Homeಕರ್ನಾಟಕ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ - ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಹೇಂದ್ರ ಕುಮಾರ್ ಅವರಿಂದ ಸ್ಥಾಪಿತವಾದ ‘ನಮ್ಮಧ್ವನಿ’ ತಂಡವು ಕ್ಲಬ್‌ಹೌಸ್‌ನಲ್ಲಿ ಬಜರಂಗದಳದ ಮಾಜಿ ನಾಯಕ ಪ್ರವೀಣ್‌ ವಾಲ್ಕೆ ಮತ್ತು ಸಂಘಪರಿವಾರದ ಮಾಜಿ ನಾಯಕರಾದ ಸುನಿಲ್ ಬಜಿಲಕೇರಿ, ಎಂಜಿ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟಿದೆ

- Advertisement -
- Advertisement -

ಸಂಘಪರಿವಾರವು ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಬಳಸಿಕೊಳ್ಳುತ್ತದೆ ಎಂದು ಸಂಘಪರಿವಾರದ ಮಾಜಿ ನಾಯಕ ಎಂಜಿ ಹೆಗಡೆ ಶುಕ್ರವಾರ ಹೇಳಿದ್ದಾರೆ. ಅವರು “ನಮ್ಮ ಧ್ವನಿ” ಕ್ಲಬ್‌‌ಹೌಸ್‌ ಗುಂಪು ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ದಿವಂಗತ ಮಹೇಂದ್ರ ಕುಮಾರ್‌ ಅವರು ಸಂಘಪರಿವಾರದದಿಂದ ಹೊರಬಂದ ನಂತರ “ನಮ್ಮ ಧ್ವನಿ” ತಂಡವನ್ನು ಕಟ್ಟಿಕೊಂಡಿದ್ದರು. ಈ ತಂಡವನ್ನು ಅವರ ನಿಧನದ ನಂತರ ಅವರ ಆಪ್ತರು ಮುನ್ನಡೆಸುತ್ತಿದ್ದಾರೆ.

“ನಮ್ಮಧ್ವನಿ” ತಂಡವು ಹೊಸ ಮಾದರಿಯ ಸಾಮಾಜಿಕ ಜಾಲತಾಣವಾದ ಕ್ಲಬ್‌ಹೌಸ್‌‌ನಲ್ಲಿ ಕೂಡಾ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದೆ. ಶುಕ್ರವಾರ ನಡೆಸಿಕೊಟ್ಟ “ಹಿಂದುತ್ವದಿಂದ ಬಂಧುತ್ವದ ಕಡೆಗೆ” ಕಾರ್ಯಕ್ರಮದಲ್ಲಿ ಎಂಜಿ ಹೆಗಡೆ ಮಾತ್ರವಲ್ಲದೆ, ಬಜರಂಗದಳದಿಂದ ಇತ್ತೀಚೆಗಷ್ಟೇ ಹೊರ ಬಂದ ಮಾಜಿ ನಾಯಕ ಪ್ರವೀಣ ವಾಲ್ಕೆ, ಸುನಿಲ್ ಬಜಿಲ್‌ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಸಂವಾದದಲ್ಲಿ ತಾವೇಕೆ ಅಲ್ಲಿಂದ ಹೊರಬಂದೆವು ಎಂಬುವುದಕ್ಕೆ ಹಲವಾರು ನಿದರ್ಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ ಪರೀಕ್ಷೆ

ಸಂವಾದದಲ್ಲಿ ಮಾತನಾಡಿದ ಎಂಜಿ ಹೆಗಡೆ, “ಸಂಘ ವೈರುಧ್ಯಗಳಿಂದ ಕೂಡಿದ್ದು, ಒಂದು ಕಡೆಯಲ್ಲಿ ಗಾಂಧೀಜಿಯವರನ್ನು ಅವರ ನಾಯಕರು ಎಂದು ಹೊಗಳುತ್ತಾರೆ ಹಾಗೂ ಅವರ ಬಗ್ಗೆ ಸಂಘದ ಸಾಹಿತ್ಯ ವಿಭಾಗ ಪುಸ್ತಕ ಬಿಡುಗಡೆ ಮಾಡುತ್ತದೆ. ಆದರೆ ಅದರ ಕಾರ್ಯಕರ್ತರು ಗಾಂಧೀಜಿಯನ್ನು ನಿಂದಿಸುತ್ತಾರೆ. ಅಖಂಡ ಭಾರತ ಅನ್ನುತ್ತಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ದ್ವೇಷಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಹಿಂದೂ ಧಾರ್ಮಿಕ ಮೂಲ ಗ್ರಂಥಗಳಾದ ವೇದ-ಉಪನಿಷತ್ ಬಗ್ಗೆ ಸಂಘ ಪ್ರಚಾರ ಮಾಡುವುದೇ ಇಲ್ಲ. ಆದರೆ ತಮ್ಮದು ಹಿಂದೂ ಧರ್ಮ ಉಳಿವಿಗೆ ಎನ್ನುತ್ತಾರೆ. ಬಡವರ ಮನೆಯ ಮಕ್ಕಳನ್ನು ಮಾತ್ರ ತಮ್ಮ ಹೋರಾಟಗಳಿಗೆ ಅವರು ಬಳಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಜಿ ಹೆಗಡೆ

