Homeಮುಖಪುಟಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

ಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿರುವ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳಿಂದ ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ ಮತ್ತು ಆವರ್ತಕ ಕೋಷ್ಟಕವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಇದು ಕೋವಿಡ್-19 ಸಮಯದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಪರಿಷ್ಕರಿಸುವ ಭಾಗವಾಗಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ಆವರ್ತಕ ಕೋಷ್ಟಕ ಹಾಗೂ ಡಾರ್ವಿನ್‌ನ ವಿಕಾಸದ ಸಿದ್ಧಾಂತವನ್ನು ಕೈಬಿಟ್ಟಿದೆ ಎಂದು ಈ ವರ್ಷದ ಆರಂಭದಲ್ಲಿ ವರದಿಗಳು ಬಂದಿದ್ದವು.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

4000ಕ್ಕೂ ಅಧಿಕ ಸಂಶೋಧಕರು ಮತ್ತು ವಿಜ್ಞಾನಿಗಳು ಅಂಶಗಳನ್ನು ಪುನಃ ಪಠ್ಯದಲ್ಲಿ ಸೇರಿಸಲು ಅಧಿಕಾರಿಗಳನ್ನು ಒತ್ತಾಯಿಸಿ ಏಪ್ರಿಲ್‌ನಲ್ಲಿ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದರು.

”ಚಾರ್ಲ್ಸ್ ಡಾರ್ವಿನ್ ಅವರ ಜೈವಿಕ ವಿಕಾಸದ ಸಿದ್ಧಾಂತವನ್ನು ಕೈಬಿಡಲಾಗಿದೆ ಎಂದು ದೇಶದ ವೈಜ್ಞಾನಿಕ ಸಮುದಾಯವು ಭಾರೀ ನಿರಾಶೆಗೊಂಡಿದೆ” ಎಂದು ಬ್ರೇಕ್‌ಥ್ರೂ ಸೈನ್ಸ್ ಸೊಸೈಟಿ ಸೈನ್ಸ್ ಉಲ್ಲೇಖಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 21ರಂದು ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಪ್ರಧಾನ್, ”ಈ ರೀತಿಯ ಏನೂ ಸಂಭವಿಸಿಲ್ಲ” ಎಂದು ಹೇಳಿದ್ದಾರೆ.

”COVID-19 ಸಮಯದಲ್ಲಿ, ಕೆಲವು ಪುನರಾವರ್ತಿತ ಭಾಗಗಳನ್ನು ಕಡಿಮೆ ಮಾಡಿ ಆ ನಂತರ ಮತ್ತೆ ಸೇರಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ 8 ಮತ್ತು 9 ನೇ ತರಗತಿಗಳಲ್ಲಿನ ವಿಷಯವು ಬದಲಾಗಿಲ್ಲ. 10ನೇ ತರಗತಿಯ ಪುಸ್ತಕದಲ್ಲಿ, ವಿಕಾಸದ ಸಿದ್ಧಾಂತಕ್ಕೆ ಸಂಬಂಧಿಸಿದ ಕೆಲವು ಭಾಗವನ್ನು ಕಳೆದ ವರ್ಷ ಬಿಟ್ಟುಬಿಡಲಾಗಿದೆ ಮತ್ತು ಇದು 11 ಮತ್ತು 12 ನೇ ತರಗತಿಗಳಲ್ಲಿ ಬದಲಾಗಿಲ್ಲ” ಎಂದು ಸಚಿವರು ಹೇಳಿದರು.

9, 11 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕವನ್ನು ಕಲಿಸಲಾಗುವುದು. 10 ನೇ ತರಗತಿಯ ನಂತರ ವಿಜ್ಞಾನವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಡಾರ್ವಿನ್ ಸಿದ್ಧಾಂತವನ್ನು ಕಲಿಸಲಾಗುವುದಿಲ್ಲ ಎಂದು ದೇವೇಂದ್ರ ಪ್ರಧಾನ್ ಅವರೇ ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...