Homeಮುಖಪುಟಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

- Advertisement -
- Advertisement -

ಎರಡು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತೆಯಾಗಿ ಭಾರತದಲ್ಲಿದ್ದ ಫ್ರಾನ್ಸ್‌ನ ವನೆಸ್ಸಾ ಡೊನಾಕ್ ಅವರು ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರದ ಮೋದಿ ಸರ್ಕಾರದ ಧೋರಣೆಯಿಂದ ಬೇಸತ್ತು ತವರಿಗೆ ಮರಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

‘ದುರುದ್ದೇಶಪೂರಿತ’ ವರದಿ ಮಾಡಿದ್ದಾರೆ ಎಂದು ಆರೋಪಿಸಿ, ನಿಮ್ಮ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್ ಏಕೆ ರದ್ದು ಮಾಡಬಾರದು? ಎಂದು ವನೆಸ್ಸಾ ಅವರಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಕಳೆದ ತಿಂಗಳು ನೋಟಿಸ್ ನೀಡಿತ್ತು. ಇದರಿಂದ ಬೇಸರಗೊಂಡ ವನೆಸ್ಸಾ ಭಾರತ ತೊರೆದಿದ್ದಾರೆ ಎನ್ನಲಾಗಿದೆ.

“ನಾನು 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿ ಬಂದು 23 ವರ್ಷಗಳ ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿದ ದೇಶವನ್ನು ತೊರೆಯುತ್ತಿದ್ದೇನೆ. ನನ್ನ ವಿರುದ್ದ ಆರೋಪಗಳು ಕೇಳಿ ಬಂದಿರುವ ಕಾರಣ ಇಲ್ಲಿ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದು ಶುಕ್ರವಾರ ಭಾರತ ತೊರೆಯುವಾಗ ವನೆಸ್ಸಾ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನನ್ನು ಬಲವಂತವಾಗಿ ದೇಶದಿಂದ ಹೊರದಬ್ಬಿದೆ ಎಂಬರ್ಥದಲ್ಲೇ ಅವರು ಹೇಳಿಕೆ ಕೊಟ್ಟಿದ್ದಾರೆ.

“ಒಂದು ವರ್ಷದ ಹಿಂದೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪತ್ರಕರ್ತೆಯಾಗಿ ಕೆಲಸ ಮಾಡುವ ನನ್ನ ಹಕ್ಕನ್ನು ನಿರಾಕರಿಸಿತ್ತು. ಅದಕ್ಕೆ ಯಾವುದೇ ಕಾರಣ ಅಥವಾ ಸಮರ್ಥನೆಗಳನ್ನು ನೀಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ನಡೆಸಿಲ್ಲ” ಎಂದು ವನೆಸ್ಸಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನನ್ನ ಪತ್ರಿಕಾ ವೃತ್ತಿಯ ಹಕ್ಕನ್ನು ನಿರಾಕರಿಸಿದ್ದನ್ನು ಮರು ಪರಿಶೀಲಿಸುವಂತೆ ಗೃಹ ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾನು ದೇಶದ ಹಿತಾಸಕ್ತಿಗೆ ವಿರುದ್ದವಾಗಿ ಕೆಲಸ ಮಾಡಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಮರ್ಥ ವೇದಿಕೆಗಳ ಮುಂದೆ ಈ ಆರೋಪಗಳ ವಿರುದ್ಧ ಹೋರಾಡುತ್ತೇನೆ. ಕಾನೂನು ಪ್ರಕ್ರಿಯೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲ ಒಂದು ದಿನ ಭಾರತಕ್ಕೆ ಮರಳುವ ಭರವಸೆಯಿದೆ. ಆದರೆ, ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ. ನನ್ನ ಪತ್ರಿಕಾ ವೃತ್ತಿಯನ್ನು ಬದಲಾಯಿಸುವಂತೆ ಅಧಿಕಾರಿಗಳು ಒತ್ತಡ ಹೇರಿದ್ದರು. ಆದರೆ, ಅದು ನನಗೆ ಸಾಧ್ಯವಿಲ್ಲ. ನಾನು ಪತ್ರಕರ್ತೆ, ನನ್ನ ಮನಸ್ಸಿಗೆ ಪ್ರಿಯವಾದ ವೃತ್ತಿಯನ್ನು ಯಾವುದೇ ಆರೋಪಗಳು ಸಾಭೀತಾಗದೆ ತ್ಯಜಿಸಲು ನಾನು ಒಪ್ಪುವುದಿಲ್ಲ” ಎಂದು ವನೆಸ್ಸಾ ಹೇಳಿದ್ದಾರೆ.

ಕಳೆದ ತಿಂಗಳು ಗಣರಾಜ್ಯೋತ್ಸವದ ಆಚರಣೆಗಾಗಿ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಫ್ರಾನ್ಸ್ ಭಾರತದೊಂದಿಗೆ ವನೆಸ್ಸಾ ಅವರ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿತ್ತು. ಈ ವೇಳೆ ಭಾರತ, ಈ ಸಮಸ್ಯೆಯು ‘ದೇಶದ ನಿಯಮಗಳು ಮತ್ತು ನಿಬಂಧನೆಗಳ ಅನುಸರಣೆ’ಗೆ ಸಂಬಂಧಿಸಿದೆ. ಅಲ್ಲದೆ, ವನೆಸ್ಸಾ ಅವರ ಪತ್ರಿಕಾ ವೃತ್ತಿಗೆ ಸಂಬಂಧಿಸಿಲ್ಲ ಎಂದು ಫ್ರಾನ್ಸ್‌ಗೆ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ವನೆಸ್ಸಾ ಅವರು ಫ್ರಾನ್ಸ್, ಸ್ವಿಟ್ಜರ್‌ಲೆಂಡ್ ಮತ್ತು ಬೆಲ್ಜಿಯಂನ ಪತ್ರಿಕೆಗಳಿಗೆ ದಕ್ಷಿಣ ಏಷ್ಯಾದ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು. ಭಾರತೀಯ ಪತ್ರಕರ್ತನನ್ನು ವಿವಾಹವಾಗಿರುವ ವನೆಸ್ಸಾ ಅವರು, 23 ವರ್ಷಗಳ ಪತ್ರಿಕಾ ವೃತ್ತಿಯಲ್ಲಿ ‘ಮಾವೋವಾದಿ ದಂಗೆ’ ಸೇರಿದಂತೆ ಹಲವು ಬರಹಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ: ಬಹುಮತವಿದ್ದರೂ ವಿಶ್ವಾಸಮತ ನಿಲುವಳಿ ಮಂಡಿಸಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...