Homeಮುಖಪುಟಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ಈ ಅಂಕಿ-ಅಂಶಗಳ ಪ್ರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣಾ ಬಾಂಡ್‌ ಮೂಲಕ ಅತ್ಯಧಿಕ ದೇಣಿಗೆಯನ್ನು ಪಡೆದುಕೊಂಡಿದೆ ಎನ್ನುವುದು ಬಯಲಾಗಿದೆ.

ಈ ವಿವರಗಳು ಏಪ್ರಿಲ್ 12, 2019ರ ಹಿಂದಿನ ಅವಧಿಯದ್ದು ಎಂದು ಹೇಳಲಾಗಿದ್ದು, ಈ ದಿನಾಂಕದ ನಂತರದ ಚುನಾವಣಾ ಬಾಂಡ್ ವಿವರಗಳನ್ನು ಚುನಾವಣಾ ಆಯೋಗ ಕಳೆದ ವಾರ ಸಾರ್ವಜನಿಕಗೊಳಿಸಿದೆ.

ಸುಪ್ರೀಂಕೋರ್ಟ್‌ನ ಆದೇಶದ  ಪ್ರಕಾರ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಭೌತಿಕ ಪ್ರತಿಗಳು, ಡಿಜಿಟಲೀಕರಣಗೊಂಡ ದಾಖಲೆಯನ್ನು ಪೆನ್ ಡ್ರೈವ್‌ ಮೂಲಕ ಹಿಂದಿರುಗಿಸಿದ್ದಾರೆ. ಅದರನ್ವಯ, ಡಿಜಿಟಲೀಕರಣಗೊಂಡ ಅಂಕಿ ಅಂಶವನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ ಒಂದು ದಿನದ ನಂತರ ಚುನಾವಣಾ ಆಯೋಗ ಈ ಮಹತ್ವದ ಮಾಹಿತಿಯನ್ನು  ಬಿಡುಗಡೆ ಮಾಡಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದಾಖಲೆಗಳು ಬಾಂಡ್‌ಗಳ ದಿನಾಂಕ, ಮುಖಬೆಲೆಗಳು, ಬಾಂಡ್‌ಗಳ ಸಂಖ್ಯೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆ, ರಶೀದಿಯ ದಿನಾಂಕ ಮತ್ತು ಕ್ರೆಡಿಟ್ ದಿನಾಂಕದ ಮಾತ್ರ ಉಲ್ಲೇಖಿತವಾಗಿದೆ.

ಈ ಹೊಸ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ಎಂದರೆ 6,986.5 ಕೋಟಿ ಪಡೆದುಕೊಂಡಿದೆ. 2019–20ರ ಅವಧಿಯಲ್ಲಿ ಅತ್ಯಧಿಕ 2,555 ಕೋಟಿ ಪಡೆದುಕೊಂಡಿದೆ ಎಂದು ಚುನಾವಣಾ ಅಯೋಗದ ಅಂಕಿ ಅಂಶದಿಂದ ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು 2ನೇ ಸ್ಥಾನದಲ್ಲಿದ್ದು, ಚುನಾವಣಾ ಬಾಂಡ್ ಮೂಲಕ 1,397 ಕೋಟಿ ಪಡೆದುಕೊಂಡಿದೆ. ಕಾಂಗ್ರೆಸ್ 1,334.35 ಕೋಟಿ ಪಡೆದಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಲಾಟರಿ ಕಿಂಗ್ ಸ್ಯಾಂಟಿಯಾಗೊ ಮಾರ್ಟಿನ್ ಅವರ ಫ್ಯೂಚರ್ ಗೇಮಿಂಗ್‌ನಿಂದ 509 ಕೋಟಿ ಸೇರಿದಂತೆ ಚುನಾವಣಾ ಬಾಂಡ್‌ಗಳ ಮೂಲಕ  656.5 ಕೋಟಿಗಳನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗದ ಮಾಹಿತಿಯು ತೋರಿಸುತ್ತದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಬಿಜೆಡಿಗೆ 944.5 ಕೋಟಿ, ವೈಎಸ್‌ಆರ್ ಕಾಂಗ್ರೆಸ್‌ಗೆ 442.8 ಕೋಟಿ, ಟಿಡಿಪಿಗೆ 181.35 ಕೋಟಿ ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಬಂದಿದೆ ಎಂದು ಇತ್ತೀಚಿನ ಮಾಹಿತಿಯು ತಿಳಿಸಿದೆ. 6 ಕೋಟಿ ಪಡೆದಿರುವ ಎಐಎಡಿಎಂಕೆಗೆ ಐಪಿಎಲ್‌ನ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದಲೂ ದೇಣಿಗೆ ಪಡೆದುಕೊಂಡಿದೆ ಎನ್ನುವುದು ಮಾಹಿತಿಯಲ್ಲಿ ಬಯಲಾಗಿದೆ.

ಬಿಜೆಪಿಯು ಚುನಾವಣಾ ಬಾಂಡ್‌ ಮೂಲಕ ಅತಿಹೆಚ್ಚು ದೇಣಿಗೆ ಪಡೆದ ಪಕ್ಷವಾಗಿದೆ. 2019–20ರ ಅವಧಿಯಲ್ಲಿ ಪಕ್ಷಕ್ಕೆ ದೇಣಿಗೆ ರೂಪದಲ್ಲಿ 2,555 ಕೋಟಿ ಹರಿದು ಬಂದಿದೆ. 2023ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬಿಜೆಪಿಗೆ 421.27 ಕೋಟಿ ದೇಣಿಗೆ ದೊರೆತಿದೆ.

ಇತ್ತೀಚೆಗೆ ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌) ಈ ಕುರಿತು ವರದಿಯನ್ನು ಬಿಡುಗಡೆ ಮಾಡಿತ್ತು ಅದರಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಯೋಜನೆ ಜಾರಿಯಲ್ಲಿದ್ದ ಮಾರ್ಚ್‌ 2018ರಿಂದ ಜನವರಿ 2024ರವೆರೆಗೆ ಒಟ್ಟು 7,800 ಕೋಟಿ ದೇಣಿಗೆ ಪಡೆದಿದೆ ಎಂದು ಉಲ್ಲೇಖಿಸಿತ್ತು.

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ದೇಣಿಗೆ ಪಡೆದಿಲ್ಲ ಎಂದು ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹೇಳಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಥವಾ ಸಿಪಿಐ(ಎಂ), ತಾನು ಕೂಡ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು.

ಇದನ್ನು ಓದಿ: ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...