Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...