Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...