ಪ್ರವೀಣ ವಾಲ್ಕೆ ಮಾತನಾಡಿ, “ನೈಜ ಹಿಂದು ಧರ್ಮದ ಯಾವುದೆ ತತ್ವ ಇಲ್ಲದೇ, ಕೇವಲ ಅಧಿಕಾರ ಮತ್ತು ಹಣ ಗಳಿಕೆಯತ್ತ ಸಂಘ ಪರಿವಾರ ಸಾಗುತ್ತಿದೆ. ಅದಕ್ಕಾಗಿ ಬೀದಿಗಳಲ್ಲಿ ಬಡಿದಾಡಿ ಬಡ ಕಾರ್ಯಕರ್ತರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಯಾವ ರಕ್ಷಣೆಯೂ ಇಲ್ಲ, ಬೆಂಬಲವೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

“ತಮ್ಮ ವಿರುದ್ದ ಮಾತನಾಡಿದವರನ್ನು ಸಂಘ ಪರಿವಾರದ ಹಾಗೆ ಬಿಟ್ಟಿಲ್ಲ, ನಮ್ಮನ್ನೂ ಬಿಡಲ್ಲ ಎಂದು ನನಗೆ ಗೊತ್ತಿದೆ. ಆದರೆ ಹಿಂದೆ ಮಾಡಿದ ಪಾಪದ ಕೆಲಸಕ್ಕೆ ಪ್ರಾಯಶ್ಚಿತವಾಗಿ ನಾವೀಗ ಧ್ವನಿ ಎತ್ತಲೆ ಬೇಕಾಗಿದೆ. ಅಮಾಯಕ ಯುವಜನರು ಅದರ ಪಾಶದಿಂದ ಬಿಡುಗಡೆಯಾಗಬೇಕು” ಎಂದು ಪ್ರವೀಣ ಅವರು ಹೇಳಿದ್ದಾರೆ.

ಸುನಿಲ್ ಬಜಿಲಕೇರಿ ಮಾತನಾಡಿ, “ಬಿಜೆಪಿ ಭ್ರಷ್ಟಾಚಾರ ವಿರುಧ್ಧ ಮಾತನಾಡಿದ್ದಕ್ಕೆ ತಮ್ಮ ಮೇಲೇ ಕೇಸ್ ಹಾಕುತ್ತಾರೆ. ಮುಗ್ಧ ಹಿಂದುಳಿದ ಯುವಕರನ್ನು ಮಾತ್ರ ಹೋರಾಟಕ್ಕೆ ಭಾವನಾತ್ಮಕವಾಗಿ ಉಪಯೋಗಿಸುತ್ತಾರೆ. ಬಿಜೆಪಿ ಶಾಸಕರ ತಪ್ಪುಗಳು ಮತ್ತು ಆಡಳಿತದ ದೋಷಗಳನ್ನು ಹೇಳುವಂತೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಪ್ರವೀಣ ವಾಲ್ಕೆ ಮತ್ತು ಸುನಿಲ್ ಬಜಿಲಕೇರಿ ಅವರ ಆಪ್ತರಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕರೊಬ್ಬರು ಮಾತನಾಡಿ, “ನನಗೂ ಸಂಘಪರಿವಾರ ಏನೆಂದು ತಿಳಿದು ಬಂದಿದೆ. ಆದ್ದರಿಂದ ಅದರಿಂದ ಹೊರ ಬರುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು “ನಮ್ಮ ಧ್ವನಿ” ತಂಡದ ರಾ ಚಿಂತನ್‌, ಲೋಹಿತ್ ನಾಯಕ ಮತ್ತು ದೀಪು ಗೌಡ ನಡೆಸಿಕೊಟ್ಟರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...