Homeಮುಖಪುಟಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ದೇಶ ವಿರೋಧಿ” ಎಂದು ಕರೆದ ಕಾಂಗ್ರೆಸ್‌ನ ದೆಹಲಿ ನಾಯಕ ಅಜಯ್ ಮಾಕನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ವಿಪಕ್ಷಗಳ ಮೈತ್ರಿಯಾದ ಇಂಡಿಯಾ ಒಕ್ಕೂಟದಿಂದ ತೆಗೆದುಹಾಕಲು ಪ್ರಯತ್ನಿಸುವುದಾಗಿ ಆಮ್ ಆದ್ಮಿ ಪಕ್ಷ ಗುರುವಾರ ಹೇಳಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಕಾಂಗ್ರೆಸ್ ನಾಯಕತ್ವವು ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಅತಿಶಿ ಆರೋಪಿಸಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಅವರು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿನ್ನೆ, ಕಾಂಗ್ರೆಸ್‌ನ ಹಿರಿಯ ನಾಯಕ ಅಜಯ್ ಮಾಕನ್ ಅವರು [ಎಎಪಿ ಅಧ್ಯಕ್ಷ] ಅರವಿಂದ್ ಕೇಜ್ರಿವಾಲ್ ದೇಶ ವಿರೋಧಿ ಎಂದು ಹೇಳಿದ್ದಾರೆ. ಅವರು ಯಾವುದಾದರೂ ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆಯೇ ಎಂದು ನಾನು ಕಾಂಗ್ರೆಸ್ ಪಕ್ಷವನ್ನು ಕೇಳಲು ಬಯಸುತ್ತೇನೆ. ಇಲ್ಲ ಅಲ್ಲವೆ? ಅಂತಹ ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಅವರನ್ನು ದೇಶ ವಿರೋಧಿ ಎಂದು ಆರೋಪಿಸುತ್ತಿದೆ” ಎಂದು ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದಾರೆ.

ಎಎಪಿ ಪಕ್ಷವು ಕಲ್ಯಾಣ ಯೋಜನೆಗಳ ಭರವಸೆಯೊಂದಿಗೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಆಡಳಿತರೂಢ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬುಧವಾರ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಕಾಂಗ್ರೆಸ್ ಯಾಕೆ ಮಾಡಿದೆ ಎಂದು ಅತಿಶಿ ಕೇಳಿದ್ದಾರೆ. “ಕಾಂಗ್ರೆಸ್ ಇದುವರೆಗೆ ಯಾವುದೇ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಿದೆಯೇ? ಬಿಜೆಪಿಯೊಂದಿಗೆ ಯಾವುದೇ ಒಪ್ಪಂದ ಮಾಡಿಲ್ಲ ಎಂದಾದರೆ ಕಾಂಗ್ರೆಸ್ ಮಾಕೆನ್ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಕ್ಷವು “ದೇಶವಿರೋಧಿ” ಎಂದಾದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಏಕೆ ಸ್ಪರ್ಧಿಸಿದ್ದೀರಿ ಎಂದು ಅತಿಶಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ, ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯಂತಹ ವಿಷಯಗಳ ಬಗ್ಗೆ ಆಮ್ ಆದ್ಮಿ ಪಕ್ಷದ ಸಾರ್ವಜನಿಕ ನಿಲುವಿನ ಹಿನ್ನೆಲೆಯಲ್ಲಿ ಮಾಕೆನ್ ಅವರು ಕೇಜ್ರಿವಾಲ್ ಅವರನ್ನು “ದೇಶವಿರೋಧಿ” ಎಂದು ಬುಧವಾರ ಕರೆದಿದ್ದಾರೆ ಎಂದು ವರದಿಯಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ “ತಪ್ಪು” ಮಾಡಿದೆ ಎಂದು ಮಾಕನ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

2013ರಲ್ಲಿ ಎಎಪಿಗೆ ನಾವು ನೀಡಿದ ಬೆಂಬಲವೆ ಇಂದಿನ ದೆಹಲಿ ಮತ್ತು ಕಾಂಗ್ರೆಸ್‌ನ ದುಸ್ಥಿತಿಗೆ ಕಾರಣ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು. “ಬಹುಶಃ ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅದೇ ತಪ್ಪು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸಿದ್ದರೂ, ಎಲ್ಲಾ ಏಳು ಸ್ಥಾನಗಳಲ್ಲಿ ಸೋತಿದ್ದವು. ಅಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿತ್ತು.

ಇದನ್ನೂ ಓದಿ: ‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

‘ಸ್ಥಳೀಯ ನಾಯಕತ್ವ ಬೆಳೆಸುವುದರ ಜೊತೆಗೆ ಯುವ ಜನರಿಗೆ ಅವಕಾಶ..’; ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಖರ್ಗೆ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....