Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...