Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...