Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...