Homeಮುಖಪುಟಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

ಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿರುವ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳಿಂದ ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ ಮತ್ತು ಆವರ್ತಕ ಕೋಷ್ಟಕವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಇದು ಕೋವಿಡ್-19 ಸಮಯದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಪರಿಷ್ಕರಿಸುವ ಭಾಗವಾಗಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ಆವರ್ತಕ ಕೋಷ್ಟಕ ಹಾಗೂ ಡಾರ್ವಿನ್‌ನ ವಿಕಾಸದ ಸಿದ್ಧಾಂತವನ್ನು ಕೈಬಿಟ್ಟಿದೆ ಎಂದು ಈ ವರ್ಷದ ಆರಂಭದಲ್ಲಿ ವರದಿಗಳು ಬಂದಿದ್ದವು.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

4000ಕ್ಕೂ ಅಧಿಕ ಸಂಶೋಧಕರು ಮತ್ತು ವಿಜ್ಞಾನಿಗಳು ಅಂಶಗಳನ್ನು ಪುನಃ ಪಠ್ಯದಲ್ಲಿ ಸೇರಿಸಲು ಅಧಿಕಾರಿಗಳನ್ನು ಒತ್ತಾಯಿಸಿ ಏಪ್ರಿಲ್‌ನಲ್ಲಿ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದರು.

”ಚಾರ್ಲ್ಸ್ ಡಾರ್ವಿನ್ ಅವರ ಜೈವಿಕ ವಿಕಾಸದ ಸಿದ್ಧಾಂತವನ್ನು ಕೈಬಿಡಲಾಗಿದೆ ಎಂದು ದೇಶದ ವೈಜ್ಞಾನಿಕ ಸಮುದಾಯವು ಭಾರೀ ನಿರಾಶೆಗೊಂಡಿದೆ” ಎಂದು ಬ್ರೇಕ್‌ಥ್ರೂ ಸೈನ್ಸ್ ಸೊಸೈಟಿ ಸೈನ್ಸ್ ಉಲ್ಲೇಖಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 21ರಂದು ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಪ್ರಧಾನ್, ”ಈ ರೀತಿಯ ಏನೂ ಸಂಭವಿಸಿಲ್ಲ” ಎಂದು ಹೇಳಿದ್ದಾರೆ.

”COVID-19 ಸಮಯದಲ್ಲಿ, ಕೆಲವು ಪುನರಾವರ್ತಿತ ಭಾಗಗಳನ್ನು ಕಡಿಮೆ ಮಾಡಿ ಆ ನಂತರ ಮತ್ತೆ ಸೇರಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ 8 ಮತ್ತು 9 ನೇ ತರಗತಿಗಳಲ್ಲಿನ ವಿಷಯವು ಬದಲಾಗಿಲ್ಲ. 10ನೇ ತರಗತಿಯ ಪುಸ್ತಕದಲ್ಲಿ, ವಿಕಾಸದ ಸಿದ್ಧಾಂತಕ್ಕೆ ಸಂಬಂಧಿಸಿದ ಕೆಲವು ಭಾಗವನ್ನು ಕಳೆದ ವರ್ಷ ಬಿಟ್ಟುಬಿಡಲಾಗಿದೆ ಮತ್ತು ಇದು 11 ಮತ್ತು 12 ನೇ ತರಗತಿಗಳಲ್ಲಿ ಬದಲಾಗಿಲ್ಲ” ಎಂದು ಸಚಿವರು ಹೇಳಿದರು.

9, 11 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕವನ್ನು ಕಲಿಸಲಾಗುವುದು. 10 ನೇ ತರಗತಿಯ ನಂತರ ವಿಜ್ಞಾನವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಡಾರ್ವಿನ್ ಸಿದ್ಧಾಂತವನ್ನು ಕಲಿಸಲಾಗುವುದಿಲ್ಲ ಎಂದು ದೇವೇಂದ್ರ ಪ್ರಧಾನ್ ಅವರೇ ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...