Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...