Homeಮುಖಪುಟಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

ಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿರುವ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳಿಂದ ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ ಮತ್ತು ಆವರ್ತಕ ಕೋಷ್ಟಕವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಇದು ಕೋವಿಡ್-19 ಸಮಯದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಪರಿಷ್ಕರಿಸುವ ಭಾಗವಾಗಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ಆವರ್ತಕ ಕೋಷ್ಟಕ ಹಾಗೂ ಡಾರ್ವಿನ್‌ನ ವಿಕಾಸದ ಸಿದ್ಧಾಂತವನ್ನು ಕೈಬಿಟ್ಟಿದೆ ಎಂದು ಈ ವರ್ಷದ ಆರಂಭದಲ್ಲಿ ವರದಿಗಳು ಬಂದಿದ್ದವು.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

4000ಕ್ಕೂ ಅಧಿಕ ಸಂಶೋಧಕರು ಮತ್ತು ವಿಜ್ಞಾನಿಗಳು ಅಂಶಗಳನ್ನು ಪುನಃ ಪಠ್ಯದಲ್ಲಿ ಸೇರಿಸಲು ಅಧಿಕಾರಿಗಳನ್ನು ಒತ್ತಾಯಿಸಿ ಏಪ್ರಿಲ್‌ನಲ್ಲಿ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದರು.

”ಚಾರ್ಲ್ಸ್ ಡಾರ್ವಿನ್ ಅವರ ಜೈವಿಕ ವಿಕಾಸದ ಸಿದ್ಧಾಂತವನ್ನು ಕೈಬಿಡಲಾಗಿದೆ ಎಂದು ದೇಶದ ವೈಜ್ಞಾನಿಕ ಸಮುದಾಯವು ಭಾರೀ ನಿರಾಶೆಗೊಂಡಿದೆ” ಎಂದು ಬ್ರೇಕ್‌ಥ್ರೂ ಸೈನ್ಸ್ ಸೊಸೈಟಿ ಸೈನ್ಸ್ ಉಲ್ಲೇಖಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 21ರಂದು ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಪ್ರಧಾನ್, ”ಈ ರೀತಿಯ ಏನೂ ಸಂಭವಿಸಿಲ್ಲ” ಎಂದು ಹೇಳಿದ್ದಾರೆ.

”COVID-19 ಸಮಯದಲ್ಲಿ, ಕೆಲವು ಪುನರಾವರ್ತಿತ ಭಾಗಗಳನ್ನು ಕಡಿಮೆ ಮಾಡಿ ಆ ನಂತರ ಮತ್ತೆ ಸೇರಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ 8 ಮತ್ತು 9 ನೇ ತರಗತಿಗಳಲ್ಲಿನ ವಿಷಯವು ಬದಲಾಗಿಲ್ಲ. 10ನೇ ತರಗತಿಯ ಪುಸ್ತಕದಲ್ಲಿ, ವಿಕಾಸದ ಸಿದ್ಧಾಂತಕ್ಕೆ ಸಂಬಂಧಿಸಿದ ಕೆಲವು ಭಾಗವನ್ನು ಕಳೆದ ವರ್ಷ ಬಿಟ್ಟುಬಿಡಲಾಗಿದೆ ಮತ್ತು ಇದು 11 ಮತ್ತು 12 ನೇ ತರಗತಿಗಳಲ್ಲಿ ಬದಲಾಗಿಲ್ಲ” ಎಂದು ಸಚಿವರು ಹೇಳಿದರು.

9, 11 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕವನ್ನು ಕಲಿಸಲಾಗುವುದು. 10 ನೇ ತರಗತಿಯ ನಂತರ ವಿಜ್ಞಾನವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಡಾರ್ವಿನ್ ಸಿದ್ಧಾಂತವನ್ನು ಕಲಿಸಲಾಗುವುದಿಲ್ಲ ಎಂದು ದೇವೇಂದ್ರ ಪ್ರಧಾನ್ ಅವರೇ ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...