Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....