Homeಕರ್ನಾಟಕಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ - ಎಐಡಿಎಸ್ಓ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ – ಎಐಡಿಎಸ್ಓ ಪ್ರತಿಭಟನೆ

- Advertisement -
- Advertisement -

ಮೈಸೂರು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷಾ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಸೋಮವಾರ ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯದ ವ್ಯಾಪಾರಿ ಧೋರಣೆಯನ್ನು ಖಂಡಿಸಿರುವ ವಿದ್ಯಾರ್ಥಿ ಸಂಘಟನೆ, ವಿಶ್ವವಿದ್ಯಾಲಯವು ತನ್ನ ಆಶಯದಿಂದು ದೂರ ಸರಿದು ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ

ಎಐಡಿಎಸ್ಓ ನೇತೃತ್ವದಲ್ಲಿ ಪಿಜಿ ವಿದ್ಯಾರ್ಥಿಗಳು ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವವಿದ್ಯಾಲಯವು ಒಂದು ಸೆಮಿಸ್ಟರ್ ಪರೀಕ್ಷೆಗೆ ರೂ. 3300 ರೂ ಹೆಚ್ಚಳ ಮಾಡಿದೆ ಎಂದು ಎಐಡಿಎಸ್ಓ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, “ಪ್ರತಿಷ್ಟಿತ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಎಷ್ಟೋ ಬಡ- ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹಲವು ಕನಸುಗಳನ್ನು ಹೊತ್ತು ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ ಮೈಸೂರು ವಿವಿಯು ತನ್ನ ವ್ಯಾಪಾರಿ ಧೋರಣೆಯಿಂದಾಗಿ ಪ್ರತಿ ವರ್ಷ 10% ಪರೀಕ್ಷಾ ಶುಲ್ಕ ಹೆಚ್ಚುಸುತ್ತಿದೆ. ಪ್ರಸ್ತುತ ಮತ್ತು ಭವಿಷ್ಯದಲ್ಲಿ ಉನ್ನತ ಶಿಕ್ಷಣ ದಿಂದ ಬಡ ವಿದ್ಯಾರ್ಥಿಗಳು ದೂರ ಉಳಿಯುವುದರಲ್ಲಿ ಯಾವುದೇ ಸಂದೇಹವಿಲ್ಲ.” ಎಂದು ಹೇಳಿದ್ದಾರೆ.

“ಒಂದು ಸೆಮಿಸ್ಟರ್‌ನ ಪರೀಕ್ಷಾ ಶುಲ್ಕ 3,300 ರೂ. ದಾಟಿದೆ. ಎಷ್ಟೋ ಸರ್ಕಾರಿ ಕಾಲೇಜುಗಳಲ್ಲಿ ವಾರ್ಷಿಕ ಶುಲ್ಕವೇ 3 ಸಾವಿರ ರೂಪಾಯಿ ಇಂದ ನಾಲ್ಕು ಸಾವಿರ ಇರುತ್ತವೆ. ಇದು ಅತ್ಯಂತ ದುಬಾರಿ ಪರೀಕ್ಷಾ ಶುಲ್ಕವಾಗಿದ್ದು, ಬಹುಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಪೋಷಕರು ಆರ್ಥಿಕ ಬಿಕ್ಕಟ್ಟಿನಿಂದಾಗಿ ಶುಲ್ಕ ಪಾವತಿ ಮಾಡಲು ಅಸಾಧ್ಯವಾಗಿದೆ. ಅಲ್ಲದೇ, ವಿದ್ಯಾರ್ಥಿಗಳ ಶಿಕ್ಷಣದ ನಿರಂತರತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ” ಎಂದು ಕಿಡಿ ಕಾರಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ

ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೂ ಶಿಕ್ಷಣ ಸಿಗಬೇಕೆಂಬುದು ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆಯ ಆಶಯವಾಗಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಪರ ನಿಲುವು ತೆಗೆದುಕೊಳ್ಳದೆ, ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವರ್ಷವೂ ಹೆಚ್ಚಿಸುತ್ತಿರುವ 10% ಶುಲ್ಕವನ್ನು ಹಿಂಪಡೆಯಬೇಕು ಹಾಗೂ ಪ್ರಸ್ತುತ ಸೆಮಿಸ್ಟರ್ ಪರೀಕ್ಷಾ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...