Homeಕರ್ನಾಟಕಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ - ಎಐಡಿಎಸ್ಓ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ – ಎಐಡಿಎಸ್ಓ ಪ್ರತಿಭಟನೆ

- Advertisement -
- Advertisement -

ಮೈಸೂರು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷಾ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಸೋಮವಾರ ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯದ ವ್ಯಾಪಾರಿ ಧೋರಣೆಯನ್ನು ಖಂಡಿಸಿರುವ ವಿದ್ಯಾರ್ಥಿ ಸಂಘಟನೆ, ವಿಶ್ವವಿದ್ಯಾಲಯವು ತನ್ನ ಆಶಯದಿಂದು ದೂರ ಸರಿದು ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ

ಎಐಡಿಎಸ್ಓ ನೇತೃತ್ವದಲ್ಲಿ ಪಿಜಿ ವಿದ್ಯಾರ್ಥಿಗಳು ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವವಿದ್ಯಾಲಯವು ಒಂದು ಸೆಮಿಸ್ಟರ್ ಪರೀಕ್ಷೆಗೆ ರೂ. 3300 ರೂ ಹೆಚ್ಚಳ ಮಾಡಿದೆ ಎಂದು ಎಐಡಿಎಸ್ಓ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, “ಪ್ರತಿಷ್ಟಿತ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಎಷ್ಟೋ ಬಡ- ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹಲವು ಕನಸುಗಳನ್ನು ಹೊತ್ತು ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ ಮೈಸೂರು ವಿವಿಯು ತನ್ನ ವ್ಯಾಪಾರಿ ಧೋರಣೆಯಿಂದಾಗಿ ಪ್ರತಿ ವರ್ಷ 10% ಪರೀಕ್ಷಾ ಶುಲ್ಕ ಹೆಚ್ಚುಸುತ್ತಿದೆ. ಪ್ರಸ್ತುತ ಮತ್ತು ಭವಿಷ್ಯದಲ್ಲಿ ಉನ್ನತ ಶಿಕ್ಷಣ ದಿಂದ ಬಡ ವಿದ್ಯಾರ್ಥಿಗಳು ದೂರ ಉಳಿಯುವುದರಲ್ಲಿ ಯಾವುದೇ ಸಂದೇಹವಿಲ್ಲ.” ಎಂದು ಹೇಳಿದ್ದಾರೆ.

“ಒಂದು ಸೆಮಿಸ್ಟರ್‌ನ ಪರೀಕ್ಷಾ ಶುಲ್ಕ 3,300 ರೂ. ದಾಟಿದೆ. ಎಷ್ಟೋ ಸರ್ಕಾರಿ ಕಾಲೇಜುಗಳಲ್ಲಿ ವಾರ್ಷಿಕ ಶುಲ್ಕವೇ 3 ಸಾವಿರ ರೂಪಾಯಿ ಇಂದ ನಾಲ್ಕು ಸಾವಿರ ಇರುತ್ತವೆ. ಇದು ಅತ್ಯಂತ ದುಬಾರಿ ಪರೀಕ್ಷಾ ಶುಲ್ಕವಾಗಿದ್ದು, ಬಹುಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಪೋಷಕರು ಆರ್ಥಿಕ ಬಿಕ್ಕಟ್ಟಿನಿಂದಾಗಿ ಶುಲ್ಕ ಪಾವತಿ ಮಾಡಲು ಅಸಾಧ್ಯವಾಗಿದೆ. ಅಲ್ಲದೇ, ವಿದ್ಯಾರ್ಥಿಗಳ ಶಿಕ್ಷಣದ ನಿರಂತರತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ” ಎಂದು ಕಿಡಿ ಕಾರಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ

ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೂ ಶಿಕ್ಷಣ ಸಿಗಬೇಕೆಂಬುದು ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆಯ ಆಶಯವಾಗಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಪರ ನಿಲುವು ತೆಗೆದುಕೊಳ್ಳದೆ, ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವರ್ಷವೂ ಹೆಚ್ಚಿಸುತ್ತಿರುವ 10% ಶುಲ್ಕವನ್ನು ಹಿಂಪಡೆಯಬೇಕು ಹಾಗೂ ಪ್ರಸ್ತುತ ಸೆಮಿಸ್ಟರ್ ಪರೀಕ್ಷಾ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...