Homeಮುಖಪುಟಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

ಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿರುವ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳಿಂದ ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ ಮತ್ತು ಆವರ್ತಕ ಕೋಷ್ಟಕವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಇದು ಕೋವಿಡ್-19 ಸಮಯದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಪರಿಷ್ಕರಿಸುವ ಭಾಗವಾಗಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ಆವರ್ತಕ ಕೋಷ್ಟಕ ಹಾಗೂ ಡಾರ್ವಿನ್‌ನ ವಿಕಾಸದ ಸಿದ್ಧಾಂತವನ್ನು ಕೈಬಿಟ್ಟಿದೆ ಎಂದು ಈ ವರ್ಷದ ಆರಂಭದಲ್ಲಿ ವರದಿಗಳು ಬಂದಿದ್ದವು.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

4000ಕ್ಕೂ ಅಧಿಕ ಸಂಶೋಧಕರು ಮತ್ತು ವಿಜ್ಞಾನಿಗಳು ಅಂಶಗಳನ್ನು ಪುನಃ ಪಠ್ಯದಲ್ಲಿ ಸೇರಿಸಲು ಅಧಿಕಾರಿಗಳನ್ನು ಒತ್ತಾಯಿಸಿ ಏಪ್ರಿಲ್‌ನಲ್ಲಿ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದರು.

”ಚಾರ್ಲ್ಸ್ ಡಾರ್ವಿನ್ ಅವರ ಜೈವಿಕ ವಿಕಾಸದ ಸಿದ್ಧಾಂತವನ್ನು ಕೈಬಿಡಲಾಗಿದೆ ಎಂದು ದೇಶದ ವೈಜ್ಞಾನಿಕ ಸಮುದಾಯವು ಭಾರೀ ನಿರಾಶೆಗೊಂಡಿದೆ” ಎಂದು ಬ್ರೇಕ್‌ಥ್ರೂ ಸೈನ್ಸ್ ಸೊಸೈಟಿ ಸೈನ್ಸ್ ಉಲ್ಲೇಖಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 21ರಂದು ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಪ್ರಧಾನ್, ”ಈ ರೀತಿಯ ಏನೂ ಸಂಭವಿಸಿಲ್ಲ” ಎಂದು ಹೇಳಿದ್ದಾರೆ.

”COVID-19 ಸಮಯದಲ್ಲಿ, ಕೆಲವು ಪುನರಾವರ್ತಿತ ಭಾಗಗಳನ್ನು ಕಡಿಮೆ ಮಾಡಿ ಆ ನಂತರ ಮತ್ತೆ ಸೇರಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ 8 ಮತ್ತು 9 ನೇ ತರಗತಿಗಳಲ್ಲಿನ ವಿಷಯವು ಬದಲಾಗಿಲ್ಲ. 10ನೇ ತರಗತಿಯ ಪುಸ್ತಕದಲ್ಲಿ, ವಿಕಾಸದ ಸಿದ್ಧಾಂತಕ್ಕೆ ಸಂಬಂಧಿಸಿದ ಕೆಲವು ಭಾಗವನ್ನು ಕಳೆದ ವರ್ಷ ಬಿಟ್ಟುಬಿಡಲಾಗಿದೆ ಮತ್ತು ಇದು 11 ಮತ್ತು 12 ನೇ ತರಗತಿಗಳಲ್ಲಿ ಬದಲಾಗಿಲ್ಲ” ಎಂದು ಸಚಿವರು ಹೇಳಿದರು.

9, 11 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕವನ್ನು ಕಲಿಸಲಾಗುವುದು. 10 ನೇ ತರಗತಿಯ ನಂತರ ವಿಜ್ಞಾನವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಡಾರ್ವಿನ್ ಸಿದ್ಧಾಂತವನ್ನು ಕಲಿಸಲಾಗುವುದಿಲ್ಲ ಎಂದು ದೇವೇಂದ್ರ ಪ್ರಧಾನ್ ಅವರೇ ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...