Homeಮುಖಪುಟಗಾಜಾ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು: ಕದನ ವಿರಾಮಕ್ಕೆ ಕರೆ ಕೊಟ್ಟ ಫ್ರಾನ್ಸ್ ಅಧ್ಯಕ್ಷ

ಗಾಜಾ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು: ಕದನ ವಿರಾಮಕ್ಕೆ ಕರೆ ಕೊಟ್ಟ ಫ್ರಾನ್ಸ್ ಅಧ್ಯಕ್ಷ

- Advertisement -
- Advertisement -

ಗಾಝಾ ಮೇಲಿನ ಬಾಂಬ್ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಶುಕ್ರವಾರ ತಡ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಸಂದರ್ಶನದಲ್ಲಿ ಬಿಬಿಸಿಗೆ ತಿಳಿಸಿದ್ದಾರೆ.

ಬಾಂಬ್ ದಾಳಿಗೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿರುವ ಮ್ಯಾಕ್ರನ್, ಕದನ ವಿರಾಮದಿಂದ ಇಸ್ರೇಲ್ ಗೆ ಲಾಭವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.

ಬಾಂಬ್ ದಾಳಿಗೆ ”ಯಾವುದೇ ಸಮರ್ಥನೆ ಇಲ್ಲ” ಮತ್ತು ಕದನ ವಿರಾಮವು ಇಸ್ರೇಲ್‌ಗೆ ಲಾಭವಾಗಲಿದೆ ಎಂದು ಮ್ಯಾಕ್ರನ್ ಹೇಳಿದರು.

ಹಮಾಸ್ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ ಎಂದು ಹೇಳಿರುವ ಅವರು, ಇಸ್ರೇಲ್ ನ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿಗೆ ಮಾನ್ಯತೆ ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಮಾಸ್‌ನ ಸಂಘಟನೆಯ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ. ಇಸ್ರೇಲ್‌ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿಗೆ ಮಾನ್ಯತೆ ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಿಮ್ಮೊಂದಿಗೆ ಅಮೆರಿಕಾ ಮತ್ತು ಬ್ರಿಟಸ್ ಸೇರಿದಂತೆ ಇತರ ದೇಶಗಳ ನಾಯಕರೂ ಕದನ ವಿರಾಮದ ಕರೆಗೆ ದನಿಗೂಡಿಸಬೇಕೆ ಎಂಬ ಪ್ರಶ್ನೆಗೆ ಅವರು ಹಾಗೆ ಮಾಡುತ್ತಾರೆ ಎಂದು ಭಾವಿಸಿದ್ದೇನೆ” ಎಂದು ಮ್ಯಾಕ್ರನ್ ಉತ್ತರಿಸಿದ್ದಾರೆ.

ಮ್ಯಾಕ್ರನ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ವಿಶ್ವ ನಾಯಕರು ಹಮಾಸ್‌ನ್ನು ಖಂಡಿಸಬೇಕೇ ವಿನಃ ಇಸ್ರೇಲ್ ಅಲ್ಲ ಎಂದು ಹೇಳಿದ್ದಾರೆ.

“ಹಾಮಾಸ್ ಇಂದು ಗಾಜಾದಲ್ಲಿ ಮಾಡುತ್ತಿರುವ ಈ ಅಪರಾಧಗಳನ್ನು ನಾಳೆ ಪ್ಯಾರಿಸ್, ನ್ಯೂಯಾರ್ಕ್ ಮತ್ತು ವಿಶ್ವದ ಎಲ್ಲಿಯಾದರೂ ಮಾಡಬಹುದು” ಎಂದು ನೆತನ್ಯಾಹು ಹೇಳಿದ್ದಾರೆ.

ಪ್ಯಾರಿಸ್‌ನಲ್ಲಿ ಗಾಜಾ ಕುರಿತ ಮಾನವೀಯ ಸಮ್ಮೇಳನ ನಡೆದ ಒಂದು ದಿನದ ನಂತರ BBCಗೆ ಮ್ಯಾಕ್ರನ್‌ರ ಸಂದರ್ಶನ ಪ್ರಸಾರವಾಯಿತು.

ಆ ಶೃಂಗಸಭೆಯಲ್ಲಿ ಉಪಸ್ಥಿತರಿರುವ ಎಲ್ಲಾ ಸರ್ಕಾರಗಳು ಮತ್ತು ಏಜೆನ್ಸಿಗಳ “ಸ್ಪಷ್ಟ ತೀರ್ಮಾನ”ವೆಂದರೆ ಮೊದಲು ಮಾನವೀಯ ವಿರಾಮ, ಕದನ ವಿರಾಮಕ್ಕೆ ಹೋಗುವುದನ್ನು ಹೊರತುಪಡಿಸಿ ಬೇರೆ ಯಾವುದೇ ಪರಿಹಾರವಿಲ್ಲ, ಇದು ರಕ್ಷಿಸಲು ಅನುವು ಮಾಡಿಕೊಡುತ್ತದೆ ಎಂದು ಮ್ಯಾಕ್ರನ್ ಹೇಳಿದರು.

”ವಾಸ್ತವವಾಗಿ – ಇಂದು, ನಾಗರಿಕರು ಬಾಂಬ್ ದಾಳಿಗೆ ಒಳಗಾಗಿದ್ದಾರೆ. ವಾಸ್ತವಿಕ ಅತಿಹೆಚ್ಚು ಮಕ್ಕಳು, ಹೆಂಗಸರು, ವೃದ್ಧರು ಈ ಬಾಂಬ್ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಆದ್ದರಿಂದ ಅದಕ್ಕೆ ಯಾವುದೇ ಸಮರ್ಥನೆಗಳಿರುವುದಿಲ್ಲ. ಆದ್ದರಿಂದ ನಾವು ಇಸ್ರೇಲ್‌ಗೆ ಕದನ ನಿಲ್ಲಿಸಲು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...