Homeಮುಖಪುಟಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

- Advertisement -
- Advertisement -

ಎರಡು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತೆಯಾಗಿ ಭಾರತದಲ್ಲಿದ್ದ ಫ್ರಾನ್ಸ್‌ನ ವನೆಸ್ಸಾ ಡೊನಾಕ್ ಅವರು ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರದ ಮೋದಿ ಸರ್ಕಾರದ ಧೋರಣೆಯಿಂದ ಬೇಸತ್ತು ತವರಿಗೆ ಮರಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

‘ದುರುದ್ದೇಶಪೂರಿತ’ ವರದಿ ಮಾಡಿದ್ದಾರೆ ಎಂದು ಆರೋಪಿಸಿ, ನಿಮ್ಮ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್ ಏಕೆ ರದ್ದು ಮಾಡಬಾರದು? ಎಂದು ವನೆಸ್ಸಾ ಅವರಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಕಳೆದ ತಿಂಗಳು ನೋಟಿಸ್ ನೀಡಿತ್ತು. ಇದರಿಂದ ಬೇಸರಗೊಂಡ ವನೆಸ್ಸಾ ಭಾರತ ತೊರೆದಿದ್ದಾರೆ ಎನ್ನಲಾಗಿದೆ.

“ನಾನು 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿ ಬಂದು 23 ವರ್ಷಗಳ ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿದ ದೇಶವನ್ನು ತೊರೆಯುತ್ತಿದ್ದೇನೆ. ನನ್ನ ವಿರುದ್ದ ಆರೋಪಗಳು ಕೇಳಿ ಬಂದಿರುವ ಕಾರಣ ಇಲ್ಲಿ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದು ಶುಕ್ರವಾರ ಭಾರತ ತೊರೆಯುವಾಗ ವನೆಸ್ಸಾ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನನ್ನು ಬಲವಂತವಾಗಿ ದೇಶದಿಂದ ಹೊರದಬ್ಬಿದೆ ಎಂಬರ್ಥದಲ್ಲೇ ಅವರು ಹೇಳಿಕೆ ಕೊಟ್ಟಿದ್ದಾರೆ.

“ಒಂದು ವರ್ಷದ ಹಿಂದೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪತ್ರಕರ್ತೆಯಾಗಿ ಕೆಲಸ ಮಾಡುವ ನನ್ನ ಹಕ್ಕನ್ನು ನಿರಾಕರಿಸಿತ್ತು. ಅದಕ್ಕೆ ಯಾವುದೇ ಕಾರಣ ಅಥವಾ ಸಮರ್ಥನೆಗಳನ್ನು ನೀಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ನಡೆಸಿಲ್ಲ” ಎಂದು ವನೆಸ್ಸಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನನ್ನ ಪತ್ರಿಕಾ ವೃತ್ತಿಯ ಹಕ್ಕನ್ನು ನಿರಾಕರಿಸಿದ್ದನ್ನು ಮರು ಪರಿಶೀಲಿಸುವಂತೆ ಗೃಹ ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾನು ದೇಶದ ಹಿತಾಸಕ್ತಿಗೆ ವಿರುದ್ದವಾಗಿ ಕೆಲಸ ಮಾಡಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಮರ್ಥ ವೇದಿಕೆಗಳ ಮುಂದೆ ಈ ಆರೋಪಗಳ ವಿರುದ್ಧ ಹೋರಾಡುತ್ತೇನೆ. ಕಾನೂನು ಪ್ರಕ್ರಿಯೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲ ಒಂದು ದಿನ ಭಾರತಕ್ಕೆ ಮರಳುವ ಭರವಸೆಯಿದೆ. ಆದರೆ, ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ. ನನ್ನ ಪತ್ರಿಕಾ ವೃತ್ತಿಯನ್ನು ಬದಲಾಯಿಸುವಂತೆ ಅಧಿಕಾರಿಗಳು ಒತ್ತಡ ಹೇರಿದ್ದರು. ಆದರೆ, ಅದು ನನಗೆ ಸಾಧ್ಯವಿಲ್ಲ. ನಾನು ಪತ್ರಕರ್ತೆ, ನನ್ನ ಮನಸ್ಸಿಗೆ ಪ್ರಿಯವಾದ ವೃತ್ತಿಯನ್ನು ಯಾವುದೇ ಆರೋಪಗಳು ಸಾಭೀತಾಗದೆ ತ್ಯಜಿಸಲು ನಾನು ಒಪ್ಪುವುದಿಲ್ಲ” ಎಂದು ವನೆಸ್ಸಾ ಹೇಳಿದ್ದಾರೆ.

ಕಳೆದ ತಿಂಗಳು ಗಣರಾಜ್ಯೋತ್ಸವದ ಆಚರಣೆಗಾಗಿ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಫ್ರಾನ್ಸ್ ಭಾರತದೊಂದಿಗೆ ವನೆಸ್ಸಾ ಅವರ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿತ್ತು. ಈ ವೇಳೆ ಭಾರತ, ಈ ಸಮಸ್ಯೆಯು ‘ದೇಶದ ನಿಯಮಗಳು ಮತ್ತು ನಿಬಂಧನೆಗಳ ಅನುಸರಣೆ’ಗೆ ಸಂಬಂಧಿಸಿದೆ. ಅಲ್ಲದೆ, ವನೆಸ್ಸಾ ಅವರ ಪತ್ರಿಕಾ ವೃತ್ತಿಗೆ ಸಂಬಂಧಿಸಿಲ್ಲ ಎಂದು ಫ್ರಾನ್ಸ್‌ಗೆ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ವನೆಸ್ಸಾ ಅವರು ಫ್ರಾನ್ಸ್, ಸ್ವಿಟ್ಜರ್‌ಲೆಂಡ್ ಮತ್ತು ಬೆಲ್ಜಿಯಂನ ಪತ್ರಿಕೆಗಳಿಗೆ ದಕ್ಷಿಣ ಏಷ್ಯಾದ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು. ಭಾರತೀಯ ಪತ್ರಕರ್ತನನ್ನು ವಿವಾಹವಾಗಿರುವ ವನೆಸ್ಸಾ ಅವರು, 23 ವರ್ಷಗಳ ಪತ್ರಿಕಾ ವೃತ್ತಿಯಲ್ಲಿ ‘ಮಾವೋವಾದಿ ದಂಗೆ’ ಸೇರಿದಂತೆ ಹಲವು ಬರಹಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ: ಬಹುಮತವಿದ್ದರೂ ವಿಶ್ವಾಸಮತ ನಿಲುವಳಿ ಮಂಡಿಸಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...