Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...