Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...