Homeಮುಖಪುಟಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ಈ ಅಂಕಿ-ಅಂಶಗಳ ಪ್ರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣಾ ಬಾಂಡ್‌ ಮೂಲಕ ಅತ್ಯಧಿಕ ದೇಣಿಗೆಯನ್ನು ಪಡೆದುಕೊಂಡಿದೆ ಎನ್ನುವುದು ಬಯಲಾಗಿದೆ.

ಈ ವಿವರಗಳು ಏಪ್ರಿಲ್ 12, 2019ರ ಹಿಂದಿನ ಅವಧಿಯದ್ದು ಎಂದು ಹೇಳಲಾಗಿದ್ದು, ಈ ದಿನಾಂಕದ ನಂತರದ ಚುನಾವಣಾ ಬಾಂಡ್ ವಿವರಗಳನ್ನು ಚುನಾವಣಾ ಆಯೋಗ ಕಳೆದ ವಾರ ಸಾರ್ವಜನಿಕಗೊಳಿಸಿದೆ.

ಸುಪ್ರೀಂಕೋರ್ಟ್‌ನ ಆದೇಶದ  ಪ್ರಕಾರ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಭೌತಿಕ ಪ್ರತಿಗಳು, ಡಿಜಿಟಲೀಕರಣಗೊಂಡ ದಾಖಲೆಯನ್ನು ಪೆನ್ ಡ್ರೈವ್‌ ಮೂಲಕ ಹಿಂದಿರುಗಿಸಿದ್ದಾರೆ. ಅದರನ್ವಯ, ಡಿಜಿಟಲೀಕರಣಗೊಂಡ ಅಂಕಿ ಅಂಶವನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ ಒಂದು ದಿನದ ನಂತರ ಚುನಾವಣಾ ಆಯೋಗ ಈ ಮಹತ್ವದ ಮಾಹಿತಿಯನ್ನು  ಬಿಡುಗಡೆ ಮಾಡಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದಾಖಲೆಗಳು ಬಾಂಡ್‌ಗಳ ದಿನಾಂಕ, ಮುಖಬೆಲೆಗಳು, ಬಾಂಡ್‌ಗಳ ಸಂಖ್ಯೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆ, ರಶೀದಿಯ ದಿನಾಂಕ ಮತ್ತು ಕ್ರೆಡಿಟ್ ದಿನಾಂಕದ ಮಾತ್ರ ಉಲ್ಲೇಖಿತವಾಗಿದೆ.

ಈ ಹೊಸ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ಎಂದರೆ 6,986.5 ಕೋಟಿ ಪಡೆದುಕೊಂಡಿದೆ. 2019–20ರ ಅವಧಿಯಲ್ಲಿ ಅತ್ಯಧಿಕ 2,555 ಕೋಟಿ ಪಡೆದುಕೊಂಡಿದೆ ಎಂದು ಚುನಾವಣಾ ಅಯೋಗದ ಅಂಕಿ ಅಂಶದಿಂದ ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು 2ನೇ ಸ್ಥಾನದಲ್ಲಿದ್ದು, ಚುನಾವಣಾ ಬಾಂಡ್ ಮೂಲಕ 1,397 ಕೋಟಿ ಪಡೆದುಕೊಂಡಿದೆ. ಕಾಂಗ್ರೆಸ್ 1,334.35 ಕೋಟಿ ಪಡೆದಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಲಾಟರಿ ಕಿಂಗ್ ಸ್ಯಾಂಟಿಯಾಗೊ ಮಾರ್ಟಿನ್ ಅವರ ಫ್ಯೂಚರ್ ಗೇಮಿಂಗ್‌ನಿಂದ 509 ಕೋಟಿ ಸೇರಿದಂತೆ ಚುನಾವಣಾ ಬಾಂಡ್‌ಗಳ ಮೂಲಕ  656.5 ಕೋಟಿಗಳನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗದ ಮಾಹಿತಿಯು ತೋರಿಸುತ್ತದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಬಿಜೆಡಿಗೆ 944.5 ಕೋಟಿ, ವೈಎಸ್‌ಆರ್ ಕಾಂಗ್ರೆಸ್‌ಗೆ 442.8 ಕೋಟಿ, ಟಿಡಿಪಿಗೆ 181.35 ಕೋಟಿ ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಬಂದಿದೆ ಎಂದು ಇತ್ತೀಚಿನ ಮಾಹಿತಿಯು ತಿಳಿಸಿದೆ. 6 ಕೋಟಿ ಪಡೆದಿರುವ ಎಐಎಡಿಎಂಕೆಗೆ ಐಪಿಎಲ್‌ನ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದಲೂ ದೇಣಿಗೆ ಪಡೆದುಕೊಂಡಿದೆ ಎನ್ನುವುದು ಮಾಹಿತಿಯಲ್ಲಿ ಬಯಲಾಗಿದೆ.

ಬಿಜೆಪಿಯು ಚುನಾವಣಾ ಬಾಂಡ್‌ ಮೂಲಕ ಅತಿಹೆಚ್ಚು ದೇಣಿಗೆ ಪಡೆದ ಪಕ್ಷವಾಗಿದೆ. 2019–20ರ ಅವಧಿಯಲ್ಲಿ ಪಕ್ಷಕ್ಕೆ ದೇಣಿಗೆ ರೂಪದಲ್ಲಿ 2,555 ಕೋಟಿ ಹರಿದು ಬಂದಿದೆ. 2023ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬಿಜೆಪಿಗೆ 421.27 ಕೋಟಿ ದೇಣಿಗೆ ದೊರೆತಿದೆ.

ಇತ್ತೀಚೆಗೆ ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌) ಈ ಕುರಿತು ವರದಿಯನ್ನು ಬಿಡುಗಡೆ ಮಾಡಿತ್ತು ಅದರಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಯೋಜನೆ ಜಾರಿಯಲ್ಲಿದ್ದ ಮಾರ್ಚ್‌ 2018ರಿಂದ ಜನವರಿ 2024ರವೆರೆಗೆ ಒಟ್ಟು 7,800 ಕೋಟಿ ದೇಣಿಗೆ ಪಡೆದಿದೆ ಎಂದು ಉಲ್ಲೇಖಿಸಿತ್ತು.

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ದೇಣಿಗೆ ಪಡೆದಿಲ್ಲ ಎಂದು ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹೇಳಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಥವಾ ಸಿಪಿಐ(ಎಂ), ತಾನು ಕೂಡ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು.

ಇದನ್ನು ಓದಿ: ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...