Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...