Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...