Homeಮುಖಪುಟಪತಿ & ಸಂಬಂಧಿಕರಿಂದ 'ಬಾಡಿ ಶೇಮಿಂಗ್' ಕೂಡಾ ವೈವಾಹಿಕ ದೌರ್ಜನ್ಯ - ಕೇರಳ ಹೈಕೋರ್ಟ್

ಪತಿ & ಸಂಬಂಧಿಕರಿಂದ ‘ಬಾಡಿ ಶೇಮಿಂಗ್’ ಕೂಡಾ ವೈವಾಹಿಕ ದೌರ್ಜನ್ಯ – ಕೇರಳ ಹೈಕೋರ್ಟ್

- Advertisement -
- Advertisement -

ಪತ್ನಿಯ ದೇಹದ ಬಗ್ಗೆ ಪತಿ ಅಥವಾ ಅವರ ಕುಟುಂಬದ ಸದಸ್ಯರು ಅವಮಾನಿಸುವುದು (ಬಾಡಿ ಶೇಮಿಂಗ್) ಕೂಡಾ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 498A ಅಡಿಯಲ್ಲಿ ವೈವಾಹಿಕ ದೌರ್ಜನ್ಯಕ್ಕೆ ಸಮಾನವಾಗಿರುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಪತಿ & ಸಂಬಂಧಿಕರಿಂದ

ಬಾಡಿ ಶೇಮಿಂಗ್ ಮಾಡುವ ಕ್ರಿಯೆಗಳನ್ನು IPC ಯ ಸೆಕ್ಷನ್ 498A ಯ ವಿವರಣೆ (ಎ) ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಎ. ಬದರುದ್ದೀನ್ ಅವರ ಏಕಸದಸ್ಯ ಪೀಠ ತೀರ್ಪು ನೀಡಿದೆ. ಮಹಿಳೆಯೊಬ್ಬರು ತನ್ನ ಪತಿ, ಅವನ ತಂದೆ ಮತ್ತು ಅವನ ಸಹೋದರನ ಹೆಂಡತಿಯಿಂದ ವೈವಾಹಿಕ ಕ್ರೌರ್ಯ ಅನುಭವಿಸಿದ್ದಾಗಿ ಸಲ್ಲಿಸಲಾಗಿದ್ದ ಪ್ರಕರಣದ ತೀರ್ಪಿನಲ್ಲಿ ಹೈಕೋರ್ಟ್ ಈ ಬಗ್ಗೆ ಹೇಳಿದೆ. ಪತಿ & ಸಂಬಂಧಿಕರಿಂದ

ನಾನುಗೌರಿ ವಾಟ್ಸಾಪ್ ಗುಂಪಿಗೆ ಸೇರಿ
https://chat.whatsapp.com/BWTnQl3NBxtBGD0tyXHaPm3

ಬಾಡಿ ಶೇಮಿಂಗ್ ಮಾಡುವ ಕ್ರಿಯೆಗಳನ್ನು IPC ಯ ಸೆಕ್ಷನ್ 498A ಗೆ ವಿವರಣೆ (ಎ) ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಇದು ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವ ಅಥವಾ ಗಂಭೀರವಾದ ಗಾಯ ಅಥವಾ ಜೀವಕ್ಕೆ ಅಪಾಯವನ್ನುಂಟುಮಾಡುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆಯನ್ನು ಹೊಂದಿದೆ ಎಂದು ಕೋರ್ಟ್ ಹೇಳಿದೆ.

ಈ ಅರ್ಜಿಯ ವಿರುದ್ಧ ಮತ್ತೊಬ್ಬ ಮಹಿಳೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಾನು ಸಂತ್ರಸ್ತ ಮಹಿಳೆಯ ಗಂಡನ ಅಣ್ಣನ ಹೆಂಡತಿಯಾಗಿರುವುದರಿಂದ ಸೆಕ್ಷನ್ 498ಎ ಅಡಿಯಲ್ಲಿ ‘ಸಂಬಂಧಿ’ ಪದದ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಾದವನ್ನು ಅವರು ಮಂಡಿಸಿದ್ದರು. ಆದರೆ ಕೋರ್ಟ್ ಈ ವಾದವನ್ನು ನಿರಾಕರಿಸಿದ್ದು ಅರ್ಜಿಯನ್ನು ವಜಾಗೊಳಿಸಿದೆ.

ಸಂತ್ರಸ್ತ ಮಹಿಳೆಯ ದೇಹದ ಆಕಾರಕ್ಕಾಗಿ ಅಪಹಾಸ್ಯ ಮಾಡಲಾಗುತ್ತಿತ್ತು ಮತ್ತು ಅವರ ಪತಿ ಈ ಮಹಿಳೆಗಿಂತ ಹೆಚ್ಚು ಸುಂದರ ಮತ್ತು ಹೆಚ್ಚು ಸೂಕ್ತವಾದ ಬೇರೆ ಮಹಿಳೆಯರನ್ನು ಹುಡುಕಬಹುದಿತ್ತು ಎಂದು ಹೇಳಿ ಅವಮಾನಿಸುತ್ತಿದ್ದರು ಎಂಬ ಆರೋಪವನ್ನು ನ್ಯಾಯಾಲಯವು ಎಫ್‌ಐಆರ್‌ನಲ್ಲಿ ಇರುವ ಬಗ್ಗೆ ಗಮನಿಸಿತ್ತು. ಜೊತೆಗೆ ಸಂತ್ರಸ್ತ ಮಹಿಳೆಯ ವೈದ್ಯಕೀಯ ಪದವಿಯ ಸತ್ಯಾಸತ್ಯತೆಯನ್ನು ಪ್ರಶ್ನಿಸಲಾಗುತ್ತಿತ್ತು ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ಪ್ರಾಥಮಿಕವಾಗಿ ಸೆಕ್ಷನ್ 498A ಅಡಿಯಲ್ಲಿ ವೈವಾಹಿಕ ಕ್ರೌರ್ಯದ ಅಪರಾಧವಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದ್ದು, ಸಂತ್ರಸ್ತ ಮಹಿಳೆಯ ಗಂಡನ ಅಣ್ಣನ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...