Homeಮುಖಪುಟಗಾಜಾ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು: ಕದನ ವಿರಾಮಕ್ಕೆ ಕರೆ ಕೊಟ್ಟ ಫ್ರಾನ್ಸ್ ಅಧ್ಯಕ್ಷ

ಗಾಜಾ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು: ಕದನ ವಿರಾಮಕ್ಕೆ ಕರೆ ಕೊಟ್ಟ ಫ್ರಾನ್ಸ್ ಅಧ್ಯಕ್ಷ

- Advertisement -
- Advertisement -

ಗಾಝಾ ಮೇಲಿನ ಬಾಂಬ್ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಶುಕ್ರವಾರ ತಡ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಸಂದರ್ಶನದಲ್ಲಿ ಬಿಬಿಸಿಗೆ ತಿಳಿಸಿದ್ದಾರೆ.

ಬಾಂಬ್ ದಾಳಿಗೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿರುವ ಮ್ಯಾಕ್ರನ್, ಕದನ ವಿರಾಮದಿಂದ ಇಸ್ರೇಲ್ ಗೆ ಲಾಭವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.

ಬಾಂಬ್ ದಾಳಿಗೆ ”ಯಾವುದೇ ಸಮರ್ಥನೆ ಇಲ್ಲ” ಮತ್ತು ಕದನ ವಿರಾಮವು ಇಸ್ರೇಲ್‌ಗೆ ಲಾಭವಾಗಲಿದೆ ಎಂದು ಮ್ಯಾಕ್ರನ್ ಹೇಳಿದರು.

ಹಮಾಸ್ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ ಎಂದು ಹೇಳಿರುವ ಅವರು, ಇಸ್ರೇಲ್ ನ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿಗೆ ಮಾನ್ಯತೆ ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಮಾಸ್‌ನ ಸಂಘಟನೆಯ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ. ಇಸ್ರೇಲ್‌ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿಗೆ ಮಾನ್ಯತೆ ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಿಮ್ಮೊಂದಿಗೆ ಅಮೆರಿಕಾ ಮತ್ತು ಬ್ರಿಟಸ್ ಸೇರಿದಂತೆ ಇತರ ದೇಶಗಳ ನಾಯಕರೂ ಕದನ ವಿರಾಮದ ಕರೆಗೆ ದನಿಗೂಡಿಸಬೇಕೆ ಎಂಬ ಪ್ರಶ್ನೆಗೆ ಅವರು ಹಾಗೆ ಮಾಡುತ್ತಾರೆ ಎಂದು ಭಾವಿಸಿದ್ದೇನೆ” ಎಂದು ಮ್ಯಾಕ್ರನ್ ಉತ್ತರಿಸಿದ್ದಾರೆ.

ಮ್ಯಾಕ್ರನ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ವಿಶ್ವ ನಾಯಕರು ಹಮಾಸ್‌ನ್ನು ಖಂಡಿಸಬೇಕೇ ವಿನಃ ಇಸ್ರೇಲ್ ಅಲ್ಲ ಎಂದು ಹೇಳಿದ್ದಾರೆ.

“ಹಾಮಾಸ್ ಇಂದು ಗಾಜಾದಲ್ಲಿ ಮಾಡುತ್ತಿರುವ ಈ ಅಪರಾಧಗಳನ್ನು ನಾಳೆ ಪ್ಯಾರಿಸ್, ನ್ಯೂಯಾರ್ಕ್ ಮತ್ತು ವಿಶ್ವದ ಎಲ್ಲಿಯಾದರೂ ಮಾಡಬಹುದು” ಎಂದು ನೆತನ್ಯಾಹು ಹೇಳಿದ್ದಾರೆ.

ಪ್ಯಾರಿಸ್‌ನಲ್ಲಿ ಗಾಜಾ ಕುರಿತ ಮಾನವೀಯ ಸಮ್ಮೇಳನ ನಡೆದ ಒಂದು ದಿನದ ನಂತರ BBCಗೆ ಮ್ಯಾಕ್ರನ್‌ರ ಸಂದರ್ಶನ ಪ್ರಸಾರವಾಯಿತು.

ಆ ಶೃಂಗಸಭೆಯಲ್ಲಿ ಉಪಸ್ಥಿತರಿರುವ ಎಲ್ಲಾ ಸರ್ಕಾರಗಳು ಮತ್ತು ಏಜೆನ್ಸಿಗಳ “ಸ್ಪಷ್ಟ ತೀರ್ಮಾನ”ವೆಂದರೆ ಮೊದಲು ಮಾನವೀಯ ವಿರಾಮ, ಕದನ ವಿರಾಮಕ್ಕೆ ಹೋಗುವುದನ್ನು ಹೊರತುಪಡಿಸಿ ಬೇರೆ ಯಾವುದೇ ಪರಿಹಾರವಿಲ್ಲ, ಇದು ರಕ್ಷಿಸಲು ಅನುವು ಮಾಡಿಕೊಡುತ್ತದೆ ಎಂದು ಮ್ಯಾಕ್ರನ್ ಹೇಳಿದರು.

”ವಾಸ್ತವವಾಗಿ – ಇಂದು, ನಾಗರಿಕರು ಬಾಂಬ್ ದಾಳಿಗೆ ಒಳಗಾಗಿದ್ದಾರೆ. ವಾಸ್ತವಿಕ ಅತಿಹೆಚ್ಚು ಮಕ್ಕಳು, ಹೆಂಗಸರು, ವೃದ್ಧರು ಈ ಬಾಂಬ್ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಆದ್ದರಿಂದ ಅದಕ್ಕೆ ಯಾವುದೇ ಸಮರ್ಥನೆಗಳಿರುವುದಿಲ್ಲ. ಆದ್ದರಿಂದ ನಾವು ಇಸ್ರೇಲ್‌ಗೆ ಕದನ ನಿಲ್ಲಿಸಲು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...