Homeಮುಖಪುಟಗಾಜಾ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು: ಕದನ ವಿರಾಮಕ್ಕೆ ಕರೆ ಕೊಟ್ಟ ಫ್ರಾನ್ಸ್ ಅಧ್ಯಕ್ಷ

ಗಾಜಾ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು: ಕದನ ವಿರಾಮಕ್ಕೆ ಕರೆ ಕೊಟ್ಟ ಫ್ರಾನ್ಸ್ ಅಧ್ಯಕ್ಷ

- Advertisement -
- Advertisement -

ಗಾಝಾ ಮೇಲಿನ ಬಾಂಬ್ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಶುಕ್ರವಾರ ತಡ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಸಂದರ್ಶನದಲ್ಲಿ ಬಿಬಿಸಿಗೆ ತಿಳಿಸಿದ್ದಾರೆ.

ಬಾಂಬ್ ದಾಳಿಗೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿರುವ ಮ್ಯಾಕ್ರನ್, ಕದನ ವಿರಾಮದಿಂದ ಇಸ್ರೇಲ್ ಗೆ ಲಾಭವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.

ಬಾಂಬ್ ದಾಳಿಗೆ ”ಯಾವುದೇ ಸಮರ್ಥನೆ ಇಲ್ಲ” ಮತ್ತು ಕದನ ವಿರಾಮವು ಇಸ್ರೇಲ್‌ಗೆ ಲಾಭವಾಗಲಿದೆ ಎಂದು ಮ್ಯಾಕ್ರನ್ ಹೇಳಿದರು.

ಹಮಾಸ್ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ ಎಂದು ಹೇಳಿರುವ ಅವರು, ಇಸ್ರೇಲ್ ನ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿಗೆ ಮಾನ್ಯತೆ ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಮಾಸ್‌ನ ಸಂಘಟನೆಯ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ. ಇಸ್ರೇಲ್‌ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿಗೆ ಮಾನ್ಯತೆ ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಿಮ್ಮೊಂದಿಗೆ ಅಮೆರಿಕಾ ಮತ್ತು ಬ್ರಿಟಸ್ ಸೇರಿದಂತೆ ಇತರ ದೇಶಗಳ ನಾಯಕರೂ ಕದನ ವಿರಾಮದ ಕರೆಗೆ ದನಿಗೂಡಿಸಬೇಕೆ ಎಂಬ ಪ್ರಶ್ನೆಗೆ ಅವರು ಹಾಗೆ ಮಾಡುತ್ತಾರೆ ಎಂದು ಭಾವಿಸಿದ್ದೇನೆ” ಎಂದು ಮ್ಯಾಕ್ರನ್ ಉತ್ತರಿಸಿದ್ದಾರೆ.

ಮ್ಯಾಕ್ರನ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ವಿಶ್ವ ನಾಯಕರು ಹಮಾಸ್‌ನ್ನು ಖಂಡಿಸಬೇಕೇ ವಿನಃ ಇಸ್ರೇಲ್ ಅಲ್ಲ ಎಂದು ಹೇಳಿದ್ದಾರೆ.

“ಹಾಮಾಸ್ ಇಂದು ಗಾಜಾದಲ್ಲಿ ಮಾಡುತ್ತಿರುವ ಈ ಅಪರಾಧಗಳನ್ನು ನಾಳೆ ಪ್ಯಾರಿಸ್, ನ್ಯೂಯಾರ್ಕ್ ಮತ್ತು ವಿಶ್ವದ ಎಲ್ಲಿಯಾದರೂ ಮಾಡಬಹುದು” ಎಂದು ನೆತನ್ಯಾಹು ಹೇಳಿದ್ದಾರೆ.

ಪ್ಯಾರಿಸ್‌ನಲ್ಲಿ ಗಾಜಾ ಕುರಿತ ಮಾನವೀಯ ಸಮ್ಮೇಳನ ನಡೆದ ಒಂದು ದಿನದ ನಂತರ BBCಗೆ ಮ್ಯಾಕ್ರನ್‌ರ ಸಂದರ್ಶನ ಪ್ರಸಾರವಾಯಿತು.

ಆ ಶೃಂಗಸಭೆಯಲ್ಲಿ ಉಪಸ್ಥಿತರಿರುವ ಎಲ್ಲಾ ಸರ್ಕಾರಗಳು ಮತ್ತು ಏಜೆನ್ಸಿಗಳ “ಸ್ಪಷ್ಟ ತೀರ್ಮಾನ”ವೆಂದರೆ ಮೊದಲು ಮಾನವೀಯ ವಿರಾಮ, ಕದನ ವಿರಾಮಕ್ಕೆ ಹೋಗುವುದನ್ನು ಹೊರತುಪಡಿಸಿ ಬೇರೆ ಯಾವುದೇ ಪರಿಹಾರವಿಲ್ಲ, ಇದು ರಕ್ಷಿಸಲು ಅನುವು ಮಾಡಿಕೊಡುತ್ತದೆ ಎಂದು ಮ್ಯಾಕ್ರನ್ ಹೇಳಿದರು.

”ವಾಸ್ತವವಾಗಿ – ಇಂದು, ನಾಗರಿಕರು ಬಾಂಬ್ ದಾಳಿಗೆ ಒಳಗಾಗಿದ್ದಾರೆ. ವಾಸ್ತವಿಕ ಅತಿಹೆಚ್ಚು ಮಕ್ಕಳು, ಹೆಂಗಸರು, ವೃದ್ಧರು ಈ ಬಾಂಬ್ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಆದ್ದರಿಂದ ಅದಕ್ಕೆ ಯಾವುದೇ ಸಮರ್ಥನೆಗಳಿರುವುದಿಲ್ಲ. ಆದ್ದರಿಂದ ನಾವು ಇಸ್ರೇಲ್‌ಗೆ ಕದನ ನಿಲ್ಲಿಸಲು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...