Homeಮುಖಪುಟಪತಿ & ಸಂಬಂಧಿಕರಿಂದ 'ಬಾಡಿ ಶೇಮಿಂಗ್' ಕೂಡಾ ವೈವಾಹಿಕ ದೌರ್ಜನ್ಯ - ಕೇರಳ ಹೈಕೋರ್ಟ್

ಪತಿ & ಸಂಬಂಧಿಕರಿಂದ ‘ಬಾಡಿ ಶೇಮಿಂಗ್’ ಕೂಡಾ ವೈವಾಹಿಕ ದೌರ್ಜನ್ಯ – ಕೇರಳ ಹೈಕೋರ್ಟ್

- Advertisement -
- Advertisement -

ಪತ್ನಿಯ ದೇಹದ ಬಗ್ಗೆ ಪತಿ ಅಥವಾ ಅವರ ಕುಟುಂಬದ ಸದಸ್ಯರು ಅವಮಾನಿಸುವುದು (ಬಾಡಿ ಶೇಮಿಂಗ್) ಕೂಡಾ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 498A ಅಡಿಯಲ್ಲಿ ವೈವಾಹಿಕ ದೌರ್ಜನ್ಯಕ್ಕೆ ಸಮಾನವಾಗಿರುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಪತಿ & ಸಂಬಂಧಿಕರಿಂದ

ಬಾಡಿ ಶೇಮಿಂಗ್ ಮಾಡುವ ಕ್ರಿಯೆಗಳನ್ನು IPC ಯ ಸೆಕ್ಷನ್ 498A ಯ ವಿವರಣೆ (ಎ) ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಎ. ಬದರುದ್ದೀನ್ ಅವರ ಏಕಸದಸ್ಯ ಪೀಠ ತೀರ್ಪು ನೀಡಿದೆ. ಮಹಿಳೆಯೊಬ್ಬರು ತನ್ನ ಪತಿ, ಅವನ ತಂದೆ ಮತ್ತು ಅವನ ಸಹೋದರನ ಹೆಂಡತಿಯಿಂದ ವೈವಾಹಿಕ ಕ್ರೌರ್ಯ ಅನುಭವಿಸಿದ್ದಾಗಿ ಸಲ್ಲಿಸಲಾಗಿದ್ದ ಪ್ರಕರಣದ ತೀರ್ಪಿನಲ್ಲಿ ಹೈಕೋರ್ಟ್ ಈ ಬಗ್ಗೆ ಹೇಳಿದೆ. ಪತಿ & ಸಂಬಂಧಿಕರಿಂದ

ನಾನುಗೌರಿ ವಾಟ್ಸಾಪ್ ಗುಂಪಿಗೆ ಸೇರಿ
https://chat.whatsapp.com/BWTnQl3NBxtBGD0tyXHaPm3

ಬಾಡಿ ಶೇಮಿಂಗ್ ಮಾಡುವ ಕ್ರಿಯೆಗಳನ್ನು IPC ಯ ಸೆಕ್ಷನ್ 498A ಗೆ ವಿವರಣೆ (ಎ) ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಇದು ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವ ಅಥವಾ ಗಂಭೀರವಾದ ಗಾಯ ಅಥವಾ ಜೀವಕ್ಕೆ ಅಪಾಯವನ್ನುಂಟುಮಾಡುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆಯನ್ನು ಹೊಂದಿದೆ ಎಂದು ಕೋರ್ಟ್ ಹೇಳಿದೆ.

ಈ ಅರ್ಜಿಯ ವಿರುದ್ಧ ಮತ್ತೊಬ್ಬ ಮಹಿಳೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಾನು ಸಂತ್ರಸ್ತ ಮಹಿಳೆಯ ಗಂಡನ ಅಣ್ಣನ ಹೆಂಡತಿಯಾಗಿರುವುದರಿಂದ ಸೆಕ್ಷನ್ 498ಎ ಅಡಿಯಲ್ಲಿ ‘ಸಂಬಂಧಿ’ ಪದದ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಾದವನ್ನು ಅವರು ಮಂಡಿಸಿದ್ದರು. ಆದರೆ ಕೋರ್ಟ್ ಈ ವಾದವನ್ನು ನಿರಾಕರಿಸಿದ್ದು ಅರ್ಜಿಯನ್ನು ವಜಾಗೊಳಿಸಿದೆ.

ಸಂತ್ರಸ್ತ ಮಹಿಳೆಯ ದೇಹದ ಆಕಾರಕ್ಕಾಗಿ ಅಪಹಾಸ್ಯ ಮಾಡಲಾಗುತ್ತಿತ್ತು ಮತ್ತು ಅವರ ಪತಿ ಈ ಮಹಿಳೆಗಿಂತ ಹೆಚ್ಚು ಸುಂದರ ಮತ್ತು ಹೆಚ್ಚು ಸೂಕ್ತವಾದ ಬೇರೆ ಮಹಿಳೆಯರನ್ನು ಹುಡುಕಬಹುದಿತ್ತು ಎಂದು ಹೇಳಿ ಅವಮಾನಿಸುತ್ತಿದ್ದರು ಎಂಬ ಆರೋಪವನ್ನು ನ್ಯಾಯಾಲಯವು ಎಫ್‌ಐಆರ್‌ನಲ್ಲಿ ಇರುವ ಬಗ್ಗೆ ಗಮನಿಸಿತ್ತು. ಜೊತೆಗೆ ಸಂತ್ರಸ್ತ ಮಹಿಳೆಯ ವೈದ್ಯಕೀಯ ಪದವಿಯ ಸತ್ಯಾಸತ್ಯತೆಯನ್ನು ಪ್ರಶ್ನಿಸಲಾಗುತ್ತಿತ್ತು ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ಪ್ರಾಥಮಿಕವಾಗಿ ಸೆಕ್ಷನ್ 498A ಅಡಿಯಲ್ಲಿ ವೈವಾಹಿಕ ಕ್ರೌರ್ಯದ ಅಪರಾಧವಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದ್ದು, ಸಂತ್ರಸ್ತ ಮಹಿಳೆಯ ಗಂಡನ ಅಣ್ಣನ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...