ಪರಿಶೀಲಿಸುವಂತೆ ಗೃಹ ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾನು ದೇಶದ ಹಿತಾಸಕ್ತಿಗೆ ವಿರುದ್ದವಾಗಿ ಕೆಲಸ ಮಾಡಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಮರ್ಥ ವೇದಿಕೆಗಳ ಮುಂದೆ ಈ ಆರೋಪಗಳ ವಿರುದ್ಧ ಹೋರಾಡುತ್ತೇನೆ. ಕಾನೂನು ಪ್ರಕ್ರಿಯೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲ ಒಂದು ದಿನ ಭಾರತಕ್ಕೆ ಮರಳುವ ಭರವಸೆಯಿದೆ. ಆದರೆ, ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ. ನನ್ನ ಪತ್ರಿಕಾ ವೃತ್ತಿಯನ್ನು ಬದಲಾಯಿಸುವಂತೆ ಅಧಿಕಾರಿಗಳು ಒತ್ತಡ ಹೇರಿದ್ದರು. ಆದರೆ, ಅದು ನನಗೆ ಸಾಧ್ಯವಿಲ್ಲ. ನಾನು ಪತ್ರಕರ್ತೆ, ನನ್ನ ಮನಸ್ಸಿಗೆ ಪ್ರಿಯವಾದ ವೃತ್ತಿಯನ್ನು ಯಾವುದೇ ಆರೋಪಗಳು ಸಾಭೀತಾಗದೆ ತ್ಯಜಿಸಲು ನಾನು ಒಪ್ಪುವುದಿಲ್ಲ” ಎಂದು ವನೆಸ್ಸಾ ಹೇಳಿದ್ದಾರೆ.

ಕಳೆದ ತಿಂಗಳು ಗಣರಾಜ್ಯೋತ್ಸವದ ಆಚರಣೆಗಾಗಿ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಫ್ರಾನ್ಸ್ ಭಾರತದೊಂದಿಗೆ ವನೆಸ್ಸಾ ಅವರ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿತ್ತು. ಈ ವೇಳೆ ಭಾರತ, ಈ ಸಮಸ್ಯೆಯು ‘ದೇಶದ ನಿಯಮಗಳು ಮತ್ತು ನಿಬಂಧನೆಗಳ ಅನುಸರಣೆ’ಗೆ ಸಂಬಂಧಿಸಿದೆ. ಅಲ್ಲದೆ, ವನೆಸ್ಸಾ ಅವರ ಪತ್ರಿಕಾ ವೃತ್ತಿಗೆ ಸಂಬಂಧಿಸಿಲ್ಲ ಎಂದು ಫ್ರಾನ್ಸ್‌ಗೆ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ವನೆಸ್ಸಾ ಅವರು ಫ್ರಾನ್ಸ್, ಸ್ವಿಟ್ಜರ್‌ಲೆಂಡ್ ಮತ್ತು ಬೆಲ್ಜಿಯಂನ ಪತ್ರಿಕೆಗಳಿಗೆ ದಕ್ಷಿಣ ಏಷ್ಯಾದ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು. ಭಾರತೀಯ ಪತ್ರಕರ್ತನನ್ನು ವಿವಾಹವಾಗಿರುವ ವನೆಸ್ಸಾ ಅವರು, 23 ವರ್ಷಗಳ ಪತ್ರಿಕಾ ವೃತ್ತಿಯಲ್ಲಿ ‘ಮಾವೋವಾದಿ ದಂಗೆ’ ಸೇರಿದಂತೆ ಹಲವು ಬರಹಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ: ಬಹುಮತವಿದ್ದರೂ ವಿಶ್ವಾಸಮತ ನಿಲುವಳಿ ಮಂಡಿಸಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...