Homeಮುಖಪುಟಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ದೇಶ ವಿರೋಧಿ” ಎಂದು ಕರೆದ ಕಾಂಗ್ರೆಸ್‌ನ ದೆಹಲಿ ನಾಯಕ ಅಜಯ್ ಮಾಕನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ವಿಪಕ್ಷಗಳ ಮೈತ್ರಿಯಾದ ಇಂಡಿಯಾ ಒಕ್ಕೂಟದಿಂದ ತೆಗೆದುಹಾಕಲು ಪ್ರಯತ್ನಿಸುವುದಾಗಿ ಆಮ್ ಆದ್ಮಿ ಪಕ್ಷ ಗುರುವಾರ ಹೇಳಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಕಾಂಗ್ರೆಸ್ ನಾಯಕತ್ವವು ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಅತಿಶಿ ಆರೋಪಿಸಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಅವರು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿನ್ನೆ, ಕಾಂಗ್ರೆಸ್‌ನ ಹಿರಿಯ ನಾಯಕ ಅಜಯ್ ಮಾಕನ್ ಅವರು [ಎಎಪಿ ಅಧ್ಯಕ್ಷ] ಅರವಿಂದ್ ಕೇಜ್ರಿವಾಲ್ ದೇಶ ವಿರೋಧಿ ಎಂದು ಹೇಳಿದ್ದಾರೆ. ಅವರು ಯಾವುದಾದರೂ ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆಯೇ ಎಂದು ನಾನು ಕಾಂಗ್ರೆಸ್ ಪಕ್ಷವನ್ನು ಕೇಳಲು ಬಯಸುತ್ತೇನೆ. ಇಲ್ಲ ಅಲ್ಲವೆ? ಅಂತಹ ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಅವರನ್ನು ದೇಶ ವಿರೋಧಿ ಎಂದು ಆರೋಪಿಸುತ್ತಿದೆ” ಎಂದು ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದಾರೆ.

ಎಎಪಿ ಪಕ್ಷವು ಕಲ್ಯಾಣ ಯೋಜನೆಗಳ ಭರವಸೆಯೊಂದಿಗೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಆಡಳಿತರೂಢ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬುಧವಾರ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಕಾಂಗ್ರೆಸ್ ಯಾಕೆ ಮಾಡಿದೆ ಎಂದು ಅತಿಶಿ ಕೇಳಿದ್ದಾರೆ. “ಕಾಂಗ್ರೆಸ್ ಇದುವರೆಗೆ ಯಾವುದೇ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಿದೆಯೇ? ಬಿಜೆಪಿಯೊಂದಿಗೆ ಯಾವುದೇ ಒಪ್ಪಂದ ಮಾಡಿಲ್ಲ ಎಂದಾದರೆ ಕಾಂಗ್ರೆಸ್ ಮಾಕೆನ್ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಕ್ಷವು “ದೇಶವಿರೋಧಿ” ಎಂದಾದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಏಕೆ ಸ್ಪರ್ಧಿಸಿದ್ದೀರಿ ಎಂದು ಅತಿಶಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ, ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯಂತಹ ವಿಷಯಗಳ ಬಗ್ಗೆ ಆಮ್ ಆದ್ಮಿ ಪಕ್ಷದ ಸಾರ್ವಜನಿಕ ನಿಲುವಿನ ಹಿನ್ನೆಲೆಯಲ್ಲಿ ಮಾಕೆನ್ ಅವರು ಕೇಜ್ರಿವಾಲ್ ಅವರನ್ನು “ದೇಶವಿರೋಧಿ” ಎಂದು ಬುಧವಾರ ಕರೆದಿದ್ದಾರೆ ಎಂದು ವರದಿಯಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ “ತಪ್ಪು” ಮಾಡಿದೆ ಎಂದು ಮಾಕನ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

2013ರಲ್ಲಿ ಎಎಪಿಗೆ ನಾವು ನೀಡಿದ ಬೆಂಬಲವೆ ಇಂದಿನ ದೆಹಲಿ ಮತ್ತು ಕಾಂಗ್ರೆಸ್‌ನ ದುಸ್ಥಿತಿಗೆ ಕಾರಣ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು. “ಬಹುಶಃ ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅದೇ ತಪ್ಪು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸಿದ್ದರೂ, ಎಲ್ಲಾ ಏಳು ಸ್ಥಾನಗಳಲ್ಲಿ ಸೋತಿದ್ದವು. ಅಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿತ್ತು.

ಇದನ್ನೂ ಓದಿ: ‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...