Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...