Homeಮುಖಪುಟಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

ಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿರುವ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳಿಂದ ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ ಮತ್ತು ಆವರ್ತಕ ಕೋಷ್ಟಕವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಇದು ಕೋವಿಡ್-19 ಸಮಯದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಪರಿಷ್ಕರಿಸುವ ಭಾಗವಾಗಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ಆವರ್ತಕ ಕೋಷ್ಟಕ ಹಾಗೂ ಡಾರ್ವಿನ್‌ನ ವಿಕಾಸದ ಸಿದ್ಧಾಂತವನ್ನು ಕೈಬಿಟ್ಟಿದೆ ಎಂದು ಈ ವರ್ಷದ ಆರಂಭದಲ್ಲಿ ವರದಿಗಳು ಬಂದಿದ್ದವು.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

4000ಕ್ಕೂ ಅಧಿಕ ಸಂಶೋಧಕರು ಮತ್ತು ವಿಜ್ಞಾನಿಗಳು ಅಂಶಗಳನ್ನು ಪುನಃ ಪಠ್ಯದಲ್ಲಿ ಸೇರಿಸಲು ಅಧಿಕಾರಿಗಳನ್ನು ಒತ್ತಾಯಿಸಿ ಏಪ್ರಿಲ್‌ನಲ್ಲಿ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದರು.

”ಚಾರ್ಲ್ಸ್ ಡಾರ್ವಿನ್ ಅವರ ಜೈವಿಕ ವಿಕಾಸದ ಸಿದ್ಧಾಂತವನ್ನು ಕೈಬಿಡಲಾಗಿದೆ ಎಂದು ದೇಶದ ವೈಜ್ಞಾನಿಕ ಸಮುದಾಯವು ಭಾರೀ ನಿರಾಶೆಗೊಂಡಿದೆ” ಎಂದು ಬ್ರೇಕ್‌ಥ್ರೂ ಸೈನ್ಸ್ ಸೊಸೈಟಿ ಸೈನ್ಸ್ ಉಲ್ಲೇಖಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 21ರಂದು ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಪ್ರಧಾನ್, ”ಈ ರೀತಿಯ ಏನೂ ಸಂಭವಿಸಿಲ್ಲ” ಎಂದು ಹೇಳಿದ್ದಾರೆ.

”COVID-19 ಸಮಯದಲ್ಲಿ, ಕೆಲವು ಪುನರಾವರ್ತಿತ ಭಾಗಗಳನ್ನು ಕಡಿಮೆ ಮಾಡಿ ಆ ನಂತರ ಮತ್ತೆ ಸೇರಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ 8 ಮತ್ತು 9 ನೇ ತರಗತಿಗಳಲ್ಲಿನ ವಿಷಯವು ಬದಲಾಗಿಲ್ಲ. 10ನೇ ತರಗತಿಯ ಪುಸ್ತಕದಲ್ಲಿ, ವಿಕಾಸದ ಸಿದ್ಧಾಂತಕ್ಕೆ ಸಂಬಂಧಿಸಿದ ಕೆಲವು ಭಾಗವನ್ನು ಕಳೆದ ವರ್ಷ ಬಿಟ್ಟುಬಿಡಲಾಗಿದೆ ಮತ್ತು ಇದು 11 ಮತ್ತು 12 ನೇ ತರಗತಿಗಳಲ್ಲಿ ಬದಲಾಗಿಲ್ಲ” ಎಂದು ಸಚಿವರು ಹೇಳಿದರು.

9, 11 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕವನ್ನು ಕಲಿಸಲಾಗುವುದು. 10 ನೇ ತರಗತಿಯ ನಂತರ ವಿಜ್ಞಾನವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಡಾರ್ವಿನ್ ಸಿದ್ಧಾಂತವನ್ನು ಕಲಿಸಲಾಗುವುದಿಲ್ಲ ಎಂದು ದೇವೇಂದ್ರ ಪ್ರಧಾನ್ ಅವರೇ ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...