Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...