Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....